Mutsadi Kashappan, a born and active political activist, passed away

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುನಗುಂದ-ಅಖಂಡ ವಿಜಯಪುರ ಮತ್ತು ಬಾಗಲಕೋಟಿ ಜಿಲ್ಲೆಯ ಹುನಗುಂದ ತಾಲೂಕಿನ ಕೃಷ್ಣ ನದಿಯ ದಡದಲ್ಲಿರುವ ಒಂದು ಪುಟ್ಟ ಗ್ರಾಮವಾದ ಹಾವರಗಿಯಲ್ಲಿ ಜನಿಸಿದ ಲಿಂ, ಎಸ್.ಆರ್.ಕಾಶಪ್ಪನವರ ಮೊದಲು ತಾಲೂಕ ಅಭಿವೃದ್ದಿ ಮಂಡಳಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜರ್ನಿ ಆರಂಭಿಸುವ ಮೂಲಕ ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನದವರಿಗೂ ಸಾಗಿದರು. ಹಮ್ಮು ಬಿಮ್ಮಿಲ್ಲದ ಸರಳ ವ್ಯಕ್ತಿತ್ವದ ರಾಜಕಾರಣಿಯಾಗಿದ್ದರು. ಜಿಗಿಟುತನ ಹಾಗೂ ಜವಾರಿ ಭಾಷೆ ಮತ್ತು ಸ್ವಭಾವ ಅವರನ್ನು ಅಲ್ಲಿಯತನಕ ಕರೆದುಕೊಂಡು ಹೋಗಿದ್ದಲ್ಲದೇ ಇವರು ಇಂದಿಗೂ ಜನರ ಮನಸಿನಲ್ಲಿ ಸದಾ ಜನಾನುರಾಗಿ ಮತ್ತು ಮುತ್ಸದ್ದಿ ನಾಯಕ ಎನ್ನಿಸಿಕೊಂಡಿದ್ದರು.

೧೯೪೯ ಫೆಬ್ರವರಿ ೨೬ ರಂದು ಹಾವರಗಿಯಲ್ಲಿ ಜನಸಿದ ಲಿಂ, ಎಸ್. ಆರ್. ಕಾಶಪ್ಪನವರ ೨೦೦೩ ಜೂನ್ ೨೭ ರಂದು ಆಕಸ್ಮಿಕ ಅಫಘಾತದಲ್ಲಿ ನಿಧನರಾದರು. ಬದುಕಿದ್ದರೇ ರಾಜ್ಯದ ಲಿಂಗಾಯತ ಅಗ್ರಗಣ್ಯ ನಾಯಕರಾಗುತ್ತಿದ್ದರೆಂದು ಅವರಲ್ಲಿದ್ದ ಮುತ್ಸದ್ದಿ ನಾಯಕತ್ವ ಕಂಡಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಹೇಳುವ ಮೂಲಕ ಕಾಂಗ್ರೆಸ್‌ಗೆ ಕಾಶಪ್ಪನವರ ಅನಿವಾರ್ಯ ಆಗಿದ್ದರೆಂದು ಹೇಳಿದ ಮಾತು ಮರೆಯಲಾಗುವುದು.

ಹಾವರಗಿಯಂತಹ ಸಣ್ಣ ಹಳ್ಳಿಯಿಂದ ತಮ್ಮ ರಾಜಕೀಯವನ್ನು ಆರಂಭಿಸಿ ಇವರು ಮೊದಲ ಬಾರಿಗೆ ತಾಲೂಕ ಅಭಿವೃದ್ಧಿ ಮಂಡಳಿ(ಟಿಡಿಬಿ) ಸದಸ್ಯರಾಗಿ ಮತ್ತು ಅಧ್ಯಕ್ಷರಾದರು. ೧೯೮೫ ರಲ್ಲಿ ವಿಧಾನಸಭೆ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋಲನ್ನು ಕಂಡರೂ. ಛಲ ಬಿಡದೇ ಪಕ್ಷ ಸಂಘಟಿಸಿ ೧೯೮೯ ರಲ್ಲಿ ತಮ್ಮನ್ನು ಸೋಲಿಸಿದ ಲಿಂ,ಎಸ್.ಎಸ್.ಕಡಪಟ್ಟಿ ಅವರ ವಿರುದ್ದವೇ ಅತ್ಯಧಿಕ ಮತಗಳಿಂದ ಅವರನ್ನು ಸೋಲಿಸಿ ಮೊದಲು ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದರು. ನಂತರ ಸತತ ಮೂರು ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಸೋಲಿಲ್ಲದ ಸರದಾರರಾಗಿದ್ದರು. ಮುಂದಿನ ರಾಜಕೀಯ ನಡೆ ಬೆರಗು ಹುಟ್ಟಿಸಿತ್ತು. ರಾಜಕೀಯ ಹೆಜ್ಜೆ ಮತ್ತು ಅವರ ದಿಟ್ಟ ನಿಲುವುಗಳು, ಪ್ರಾಮಾಣಿಕ ಜನಸೇವೆ, ಅವರಲ್ಲಿನ ಜಿಗುಟುತನ, ಜವಾರಿ ಸ್ವಭಾವ ಅವರನ್ನು ರಾಜ್ಯದ ಕ್ಯಾಬಿನೆಟ್ ಮಂತ್ರಿಯ ಹುದ್ದೆಯವರಗೂ ಕರೆದ್ಯೋಯಿತು.

ಸದಾ ರೈತಪರ ಚಿಂತಕರು-ಸದಾ ರೈತಪರ ಕಾಳಜಿಯುಳ್ಳ ಅವರು ಭೀಮಾನದಿ ಗೇಟ್ ಕಿತ್ತಿದ್ದು ಇಂದಿಗೂ ಕೂಡಾ ರೈತರು ಮರೆತ್ತಿಲ್ಲ. ಇಂತಹ ಎಂಟೆದೆಯ ರಾಜಕಾರಣಿ ಕಂಡಿದ್ದು ಅಪರೂಪ ಇಂದಿಗೂ ಅವರ ಬಗ್ಗೆ ಮಾತನಾಡುತ್ತಾರೆ. ತಮ್ಮ ಹತ್ತಿರದವರಿಗಿಂತ ವೈರಿಗಳನ್ನು ಮಾತಾಡಿಸುವ ಮತ್ತು ಅವರ ಮನಸ್ಸು ಬದಲಾಯಿಸುವ ಚಾಣಕ್ಯ. ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡುತ್ತಿದ್ದರೂ ಗೆದ್ದ ನಂತರ ಕ್ಷೇತ್ರದ ಜನತೆಯನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಮೂಲಕ ಒಂದು ರೀತಿಯ ಅಜಾತಶತ್ರುವೇ ಸರಿ.

ವಿಶಿಷ್ಠ ಉಡುಪು ಧಾರಣೆ-ಖಾದಿ ದೋತರ,ನೆಹರು ಶರ್ಟ್,ಉಣ್ಣೆಯ ಟೋಪಿ ಅವರ ಆಕರ್ಷಕ ಉಡುಪುಗಳಾಗಿದ್ದವು. ಜವಾರಿ ಮಾತು, ಒಂದಷ್ಟು ಒರಟುತನ, ಕ್ಷಣದಲ್ಲೇ ಮಗುವಿನಂತೆ ಮೃದುವಾಗುವ ಅವರ ಗುಣ ಒಮ್ಮೊಮ್ಮೆ ವರ್ಣರಂಜಿತ ವ್ಯಕ್ತತ್ವ. ತಾವು ಆಡಿದ್ದೇ ನಡೆಯಬೇಕೆಂಬ ಹಠದ ಸ್ವಭಾವ ಅವರದು.

ಪಂಚಮಸಾಲಿ ಸಮಾಜ ಅಗ್ರಗಣ್ಯ ನಾಯಕರು-ಕಾಶಪ್ಪನವರ ಪಂಚಮಸಾಲಿ ಸಮಾಜ ಸಂಘಟನೆಯಲ್ಲಿ ಅವರ ಕೊಡುಗೆ ಅಪಾರ. ಅದರ ರಾಜ್ಯಾಧ್ಯಕ್ಷರಾಗಿ ಗಮನಾರ್ಹ ಸೇವೆ ಮಾಡಿದ್ದರು. ರಾಜ್ಯದ ವಿವಿಧ ಕಡೆ ಸಮಾಜದ ಮುಖಂಡರು ಬೆಳೆಸಿ ರಾಜಕಾರಣದಲ್ಲಿ ಮಿಂಚಿ ಮರೆಯಾದ ಮಾಣಿಕ್ಯ. ಇಂತಹ ಮೇರು ನಾಯಕ ಮರೆಯಾಗಿ ಇಂದಿಗೆ ಎರಡು ಸಂಧಿವೆ. ಅಂತಹ ನಾಯಕರು ಮರಳಿ ಹುಟ್ಟಲಿ ಎನ್ನುವುದೇ ಅವರ ಅಭಿಮಾನಿಗಳ ಆಸೆವಾಗಿದೆ.
ಅಭಿವೃದ್ದಿಯ ಹರಿಕಾರರು-ತಮ್ಮ ೧೪ ವರ್ಷದ ಸುದೀರ್ಘ ಅಧಿಕಾರ ಅವಧಿಯಲ್ಲಿ ತಾಲೂಕಿನ ಕೋಟ್ಯಾಂತರ ರೂಪಾಯಿ ಅನುದಾನವನ್ನು ತಂದು ಮರೋಳ ಏತನೀರಾವರಿ, ಕೂಡಲಸಂಗಮ ಅಭಿವೃದ್ಧಿ, ಅಲ್ಲಿನ ಜಿಟಿಟಿಸಿ ಕಾಲೇಜು ಸ್ಥಾಪನೆ, ಶಾಲಾ ಕಾಲೇಜುಗಳ ಮಂಜೂರಿ ಮತ್ತು ನಿರ್ಮಾಣ, ಪಶು ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ, ರಸ್ತೆ ಅಭಿವೃದ್ಧಿ, ಡಾಂಬರೀಕರಣ, ಅಡಿಹಾಳ ಸೇತುವೆ ನಿರ್ಮಾಣಕ್ಕೆ ಕನಸ್ಸು ಕಂಡವರು. ಮುಳಗಡೆ ಗ್ರಾಮಗಳ ಸ್ಥಳಾಂತರ, ವಿವಿಧ ಯೋಜನೆಯಲ್ಲಿ ಸಾವಿರಾರು ಮನೆಗಳ ನಿರ್ಮಾಣ, ಹುನಗುಂದದಲ್ಲಿ ತಾಲೂಕ ಕ್ರೀಡಾಂಗಣ, ಇಳಕಲ್ ಡೈಟ್ ಆರಂಭ ಸೇರಿದಂತೆ ನೂರಾರು ಕೋಟಿ ಅನುದಾನ ತಂದು ಇಡೀ ಮತಕ್ಷೇತ್ರದ ಅಭಿವೃದ್ಧಿಗೆ ಅವಿರತ ಶ್ರಮಿಸಿದ್ದರು.

ಬಾಕ್ಸ್ ಸುದ್ದಿ-ಸದಾ ರೈತಪರ ಕಾಳಜಿಯುಳ್ಳ ಅವರು ರೈತರಿಗಾಗಿ ಭೀಮಾನದಿ ಗೇಟ್ ಕಿತ್ತಿದ್ದನ್ನು ಇಂದಿಗೂ ಕೂಡಾ ರೈತರು ಮರೆತ್ತಿಲ್ಲ. ಜನಸಾಮಾನ್ಯರ ಮಧ್ಯದಲ್ಲಿ ಬೆಳೆದು ಬಂದ ಎಸ್‌ಆರ್‌ಕೆ ಸರ್ವ ಸಮಾಜ ಮತ್ತು ಸಮುದಾಯಗಳ ದೀಮಂತ ನಾಯಕರಾಗಿದ್ದರು. ಸದಾ ತಾವಂದು ಕೊಂಡಂತೆ ನಡೆಬೇಕು ಎನ್ನುವ ಹಠವಾದಿಗಳಾಗಿದ್ದರು. ಹೋರಾಟದಲ್ಲಿ ಒಂದು ಹೆಜ್ಜೆ ಮುಂದಿದ್ದರು. ಪಂಚಮಸಾಲಿ ಸಮಾಜದ ಅಗ್ರಗಣ್ಯ ನಾಯಕರಾಗಿ ಸಮಾಜ ಸಂಘಟನೆಯಲ್ಲಿ ಅವರ ಕೊಡುಗೆ ಅಪಾರವಾಗಿತ್ತು. ಇಂತಹ ಜನಾನುರಾಗಿ, ಮುತ್ಸದ್ದಿ ನಾಯಕರು ಮರೆಯಾಗಿ ಇಂದಿಗೆ ಎರಡು ದಶಕಗಳು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ