Fatal attack on college lecturer

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮನೆ ಬಾಡಿಗೆ ಕೇಳುವ ನೆಪದಲ್ಲಿ ಮನೆಗೆ ಬಂದ ಆಗುಂತಕನೊಬ್ಬ ಕಾಲೇಜು ಉಪನ್ಯಾಸಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆಗೈದು ತಡೆಯಲು ಹೋದ ಉಪನ್ಯಾಸಕಿ ತಾಯಿಯನ್ನು ಎಳೆದಾಡಿದ ಘಟನೆ ಪಟ್ಟಣದ ಸಾಯಿ ನಗರದ ಹೇಮರಡ್ಡಿ ದೇವಸ್ಥಾನದ ಹಿಂಭಾಗದಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.

ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಉಪನ್ಯಾಸಕಿ ಸುಮಂಗಲಾ ಅಂಗಡಿ(46) ಆಗುಂತಕ ವ್ಯಕ್ತಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರು. ಪಿಎಸ್‌ಐ ಸಂಜಯ ತಿಪರೆಡ್ಡಿ ಅವರ ಎದುರಿಗೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅಂಬ್ಯುಲೆನ್ಸ್ನಲ್ಲಿ ಬಾಗಲಕೋಟ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಘಟನೆಯ ಸಂದರ್ಭವನ್ನು ವಿವರಿಸಿದ ಉಪನ್ಯಾಸಕಿ ಸುಮಂಗಲಾ, ಎರಡು ದಿನದ ಹಿಂದೆ ವ್ಯಕ್ತಿಯೊಬ್ಬ ಮನೆ ಬಾಡಿಗೆ ಕೇಳಿಕೊಂಡು ಬಂದಿದ್ದ. ಕೊಠಡಿ ಖಾಲಿ ಇದೆ ಎಂದು ತಿಳಿಸಿದ್ದೇವು. ಶನಿವಾರ ಮದ್ಯಾಹ್ನದ ಹೊತ್ತಿಗೆ ಮನೆ ಬಾಡಿಗೆ ಕೇಳುವ ನೆಪದಲ್ಲಿ ಹಿಂದಿ ಭಾಷೆಯನ್ನು ಮಾತನಾಡುತ್ತಿದ್ದ ಆತನಿಗೆ ಮನೆಯ ಮೇಲಿನ ಮಹಡಿ ಖಾಲಿ ಇದ್ದು ಬಾಡಿಗೆಗೆ ನೋಡುವಂತೆ ತಿಳಿಸಿದೆವು. ಆತ ಮನೆಯ ಫೋಟೋ ತೆಗೆದುಕೊಳ್ಳುವುದಾಗಿ ಹೇಳಿ ಮೊದಲು ಮನೆಯ ಪೂರ್ತಿ ಫೋಟೋ ತಗೆದುಕೊಂಡು ನಂತರ ಬಾಡಿಗೆ ಇರುವ ಕೊಠಡಿಯ ಫೋಟೋ ಬೇಕು ಎಂದ. ಅದಕ್ಕೆ ನಾವು ಕೊಠಡಿಯ ಫೋಟೋ ಯಾವುದಕ್ಕೆ ಎಂದು ಪ್ರಶ್ನಿಸಿದಾಗ ತಮ್ಮ ಕಂಪನಿಯವರಿಗೆ ತೋರಿಸಬೇಕು ಎಂದು ತಿಳಿಸಿದ. ಮೇಲಿನ ಮಹಡಿ ಕೊಠಡಿಗೆ ಹೋಗುತ್ತಿದ್ದಂತೆ ಏಕಾಏಕಿ ನನ್ನ ಮುಖಕ್ಕೆ ಬಲವಾಗಿ ಗುದ್ದಲು ಶುರು ಮಾಡಿದ. ಇದರಿಂದ ಗಾಬರಿಯಾಗಿ ನಾನು ನನ್ನ ತಾಯಿಯನ್ನು ಕೂಗಿದಾಗ ಅವರು ಓಡಿ ಬಂದು ನೋಡುವಷ್ಟರಲ್ಲಿ ತಾಯಿಯವರಿಗೂ ಆತ ಹೊಡೆದಿದ್ದಾನೆ. ಅವರ ಕನ್ನಡಕ ನೆಲಕ್ಕೆ ಬಿದ್ದು ಒಡೆದಿದ್ದು ಅವರು ಹೊರಗೆ ಹೋಗಿ ಓಣಿಯ ಜನರನ್ನು ಕರೆಯಲು ಯತ್ನಿಸುತ್ತಾರೆ ಎಂದು ಅವರನ್ನು ಎಳೆದಾಡಿ ಬಟ್ಟೆ ಹರಿದಿದ್ದಾನೆ. ಘಟನೆಯಿಂದ ನಮಗೆ ತುಂಬಾ ಗಾಬರಿಯಾಗಿದ್ದು ಆತನನ್ನು ಬಿಡಬೇಡಿ ಎಂದು ಹೇಳಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ಹೆಚ್ಚಿನ ವಿಚಾರಣೆ ಬಳಿಕವೇ ಆತ ಏಕೆ ಹೋಗಿದ್ದ ಎಂಬ ಮಾಹಿತಿ ತಿಳಿದು ಬರಲಿದೆ.

ಹಾಡಹಗಲೇ ನಡೆದ ಘಟನೆಯಿಂದ ಪಟ್ಟಣದ ಜನತೆ ಆತಂಕಗೊಂಡಿದ್ದು ಮನೆಯಲ್ಲಿ ಒಂಟಿ ಮಹಿಳೆಯರು ಇದ್ದಾಗ ಘಟನೆ ನಡೆದಿರುವುದು ಜನರನ್ನು ಭಯಭೀತರನ್ನಾಗಿಸಿದೆ. ಗಾಯಗೊಂಡಿದ್ದ ಉಪನ್ಯಾಸಕಿ ಸುಮಂಗಲಾ ಹಾಗೂ ಅವರ ತಾಯಿ ವಿಜಯಲಕ್ಷ್ಮಿ ಅಂಗಡಿ ಅವರನ್ನು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾಲೇಜು ಆಡಳಿತ ಮಂಡಳಿ ಪದಾಧಿಕಾರಿಗಳಿಂದ ಸಾಂತ್ವನ : ಘಟನೆಯ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಸರಕಾರಿ ಆಸ್ಪತ್ರೆಗೆ ಆಗಮಿಸಿದ ಎಂ.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ, ಪ್ರಾಚಾರ್ಯ ಎಸ್.ಎನ್.ಪೊಲೇಶಿ, ಉಪನ್ಯಾಸಕ ರಹೀಂ ಮುಲ್ಲಾ, ಸಿಬ್ಬಂದಿ ಬಾಬು ಚವ್ಹಾಣ ಉಪನ್ಯಾಸಕಿ ಸುಮಂಗಲಾ ಅಂಗಡಿ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಅಲ್ಲದೇ ತಕ್ಷಣ ಅವರನ್ನು ಬಾಗಲಕೋಟ ಜಿಲ್ಲಾಸ್ಪತ್ರೆಗೆ ಕಳಿಸಲು ನೆರವು ನೀಡಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ