Mutsadi Kashappan, a born and active political activist, passed away

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುನಗುಂದ-ಅಖಂಡ ವಿಜಯಪುರ ಮತ್ತು ಬಾಗಲಕೋಟಿ ಜಿಲ್ಲೆಯ ಹುನಗುಂದ ತಾಲೂಕಿನ ಕೃಷ್ಣ ನದಿಯ ದಡದಲ್ಲಿರುವ ಒಂದು ಪುಟ್ಟ ಗ್ರಾಮವಾದ ಹಾವರಗಿಯಲ್ಲಿ ಜನಿಸಿದ ಲಿಂ, ಎಸ್.ಆರ್.ಕಾಶಪ್ಪನವರ ಮೊದಲು ತಾಲೂಕ ಅಭಿವೃದ್ದಿ ಮಂಡಳಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜರ್ನಿ ಆರಂಭಿಸುವ ಮೂಲಕ ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನದವರಿಗೂ ಸಾಗಿದರು. ಹಮ್ಮು ಬಿಮ್ಮಿಲ್ಲದ ಸರಳ ವ್ಯಕ್ತಿತ್ವದ ರಾಜಕಾರಣಿಯಾಗಿದ್ದರು. ಜಿಗಿಟುತನ ಹಾಗೂ ಜವಾರಿ ಭಾಷೆ ಮತ್ತು ಸ್ವಭಾವ ಅವರನ್ನು ಅಲ್ಲಿಯತನಕ ಕರೆದುಕೊಂಡು ಹೋಗಿದ್ದಲ್ಲದೇ ಇವರು ಇಂದಿಗೂ ಜನರ ಮನಸಿನಲ್ಲಿ ಸದಾ ಜನಾನುರಾಗಿ ಮತ್ತು ಮುತ್ಸದ್ದಿ ನಾಯಕ ಎನ್ನಿಸಿಕೊಂಡಿದ್ದರು.

೧೯೪೯ ಫೆಬ್ರವರಿ ೨೬ ರಂದು ಹಾವರಗಿಯಲ್ಲಿ ಜನಸಿದ ಲಿಂ, ಎಸ್. ಆರ್. ಕಾಶಪ್ಪನವರ ೨೦೦೩ ಜೂನ್ ೨೭ ರಂದು ಆಕಸ್ಮಿಕ ಅಫಘಾತದಲ್ಲಿ ನಿಧನರಾದರು. ಬದುಕಿದ್ದರೇ ರಾಜ್ಯದ ಲಿಂಗಾಯತ ಅಗ್ರಗಣ್ಯ ನಾಯಕರಾಗುತ್ತಿದ್ದರೆಂದು ಅವರಲ್ಲಿದ್ದ ಮುತ್ಸದ್ದಿ ನಾಯಕತ್ವ ಕಂಡಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಹೇಳುವ ಮೂಲಕ ಕಾಂಗ್ರೆಸ್‌ಗೆ ಕಾಶಪ್ಪನವರ ಅನಿವಾರ್ಯ ಆಗಿದ್ದರೆಂದು ಹೇಳಿದ ಮಾತು ಮರೆಯಲಾಗುವುದು.

ಹಾವರಗಿಯಂತಹ ಸಣ್ಣ ಹಳ್ಳಿಯಿಂದ ತಮ್ಮ ರಾಜಕೀಯವನ್ನು ಆರಂಭಿಸಿ ಇವರು ಮೊದಲ ಬಾರಿಗೆ ತಾಲೂಕ ಅಭಿವೃದ್ಧಿ ಮಂಡಳಿ(ಟಿಡಿಬಿ) ಸದಸ್ಯರಾಗಿ ಮತ್ತು ಅಧ್ಯಕ್ಷರಾದರು. ೧೯೮೫ ರಲ್ಲಿ ವಿಧಾನಸಭೆ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋಲನ್ನು ಕಂಡರೂ. ಛಲ ಬಿಡದೇ ಪಕ್ಷ ಸಂಘಟಿಸಿ ೧೯೮೯ ರಲ್ಲಿ ತಮ್ಮನ್ನು ಸೋಲಿಸಿದ ಲಿಂ,ಎಸ್.ಎಸ್.ಕಡಪಟ್ಟಿ ಅವರ ವಿರುದ್ದವೇ ಅತ್ಯಧಿಕ ಮತಗಳಿಂದ ಅವರನ್ನು ಸೋಲಿಸಿ ಮೊದಲು ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದರು. ನಂತರ ಸತತ ಮೂರು ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಸೋಲಿಲ್ಲದ ಸರದಾರರಾಗಿದ್ದರು. ಮುಂದಿನ ರಾಜಕೀಯ ನಡೆ ಬೆರಗು ಹುಟ್ಟಿಸಿತ್ತು. ರಾಜಕೀಯ ಹೆಜ್ಜೆ ಮತ್ತು ಅವರ ದಿಟ್ಟ ನಿಲುವುಗಳು, ಪ್ರಾಮಾಣಿಕ ಜನಸೇವೆ, ಅವರಲ್ಲಿನ ಜಿಗುಟುತನ, ಜವಾರಿ ಸ್ವಭಾವ ಅವರನ್ನು ರಾಜ್ಯದ ಕ್ಯಾಬಿನೆಟ್ ಮಂತ್ರಿಯ ಹುದ್ದೆಯವರಗೂ ಕರೆದ್ಯೋಯಿತು.

ಸದಾ ರೈತಪರ ಚಿಂತಕರು-ಸದಾ ರೈತಪರ ಕಾಳಜಿಯುಳ್ಳ ಅವರು ಭೀಮಾನದಿ ಗೇಟ್ ಕಿತ್ತಿದ್ದು ಇಂದಿಗೂ ಕೂಡಾ ರೈತರು ಮರೆತ್ತಿಲ್ಲ. ಇಂತಹ ಎಂಟೆದೆಯ ರಾಜಕಾರಣಿ ಕಂಡಿದ್ದು ಅಪರೂಪ ಇಂದಿಗೂ ಅವರ ಬಗ್ಗೆ ಮಾತನಾಡುತ್ತಾರೆ. ತಮ್ಮ ಹತ್ತಿರದವರಿಗಿಂತ ವೈರಿಗಳನ್ನು ಮಾತಾಡಿಸುವ ಮತ್ತು ಅವರ ಮನಸ್ಸು ಬದಲಾಯಿಸುವ ಚಾಣಕ್ಯ. ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡುತ್ತಿದ್ದರೂ ಗೆದ್ದ ನಂತರ ಕ್ಷೇತ್ರದ ಜನತೆಯನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಮೂಲಕ ಒಂದು ರೀತಿಯ ಅಜಾತಶತ್ರುವೇ ಸರಿ.

ವಿಶಿಷ್ಠ ಉಡುಪು ಧಾರಣೆ-ಖಾದಿ ದೋತರ,ನೆಹರು ಶರ್ಟ್,ಉಣ್ಣೆಯ ಟೋಪಿ ಅವರ ಆಕರ್ಷಕ ಉಡುಪುಗಳಾಗಿದ್ದವು. ಜವಾರಿ ಮಾತು, ಒಂದಷ್ಟು ಒರಟುತನ, ಕ್ಷಣದಲ್ಲೇ ಮಗುವಿನಂತೆ ಮೃದುವಾಗುವ ಅವರ ಗುಣ ಒಮ್ಮೊಮ್ಮೆ ವರ್ಣರಂಜಿತ ವ್ಯಕ್ತತ್ವ. ತಾವು ಆಡಿದ್ದೇ ನಡೆಯಬೇಕೆಂಬ ಹಠದ ಸ್ವಭಾವ ಅವರದು.

ಪಂಚಮಸಾಲಿ ಸಮಾಜ ಅಗ್ರಗಣ್ಯ ನಾಯಕರು-ಕಾಶಪ್ಪನವರ ಪಂಚಮಸಾಲಿ ಸಮಾಜ ಸಂಘಟನೆಯಲ್ಲಿ ಅವರ ಕೊಡುಗೆ ಅಪಾರ. ಅದರ ರಾಜ್ಯಾಧ್ಯಕ್ಷರಾಗಿ ಗಮನಾರ್ಹ ಸೇವೆ ಮಾಡಿದ್ದರು. ರಾಜ್ಯದ ವಿವಿಧ ಕಡೆ ಸಮಾಜದ ಮುಖಂಡರು ಬೆಳೆಸಿ ರಾಜಕಾರಣದಲ್ಲಿ ಮಿಂಚಿ ಮರೆಯಾದ ಮಾಣಿಕ್ಯ. ಇಂತಹ ಮೇರು ನಾಯಕ ಮರೆಯಾಗಿ ಇಂದಿಗೆ ಎರಡು ಸಂಧಿವೆ. ಅಂತಹ ನಾಯಕರು ಮರಳಿ ಹುಟ್ಟಲಿ ಎನ್ನುವುದೇ ಅವರ ಅಭಿಮಾನಿಗಳ ಆಸೆವಾಗಿದೆ.
ಅಭಿವೃದ್ದಿಯ ಹರಿಕಾರರು-ತಮ್ಮ ೧೪ ವರ್ಷದ ಸುದೀರ್ಘ ಅಧಿಕಾರ ಅವಧಿಯಲ್ಲಿ ತಾಲೂಕಿನ ಕೋಟ್ಯಾಂತರ ರೂಪಾಯಿ ಅನುದಾನವನ್ನು ತಂದು ಮರೋಳ ಏತನೀರಾವರಿ, ಕೂಡಲಸಂಗಮ ಅಭಿವೃದ್ಧಿ, ಅಲ್ಲಿನ ಜಿಟಿಟಿಸಿ ಕಾಲೇಜು ಸ್ಥಾಪನೆ, ಶಾಲಾ ಕಾಲೇಜುಗಳ ಮಂಜೂರಿ ಮತ್ತು ನಿರ್ಮಾಣ, ಪಶು ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ, ರಸ್ತೆ ಅಭಿವೃದ್ಧಿ, ಡಾಂಬರೀಕರಣ, ಅಡಿಹಾಳ ಸೇತುವೆ ನಿರ್ಮಾಣಕ್ಕೆ ಕನಸ್ಸು ಕಂಡವರು. ಮುಳಗಡೆ ಗ್ರಾಮಗಳ ಸ್ಥಳಾಂತರ, ವಿವಿಧ ಯೋಜನೆಯಲ್ಲಿ ಸಾವಿರಾರು ಮನೆಗಳ ನಿರ್ಮಾಣ, ಹುನಗುಂದದಲ್ಲಿ ತಾಲೂಕ ಕ್ರೀಡಾಂಗಣ, ಇಳಕಲ್ ಡೈಟ್ ಆರಂಭ ಸೇರಿದಂತೆ ನೂರಾರು ಕೋಟಿ ಅನುದಾನ ತಂದು ಇಡೀ ಮತಕ್ಷೇತ್ರದ ಅಭಿವೃದ್ಧಿಗೆ ಅವಿರತ ಶ್ರಮಿಸಿದ್ದರು.

ಬಾಕ್ಸ್ ಸುದ್ದಿ-ಸದಾ ರೈತಪರ ಕಾಳಜಿಯುಳ್ಳ ಅವರು ರೈತರಿಗಾಗಿ ಭೀಮಾನದಿ ಗೇಟ್ ಕಿತ್ತಿದ್ದನ್ನು ಇಂದಿಗೂ ಕೂಡಾ ರೈತರು ಮರೆತ್ತಿಲ್ಲ. ಜನಸಾಮಾನ್ಯರ ಮಧ್ಯದಲ್ಲಿ ಬೆಳೆದು ಬಂದ ಎಸ್‌ಆರ್‌ಕೆ ಸರ್ವ ಸಮಾಜ ಮತ್ತು ಸಮುದಾಯಗಳ ದೀಮಂತ ನಾಯಕರಾಗಿದ್ದರು. ಸದಾ ತಾವಂದು ಕೊಂಡಂತೆ ನಡೆಬೇಕು ಎನ್ನುವ ಹಠವಾದಿಗಳಾಗಿದ್ದರು. ಹೋರಾಟದಲ್ಲಿ ಒಂದು ಹೆಜ್ಜೆ ಮುಂದಿದ್ದರು. ಪಂಚಮಸಾಲಿ ಸಮಾಜದ ಅಗ್ರಗಣ್ಯ ನಾಯಕರಾಗಿ ಸಮಾಜ ಸಂಘಟನೆಯಲ್ಲಿ ಅವರ ಕೊಡುಗೆ ಅಪಾರವಾಗಿತ್ತು. ಇಂತಹ ಜನಾನುರಾಗಿ, ಮುತ್ಸದ್ದಿ ನಾಯಕರು ಮರೆಯಾಗಿ ಇಂದಿಗೆ ಎರಡು ದಶಕಗಳು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ