Fatal attack on college lecturer

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮನೆ ಬಾಡಿಗೆ ಕೇಳುವ ನೆಪದಲ್ಲಿ ಮನೆಗೆ ಬಂದ ಆಗುಂತಕನೊಬ್ಬ ಕಾಲೇಜು ಉಪನ್ಯಾಸಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆಗೈದು ತಡೆಯಲು ಹೋದ ಉಪನ್ಯಾಸಕಿ ತಾಯಿಯನ್ನು ಎಳೆದಾಡಿದ ಘಟನೆ ಪಟ್ಟಣದ ಸಾಯಿ ನಗರದ ಹೇಮರಡ್ಡಿ ದೇವಸ್ಥಾನದ ಹಿಂಭಾಗದಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.

ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಉಪನ್ಯಾಸಕಿ ಸುಮಂಗಲಾ ಅಂಗಡಿ(46) ಆಗುಂತಕ ವ್ಯಕ್ತಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರು. ಪಿಎಸ್‌ಐ ಸಂಜಯ ತಿಪರೆಡ್ಡಿ ಅವರ ಎದುರಿಗೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅಂಬ್ಯುಲೆನ್ಸ್ನಲ್ಲಿ ಬಾಗಲಕೋಟ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಘಟನೆಯ ಸಂದರ್ಭವನ್ನು ವಿವರಿಸಿದ ಉಪನ್ಯಾಸಕಿ ಸುಮಂಗಲಾ, ಎರಡು ದಿನದ ಹಿಂದೆ ವ್ಯಕ್ತಿಯೊಬ್ಬ ಮನೆ ಬಾಡಿಗೆ ಕೇಳಿಕೊಂಡು ಬಂದಿದ್ದ. ಕೊಠಡಿ ಖಾಲಿ ಇದೆ ಎಂದು ತಿಳಿಸಿದ್ದೇವು. ಶನಿವಾರ ಮದ್ಯಾಹ್ನದ ಹೊತ್ತಿಗೆ ಮನೆ ಬಾಡಿಗೆ ಕೇಳುವ ನೆಪದಲ್ಲಿ ಹಿಂದಿ ಭಾಷೆಯನ್ನು ಮಾತನಾಡುತ್ತಿದ್ದ ಆತನಿಗೆ ಮನೆಯ ಮೇಲಿನ ಮಹಡಿ ಖಾಲಿ ಇದ್ದು ಬಾಡಿಗೆಗೆ ನೋಡುವಂತೆ ತಿಳಿಸಿದೆವು. ಆತ ಮನೆಯ ಫೋಟೋ ತೆಗೆದುಕೊಳ್ಳುವುದಾಗಿ ಹೇಳಿ ಮೊದಲು ಮನೆಯ ಪೂರ್ತಿ ಫೋಟೋ ತಗೆದುಕೊಂಡು ನಂತರ ಬಾಡಿಗೆ ಇರುವ ಕೊಠಡಿಯ ಫೋಟೋ ಬೇಕು ಎಂದ. ಅದಕ್ಕೆ ನಾವು ಕೊಠಡಿಯ ಫೋಟೋ ಯಾವುದಕ್ಕೆ ಎಂದು ಪ್ರಶ್ನಿಸಿದಾಗ ತಮ್ಮ ಕಂಪನಿಯವರಿಗೆ ತೋರಿಸಬೇಕು ಎಂದು ತಿಳಿಸಿದ. ಮೇಲಿನ ಮಹಡಿ ಕೊಠಡಿಗೆ ಹೋಗುತ್ತಿದ್ದಂತೆ ಏಕಾಏಕಿ ನನ್ನ ಮುಖಕ್ಕೆ ಬಲವಾಗಿ ಗುದ್ದಲು ಶುರು ಮಾಡಿದ. ಇದರಿಂದ ಗಾಬರಿಯಾಗಿ ನಾನು ನನ್ನ ತಾಯಿಯನ್ನು ಕೂಗಿದಾಗ ಅವರು ಓಡಿ ಬಂದು ನೋಡುವಷ್ಟರಲ್ಲಿ ತಾಯಿಯವರಿಗೂ ಆತ ಹೊಡೆದಿದ್ದಾನೆ. ಅವರ ಕನ್ನಡಕ ನೆಲಕ್ಕೆ ಬಿದ್ದು ಒಡೆದಿದ್ದು ಅವರು ಹೊರಗೆ ಹೋಗಿ ಓಣಿಯ ಜನರನ್ನು ಕರೆಯಲು ಯತ್ನಿಸುತ್ತಾರೆ ಎಂದು ಅವರನ್ನು ಎಳೆದಾಡಿ ಬಟ್ಟೆ ಹರಿದಿದ್ದಾನೆ. ಘಟನೆಯಿಂದ ನಮಗೆ ತುಂಬಾ ಗಾಬರಿಯಾಗಿದ್ದು ಆತನನ್ನು ಬಿಡಬೇಡಿ ಎಂದು ಹೇಳಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ಹೆಚ್ಚಿನ ವಿಚಾರಣೆ ಬಳಿಕವೇ ಆತ ಏಕೆ ಹೋಗಿದ್ದ ಎಂಬ ಮಾಹಿತಿ ತಿಳಿದು ಬರಲಿದೆ.

ಹಾಡಹಗಲೇ ನಡೆದ ಘಟನೆಯಿಂದ ಪಟ್ಟಣದ ಜನತೆ ಆತಂಕಗೊಂಡಿದ್ದು ಮನೆಯಲ್ಲಿ ಒಂಟಿ ಮಹಿಳೆಯರು ಇದ್ದಾಗ ಘಟನೆ ನಡೆದಿರುವುದು ಜನರನ್ನು ಭಯಭೀತರನ್ನಾಗಿಸಿದೆ. ಗಾಯಗೊಂಡಿದ್ದ ಉಪನ್ಯಾಸಕಿ ಸುಮಂಗಲಾ ಹಾಗೂ ಅವರ ತಾಯಿ ವಿಜಯಲಕ್ಷ್ಮಿ ಅಂಗಡಿ ಅವರನ್ನು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾಲೇಜು ಆಡಳಿತ ಮಂಡಳಿ ಪದಾಧಿಕಾರಿಗಳಿಂದ ಸಾಂತ್ವನ : ಘಟನೆಯ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಸರಕಾರಿ ಆಸ್ಪತ್ರೆಗೆ ಆಗಮಿಸಿದ ಎಂ.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ, ಪ್ರಾಚಾರ್ಯ ಎಸ್.ಎನ್.ಪೊಲೇಶಿ, ಉಪನ್ಯಾಸಕ ರಹೀಂ ಮುಲ್ಲಾ, ಸಿಬ್ಬಂದಿ ಬಾಬು ಚವ್ಹಾಣ ಉಪನ್ಯಾಸಕಿ ಸುಮಂಗಲಾ ಅಂಗಡಿ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಅಲ್ಲದೇ ತಕ್ಷಣ ಅವರನ್ನು ಬಾಗಲಕೋಟ ಜಿಲ್ಲಾಸ್ಪತ್ರೆಗೆ ಕಳಿಸಲು ನೆರವು ನೀಡಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ