Mutsadi Kashappan, a born and active political activist, passed away

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುನಗುಂದ-ಅಖಂಡ ವಿಜಯಪುರ ಮತ್ತು ಬಾಗಲಕೋಟಿ ಜಿಲ್ಲೆಯ ಹುನಗುಂದ ತಾಲೂಕಿನ ಕೃಷ್ಣ ನದಿಯ ದಡದಲ್ಲಿರುವ ಒಂದು ಪುಟ್ಟ ಗ್ರಾಮವಾದ ಹಾವರಗಿಯಲ್ಲಿ ಜನಿಸಿದ ಲಿಂ, ಎಸ್.ಆರ್.ಕಾಶಪ್ಪನವರ ಮೊದಲು ತಾಲೂಕ ಅಭಿವೃದ್ದಿ ಮಂಡಳಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜರ್ನಿ ಆರಂಭಿಸುವ ಮೂಲಕ ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನದವರಿಗೂ ಸಾಗಿದರು. ಹಮ್ಮು ಬಿಮ್ಮಿಲ್ಲದ ಸರಳ ವ್ಯಕ್ತಿತ್ವದ ರಾಜಕಾರಣಿಯಾಗಿದ್ದರು. ಜಿಗಿಟುತನ ಹಾಗೂ ಜವಾರಿ ಭಾಷೆ ಮತ್ತು ಸ್ವಭಾವ ಅವರನ್ನು ಅಲ್ಲಿಯತನಕ ಕರೆದುಕೊಂಡು ಹೋಗಿದ್ದಲ್ಲದೇ ಇವರು ಇಂದಿಗೂ ಜನರ ಮನಸಿನಲ್ಲಿ ಸದಾ ಜನಾನುರಾಗಿ ಮತ್ತು ಮುತ್ಸದ್ದಿ ನಾಯಕ ಎನ್ನಿಸಿಕೊಂಡಿದ್ದರು.

೧೯೪೯ ಫೆಬ್ರವರಿ ೨೬ ರಂದು ಹಾವರಗಿಯಲ್ಲಿ ಜನಸಿದ ಲಿಂ, ಎಸ್. ಆರ್. ಕಾಶಪ್ಪನವರ ೨೦೦೩ ಜೂನ್ ೨೭ ರಂದು ಆಕಸ್ಮಿಕ ಅಫಘಾತದಲ್ಲಿ ನಿಧನರಾದರು. ಬದುಕಿದ್ದರೇ ರಾಜ್ಯದ ಲಿಂಗಾಯತ ಅಗ್ರಗಣ್ಯ ನಾಯಕರಾಗುತ್ತಿದ್ದರೆಂದು ಅವರಲ್ಲಿದ್ದ ಮುತ್ಸದ್ದಿ ನಾಯಕತ್ವ ಕಂಡಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಹೇಳುವ ಮೂಲಕ ಕಾಂಗ್ರೆಸ್‌ಗೆ ಕಾಶಪ್ಪನವರ ಅನಿವಾರ್ಯ ಆಗಿದ್ದರೆಂದು ಹೇಳಿದ ಮಾತು ಮರೆಯಲಾಗುವುದು.

ಹಾವರಗಿಯಂತಹ ಸಣ್ಣ ಹಳ್ಳಿಯಿಂದ ತಮ್ಮ ರಾಜಕೀಯವನ್ನು ಆರಂಭಿಸಿ ಇವರು ಮೊದಲ ಬಾರಿಗೆ ತಾಲೂಕ ಅಭಿವೃದ್ಧಿ ಮಂಡಳಿ(ಟಿಡಿಬಿ) ಸದಸ್ಯರಾಗಿ ಮತ್ತು ಅಧ್ಯಕ್ಷರಾದರು. ೧೯೮೫ ರಲ್ಲಿ ವಿಧಾನಸಭೆ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋಲನ್ನು ಕಂಡರೂ. ಛಲ ಬಿಡದೇ ಪಕ್ಷ ಸಂಘಟಿಸಿ ೧೯೮೯ ರಲ್ಲಿ ತಮ್ಮನ್ನು ಸೋಲಿಸಿದ ಲಿಂ,ಎಸ್.ಎಸ್.ಕಡಪಟ್ಟಿ ಅವರ ವಿರುದ್ದವೇ ಅತ್ಯಧಿಕ ಮತಗಳಿಂದ ಅವರನ್ನು ಸೋಲಿಸಿ ಮೊದಲು ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದರು. ನಂತರ ಸತತ ಮೂರು ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಸೋಲಿಲ್ಲದ ಸರದಾರರಾಗಿದ್ದರು. ಮುಂದಿನ ರಾಜಕೀಯ ನಡೆ ಬೆರಗು ಹುಟ್ಟಿಸಿತ್ತು. ರಾಜಕೀಯ ಹೆಜ್ಜೆ ಮತ್ತು ಅವರ ದಿಟ್ಟ ನಿಲುವುಗಳು, ಪ್ರಾಮಾಣಿಕ ಜನಸೇವೆ, ಅವರಲ್ಲಿನ ಜಿಗುಟುತನ, ಜವಾರಿ ಸ್ವಭಾವ ಅವರನ್ನು ರಾಜ್ಯದ ಕ್ಯಾಬಿನೆಟ್ ಮಂತ್ರಿಯ ಹುದ್ದೆಯವರಗೂ ಕರೆದ್ಯೋಯಿತು.

ಸದಾ ರೈತಪರ ಚಿಂತಕರು-ಸದಾ ರೈತಪರ ಕಾಳಜಿಯುಳ್ಳ ಅವರು ಭೀಮಾನದಿ ಗೇಟ್ ಕಿತ್ತಿದ್ದು ಇಂದಿಗೂ ಕೂಡಾ ರೈತರು ಮರೆತ್ತಿಲ್ಲ. ಇಂತಹ ಎಂಟೆದೆಯ ರಾಜಕಾರಣಿ ಕಂಡಿದ್ದು ಅಪರೂಪ ಇಂದಿಗೂ ಅವರ ಬಗ್ಗೆ ಮಾತನಾಡುತ್ತಾರೆ. ತಮ್ಮ ಹತ್ತಿರದವರಿಗಿಂತ ವೈರಿಗಳನ್ನು ಮಾತಾಡಿಸುವ ಮತ್ತು ಅವರ ಮನಸ್ಸು ಬದಲಾಯಿಸುವ ಚಾಣಕ್ಯ. ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡುತ್ತಿದ್ದರೂ ಗೆದ್ದ ನಂತರ ಕ್ಷೇತ್ರದ ಜನತೆಯನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಮೂಲಕ ಒಂದು ರೀತಿಯ ಅಜಾತಶತ್ರುವೇ ಸರಿ.

ವಿಶಿಷ್ಠ ಉಡುಪು ಧಾರಣೆ-ಖಾದಿ ದೋತರ,ನೆಹರು ಶರ್ಟ್,ಉಣ್ಣೆಯ ಟೋಪಿ ಅವರ ಆಕರ್ಷಕ ಉಡುಪುಗಳಾಗಿದ್ದವು. ಜವಾರಿ ಮಾತು, ಒಂದಷ್ಟು ಒರಟುತನ, ಕ್ಷಣದಲ್ಲೇ ಮಗುವಿನಂತೆ ಮೃದುವಾಗುವ ಅವರ ಗುಣ ಒಮ್ಮೊಮ್ಮೆ ವರ್ಣರಂಜಿತ ವ್ಯಕ್ತತ್ವ. ತಾವು ಆಡಿದ್ದೇ ನಡೆಯಬೇಕೆಂಬ ಹಠದ ಸ್ವಭಾವ ಅವರದು.

ಪಂಚಮಸಾಲಿ ಸಮಾಜ ಅಗ್ರಗಣ್ಯ ನಾಯಕರು-ಕಾಶಪ್ಪನವರ ಪಂಚಮಸಾಲಿ ಸಮಾಜ ಸಂಘಟನೆಯಲ್ಲಿ ಅವರ ಕೊಡುಗೆ ಅಪಾರ. ಅದರ ರಾಜ್ಯಾಧ್ಯಕ್ಷರಾಗಿ ಗಮನಾರ್ಹ ಸೇವೆ ಮಾಡಿದ್ದರು. ರಾಜ್ಯದ ವಿವಿಧ ಕಡೆ ಸಮಾಜದ ಮುಖಂಡರು ಬೆಳೆಸಿ ರಾಜಕಾರಣದಲ್ಲಿ ಮಿಂಚಿ ಮರೆಯಾದ ಮಾಣಿಕ್ಯ. ಇಂತಹ ಮೇರು ನಾಯಕ ಮರೆಯಾಗಿ ಇಂದಿಗೆ ಎರಡು ಸಂಧಿವೆ. ಅಂತಹ ನಾಯಕರು ಮರಳಿ ಹುಟ್ಟಲಿ ಎನ್ನುವುದೇ ಅವರ ಅಭಿಮಾನಿಗಳ ಆಸೆವಾಗಿದೆ.
ಅಭಿವೃದ್ದಿಯ ಹರಿಕಾರರು-ತಮ್ಮ ೧೪ ವರ್ಷದ ಸುದೀರ್ಘ ಅಧಿಕಾರ ಅವಧಿಯಲ್ಲಿ ತಾಲೂಕಿನ ಕೋಟ್ಯಾಂತರ ರೂಪಾಯಿ ಅನುದಾನವನ್ನು ತಂದು ಮರೋಳ ಏತನೀರಾವರಿ, ಕೂಡಲಸಂಗಮ ಅಭಿವೃದ್ಧಿ, ಅಲ್ಲಿನ ಜಿಟಿಟಿಸಿ ಕಾಲೇಜು ಸ್ಥಾಪನೆ, ಶಾಲಾ ಕಾಲೇಜುಗಳ ಮಂಜೂರಿ ಮತ್ತು ನಿರ್ಮಾಣ, ಪಶು ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ, ರಸ್ತೆ ಅಭಿವೃದ್ಧಿ, ಡಾಂಬರೀಕರಣ, ಅಡಿಹಾಳ ಸೇತುವೆ ನಿರ್ಮಾಣಕ್ಕೆ ಕನಸ್ಸು ಕಂಡವರು. ಮುಳಗಡೆ ಗ್ರಾಮಗಳ ಸ್ಥಳಾಂತರ, ವಿವಿಧ ಯೋಜನೆಯಲ್ಲಿ ಸಾವಿರಾರು ಮನೆಗಳ ನಿರ್ಮಾಣ, ಹುನಗುಂದದಲ್ಲಿ ತಾಲೂಕ ಕ್ರೀಡಾಂಗಣ, ಇಳಕಲ್ ಡೈಟ್ ಆರಂಭ ಸೇರಿದಂತೆ ನೂರಾರು ಕೋಟಿ ಅನುದಾನ ತಂದು ಇಡೀ ಮತಕ್ಷೇತ್ರದ ಅಭಿವೃದ್ಧಿಗೆ ಅವಿರತ ಶ್ರಮಿಸಿದ್ದರು.

ಬಾಕ್ಸ್ ಸುದ್ದಿ-ಸದಾ ರೈತಪರ ಕಾಳಜಿಯುಳ್ಳ ಅವರು ರೈತರಿಗಾಗಿ ಭೀಮಾನದಿ ಗೇಟ್ ಕಿತ್ತಿದ್ದನ್ನು ಇಂದಿಗೂ ಕೂಡಾ ರೈತರು ಮರೆತ್ತಿಲ್ಲ. ಜನಸಾಮಾನ್ಯರ ಮಧ್ಯದಲ್ಲಿ ಬೆಳೆದು ಬಂದ ಎಸ್‌ಆರ್‌ಕೆ ಸರ್ವ ಸಮಾಜ ಮತ್ತು ಸಮುದಾಯಗಳ ದೀಮಂತ ನಾಯಕರಾಗಿದ್ದರು. ಸದಾ ತಾವಂದು ಕೊಂಡಂತೆ ನಡೆಬೇಕು ಎನ್ನುವ ಹಠವಾದಿಗಳಾಗಿದ್ದರು. ಹೋರಾಟದಲ್ಲಿ ಒಂದು ಹೆಜ್ಜೆ ಮುಂದಿದ್ದರು. ಪಂಚಮಸಾಲಿ ಸಮಾಜದ ಅಗ್ರಗಣ್ಯ ನಾಯಕರಾಗಿ ಸಮಾಜ ಸಂಘಟನೆಯಲ್ಲಿ ಅವರ ಕೊಡುಗೆ ಅಪಾರವಾಗಿತ್ತು. ಇಂತಹ ಜನಾನುರಾಗಿ, ಮುತ್ಸದ್ದಿ ನಾಯಕರು ಮರೆಯಾಗಿ ಇಂದಿಗೆ ಎರಡು ದಶಕಗಳು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ