Take action against schools that start unlicensed residential schools: Prabhu Gowda B Pothareddy

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಹುಣಸಗಿ: ಸುರಪುರ ತಾಲೂಕಿನಾದ್ಯಂತ ವಸತಿಸಹಿತ ನಡೆಸುತ್ತಿರುವ ಖಾಸಗಿ ಶಾಲೆಗಳ ಮಾನ್ಯತೆಯನ್ನು ಹಿಂಪಡೆಯುವಂತೆ ಜಯ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಆಗ್ರಹಿಸಿದ್ದಾರೆ.

ಸುರಪುರ ಮತ್ತು ಹುಣಸಗಿ ತಾಲೂಕಿನ ಖಾಸಗಿ ಶಾಲೆಗಳಲ್ಲಿ ಪರವಾನಿಗೆ ಇಲ್ಲದೇ ವಸತಿ ರಹಿತ ಶಾಲೆಗಳನ್ನು ಪ್ರಾರಂಭಿಸಿರುವ ಶಾಲೆಯ ಆಡಳಿತ ಮಂಡಳಿಗಳ ಹಗಲು ದರೋಡೆ ವಿರುದ್ಧ ಧ್ವನಿಯತ್ತಿರುವ ಕರ್ನಾಟಕ ಜನಪರ ವೇದಿಕೆಯ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ. ಬಿ. ಪೋತರೆಡ್ಡಿ ಈ ವಿಷಯ ಕುರಿತು ಕ್ಷೇತ್ರಶಿಕ್ಷಣ ಇಲಾಖೆಯ ಅಧಿಕಾರಿಗೆ ಮನವಿ ನೀಡಿದ್ದಾರೆ.

ಈ ವಿಷಯದ ಬಗ್ಗೆ ಮಾತನಾಡಿದ ಅವರು ಸುರಪುರ ಮತ್ತು ಹುಣಸಗಿ ತಾಲೂಕಿನಾಧ್ಯಂತ ಕಾನೂನು ಬಾಹಿರವಾಗಿ ಸರಕಾರದಿಂದ ಯಾವುದೇ ರೀತಿಯಾಗಿ ಪರವಾನಿಗೆ ಪಡೆಯದೆ ವಸತಿ ಸಹಿತಿ ಖಾಸಗಿ ಶಾಲೆಗಳಲ್ಲಿ ಪಾಲಕರಿಂದ ಹೆಚ್ಚಿನ ಶುಲ್ಕ ವಸುಲಿಗೆ ಇಳಿದಿವೆ. ಈ ಕುರಿತು ಹಲವು ಬಾರಿ ಪೋಷಕರು ನನ್ನ ಗಮನಕ್ಕೆ ತಂದಿದ್ದು, ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯನ್ನು ನೀಡಿದ್ದು , ಅಲ್ಲದೇ ಕಳೆದ ಕೆಲವು ತಿಂಗಳುಗಳ ಹಿಂದೆ ಪರವಾನಿಗೆ ಇಲ್ಲದೇ ವಸತಿ ಸಹಿತ ಶಾಲೆಯನ್ನು ನಡೆಸುತ್ತಿದ್ದ ಶ್ರೀ ಖಾಸ್ಗತೇಶ್ವರ ಪ್ರೌಢ ಶಾಲೆ ಹುಣಸಗಿ ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣ ಇಲಾಖೆಯ ತಂಡ ಆ ಶಾಲೆಯ ಪರವಾನಿಗೆಯನ್ನು ರದ್ದು ಮಾಡಿದೆ. ಅದೇ ರೀತಿಯಾಗಿ ಇನ್ನೂ ಕೂಡ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಹಲವು
ಶಾಲೆಗಳು ಪರವಾನಿಗೆ ಇಲ್ಲದೇ ವಸತಿ ಸಹಿತ ಖಾಸಗಿ ಶಾಲೆಗಳನ್ನು ನಡೆಸುತ್ತಿದ್ದು, ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ ಶಿಸ್ತು ಕ್ರಮ ಜರುಗಿಸುವಲ್ಲಿ ಶಾಲಾ ಆಡಳಿತ ಮಂಡಳಿಯವರ ಆಮೀಷಕ್ಕೆ ಬಲಿಯಾಗದೆ ಮತ್ತು ಮಲತಾಯಿ ಧೋರಣೆಯನ್ನು ಅನುಸರಿಸದೇ ಕ್ರಮ ವಹಿಸಬೇಕೇಂದು ಆಗ್ರಹಿಸಿದ್ದರೆ. ಇಲ್ಲವಾದಲ್ಲಿ ಬಡ ಪೋಷಕರಿಂದ ಹೆಚ್ಚಿನ ಶುಲ್ಕಗಳನ್ನು ಪಡೆಯುತ್ತಿರುವ ಶಾಲೆಗಳ ವಿರುದ್ಧ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

ಮುಂತಾದ ಶಾಲೆಗಳು ಶಿಕ್ಷಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾನೂನುಬಾಹಿರವಾಗಿ ವಸತಿ ಸಹಿತ ಶಿಕ್ಷಣ ಆರಂಭಿಸಿದ್ದರೆಂದು ಅವರು ಆರೋಪಿಸಿದ್ದಾರೆ.

ಜೀನಿಯಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಾವಿನಗಿಡದ ತಾಂಡ, ಪುರಾನಾಯಕ್ ಕಿರಿಯ ಪ್ರಾಥಮಿಕ ಶಾಲೆ ಕೊಡೇಕಲ್ ಆರ್ ಟಿ ಜೆ ಸೂಲ್ ಗಣೇಶ್ ಪಬ್ಲಿಕ್ ಸ್ಕೂಲ್ ಕೋಳಿಹಾಳ ಬಸವೇಶ್ವರ್ ಸ್ಕೂಲ್ ಮುದನೂರು, ಆರ್ಶೀವಾದ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹುಣಸಗಿ ವಿದ್ಯಾ ವಿಕಾಸ ಶಾಲೆ ಎಲ್ ಪಿ ಎಸ್ ಕುಪ್ಪಿ ಕ್ರಾಸ್ ಹುಣಸಗಿ, ರಾಮಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆ ಗುಳಬಾಳ, ಕನಕದಾಸ ಕಿರಿಯ ಪ್ರಾಥಮಿಕ ಶಾಲೆ ಯಡಹಳ್ಳಿ, ರೇವಣಸಿದ್ದೇಶ್ವರ ಕಿರಿಯ ಪ್ರಾರ್ಥಮಿಕ ಶಾಲೆ ಯಡಹಳ್ಳಿ, ಶೆಟ್ಟಿ ಕಾಂಪಿಟೇಟಿವ್ ಸ್ಕೂಲ್ ಸುರಪುರ , ವಿದ್ಯಾ ವಿಕಾಸ್ ಸ್ಕೂಲ್ ಕೆಂಭಾವಿ, ಶ್ರೀ ಸಾಯಿ ಪಬ್ಲಿಕ್ ಸ್ಕೂಲ್ ಕೆಂಭಾವಿ, ಬ್ರಿಲಿಯಂಟ್ ಸ್ಕೂಲ್ ಕೆಂಭಾವಿ, ನಂದನ್ ಸ್ಕೂಲ್, ಕೆಂಭಾವಿ ಶ್ರೀ ವಿದ್ಯಾಲಕ್ಷ್ಮಿ ಪಬ್ಲಿಕ್ ಸ್ಕೂಲ್ ಕೆಂಭಾವಿ , ಹೋಲಿ ಫೇಥ ಸ್ಕೂಲ್ ಕೆಂಭಾವಿ.

ವರದಿಗಾರ : ಶಿವು ರಾಠೋಡ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ