Training for Competitive Examination: Dharwad Model Training Begins

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ರೈತರೇ ಕೊಬ್ಬಿದ ದನಗಳನ್ನು ಪಳಗಿಸಿ ಕೃಷಿ ಚಟುವಟಿಕೆಗೆ ಬಳಸುತ್ತಾರೆ. ಇನ್ನು ಕಲಿತವರನ್ನು ಸುಧಾರಿಸುವ ಕಾರ್ಯ ಶಿಕ್ಷಕರಿಂದ ಏಕೆ ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಚ್.ಬಿ.ವಾಲೀಕಾರ ಹೇಳಿದರು.

ಪಟ್ಟಣದ ಅಭ್ಯುದಯ ಪದವಿ ಕಾಲೇಜಿನಲ್ಲಿ ಸಂಯೋಜಿತ ಪದವಿಗಳ ಕುರಿತ ಎರಡು ದಿನದ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಡಿಗ್ರಿಗಳೆಂದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರವೇಶ ಪತ್ರದಂತಿದ್ದು ನಾವೆಲ್ಲ ಶಿಕ್ಷಕರ ಬೆನ್ನು ಚಪ್ಪರಿಸುವ ಕೆಲಸ ಮಾಡಬೇಕು. ಮುದ್ದೇಬಿಹಾಳದ ಅಭ್ಯುದಯ ಪದವಿ ಕಾಲೇಜಿನಲ್ಲಿ ಧಾರವಾಡದಲ್ಲಿ ನೀಡುವ ಸ್ಪರ್ಧಾತ್ಮಕ ತರಬೇತಿ ಕೇಂದ್ರದಿಂದ ನೀಡಲಾಗುವ ತರಬೇತಿಯನ್ನು ಹೈಬ್ರಿಡ್ ಕ್ಲಾಸ್ ರೂಂ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ಅಭ್ಯುದಯ ಪದವಿ ಕಾಲೇಜಿನ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಬಹುದೊಡ್ಡ ಹೆಸರು ಮಾಡಿರುವ ಮಾಜಿ ಕುಲಪತಿಗಳಾದ ಎಚ್.ಬಿ.ವಾಲೀಕಾರ ಅವರ ಮಾರ್ಗದರ್ಶನದಲ್ಲಿ ಐಎಎಸ್, ಕೆಎಎಸ್, ಪಿಎಸ್‌ಐ, ಪಿಡಿಒ ಮತ್ತಿತರರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಧಾರವಾಡ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಿದ್ದಣ್ಣ ದಳವಾಯಿ ಉಪನ್ಯಾಸ ನೀಡಿ, ರಾಜ್ಯದಲ್ಲಿ 2.80 ಲಕ್ಷ ಹುದ್ದೆಗಳು ಖಾಲಿ ಇದ್ದು 80 ಸಾವಿರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಇನ್ನುಳಿದ ಹುದ್ದೆಗಳ ನೇಮಕಕ್ಕೆ ಸದ್ಯಕ್ಕೆ ರಾಜ್ಯ ಸರ್ಕಾರದಿಂದ ತಡೆ ನೀಡಿದ್ದು ನ್ಯಾ. ನಾಗಮೋಹನದಾಸ್ ವರದಿ ಬಳಿಕ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದ್ದಾರೆ. ಎಲ್ಲರಿಗೂ ಸರ್ಕಾರಿ ಹುದ್ದೆ ದೊರೆಯುವುದಿಲ್ಲ.
ಆದರೆ ಪರಿಶ್ರಮದಿಂದ ಪ್ರಯತ್ನಿಸಿದವರಿಗೆ ಸರ್ಕಾರಿ ಹುದ್ದೆ ದೊರೆಯುವುದು ಕಷ್ಟವೇನಲ್ಲ. ಮುಂಬರುವ ದಿನಗಳಲ್ಲಿ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪರ್ವ ಆರಂಭವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಆರ್. ಎಸ್. ಜಡಿ, ಪಿಯು ಕಾಲೇಜಿನ ಪ್ರಾಚಾರ್ಯ ಎಂ. ಎಂ. ಧನ್ನೂರ, ಧಾರವಾಡ ಎಂ. ಡಿ. ಆರ್. ಎಸ್‌ನ ಶೇಖಪ್ಪ ಮೇಟಿ ಇದ್ದರು. ಬಿ. ಜಿ. ಬಿರಾದಾರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕ ಗಳಿಸಿದ ಶರಣಬಸ್ಸು ವಣಕಿಹಾಳ, ಐಶ್ವರ್ಯಾ ಪೂಜಾರಿ,ವಾಣಿಜ್ಯ ವಿಭಾಗದಲ್ಲಿ ಕಾವ್ಯಶ್ರೀ ಬಿರಾದಾರ, ಬಿ.ಎಸ್ಸಿ ಅಗ್ರಿ ಸೀಟು ಪಡೆದುಕೊಂಡ ಮಾಣಿಕ್ಯ ಲಮಾಣಿ, ರತಿಕಾಂತ ಆಕಳವಾಡಿ, ನೀಟ್ ಪರೀಕ್ಷೆಯಲ್ಲಿ 627ನೇ ರ‍್ಯಾಂಕ್ ಪಡೆದ ಮಹಾದೇವಿ ಢವಳಗಿ ಅವರನ್ನು ಸನ್ಮಾನಿಸಲಾಯಿತು.

ಈ ಭಾಗದಲ್ಲಿ ಮಾತೋಶ್ರೀ ಗಂಗಮ್ಮ ಚಿನಿವಾರ ಅವರು ಶಿಕ್ಷಣಕ್ಕೆ ಜಮೀನು ದಾನ ಮಾಡಿದ್ದರಿಂದಲೇ ನಮ್ಮಂತಹ ಸಾವಿರಾರು ಜನ ಉನ್ನತ ಹುದ್ದೆಗಳಲ್ಲಿ ಏರುವಂತಾಯಿತು. ಚಿನಿವಾರ ಗಂಗಮ್ಮನವರು ಯಾರ ಬಳಿಯೂ ಕೈಯೊಡ್ಡದೇ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಿದ್ದಾರೆ. ಅದರಂತೆ ಈಗ ಮಲ್ಲಿಕಾರ್ಜುನ ಮದರಿ ಯಾರ ಬಳಿಯೂ ಕೈಯೊಡ್ಡದೇ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ತೋರುತ್ತಿರುವುದು ಈ ಭಾಗದ ಬಡವರಿಗೆ ಬೆಳಕಾಗಿದೆ.
–ಎಚ್.ಬಿ.ವಾಲೀಕಾರ, ಕವಿವಿ ಮಾಜಿ ಕುಲಪತಿ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ