Hiremurala-Kesapur road development work started

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇರಿಸಿ ಹೋಗಿದ್ದು ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ, ಈಗ ಅಭಿವೃದ್ದಿ ಕೆಲಸಗಳಿಗೆ ಸರ್ಕಾರ ಅನುದಾನ ಹಂಚಿಕೆ ಮಾಡುತ್ತಿದೆ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ತಾಲ್ಲೂಕು ಕೇಸಾಪೂರ ಕ್ರಾಸ್‌ನಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಹಿರೇಮುರಾಳ-ಹುನಕುಂಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸನ್ 2025-26ರ ಆಯವ್ಯಯದಲ್ಲಿ ತಾಲ್ಲೂಕಿನ ನಾಲತವಾಡ-ಆಲೂರ, ಯರಗಲ್-ಕಮಲದಿನ್ನಿ, ಇಂಗಳಗೇರಿ -ಕೂಚಬಾಳ, ಹಡಗಲಿ- ಅಮರಗೋಳ ಸೇರಿದಂತೆ ಹೊಲಮನೆಗಳಿಗೆ ತಿರುಗಾಡುವ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಬೇಡಿಕೆ ಇದ್ದು ಆದ್ಯತೆ ಮೇರೆಗೆ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.ವಿರೋಧ ಪಕ್ಷದವರ ಸುಳ್ಳು ಹೇಳಿಕೆಗಳನ್ನು ಜನರು ನಂಬಬೇಡಿ ಎಂದರು.

ಕೇಸಾಪೂರದ ಮುಖಂಡ ಎಂ. ಎಸ್. ದೇಶಮುಖ, ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಸಿ. ಬಿ. ಅಸ್ಕಿ, ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡ ರಾಜುಗೌಡ ಕೊಂಗಿ, ಅಪ್ಪು ನಾಡಗೌಡ, ಹಿರೇಮುರಾಳ ಪಿಕೆಪಿಎಸ್ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಭೋವಿ ಸಮಾಜದ ಮುಖಂಡ ಶ್ರೀನಿವಾಸ ಗೌಂಡಿ, ಮಹಾಂತಯ್ಯ ಹಿರೇಮಠ, ನಾಗಯ್ಯ ಹಾಲಗಂಗಾಧರಮಠ, ಗುತ್ತಿಗೆದಾರ ಶ್ರೀಶೈಲ ವಿಭೂತಿ ಮೊದಲಾದವರು ಇದ್ದರು.

ಆಳಂದ ಶಾಸಕ ಬಿ. ಆರ್. ಪಾಟೀಲ್ ಅವರು ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಕೊಡಬೇಕು ಎಂಬ ಆಡಿಯೋ ಬಹಿರಂಗಗೊಂಡಿರುವ ವಿಚಾರದ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ನಾಡಗೌಡ, ನಾನು ಆಡಿಯೋ ಕೇಳಿದ್ದೇನೆ. ಅವರ ಕ್ಷೇತ್ರದಲ್ಲಿ ಯಾವನೋ ಒಬ್ಬ ಮಧ್ಯವರ್ತಿ ದಂಧಾ ಚಲ್ ರಹಾ ಕ್ಯಾ ಎಂದು ಕೇಳಿದ್ದಾನಂತೆ ಅದಕ್ಕೆ ಅವರು ಹೈ ಎಂದಿದ್ದಾರೆ. ಆದರೆ ಇವರು(ಬಿ.ಆರ್.ಪಾಟೀಲರು) ಒನ್‌ವೇ ಮಾತನಾಡಿದ್ದಾರೆ. ಜಮೀರ್ ಅಹ್ಮದ್ ಆಪ್ತ ಸಹಾಯಕರು ಪಾಟೀಲರ ಮಾತಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಮತಕ್ಷೇತ್ರದಲ್ಲಿ ಸರ್ಕಾರ ಮನೆ ಕೊಟ್ಟರೆ ಬಡವರಿಗೆ ಕೊಟ್ಟಿರುತ್ತೇವೆ, ಇಲ್ಲದಿದ್ದರೆ ಇಲ್ಲ. ಹಣ ಪಡೆದುಕೊಂಡು ಮನೆ ಕೊಟ್ಟರೆ ಅವರು ನಮಗೆ ಓಟು ಹಾಕುತ್ತಾರೆಯೋ? ಎಂದು ಪ್ರಶ್ನಿಸಿದ ಅವರು, ಹಿಂದಿನ ಸರ್ಕಾರದಲ್ಲಿ ಕೊನೆಯ ಘಳಿಗೆಯಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದರಿಂದಲೇ ಇಂದಗೂ ಅನುಮೋದನೆ ಆಗದೇ ಹಾಗೆ ಉಳಿದುಕೊಂಡಿವೆ ಎಂದರು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ