Memoirs of Basapriya Appanna: Kulavrti is not derogatory - R.B. Thimmapura

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಮುದ್ದೇಬಿಹಾಳ : ಕುಲಕಸುಬು ಮಾಡುವವರನ್ನು ಸಮಾನತೆಯಿಂದ ಸಮಾಜ ಈವರೆಗೂ ಕಾಣುತ್ತಿಲ್ಲ. ಸಣ್ಣ ಸಮಾಜದವರನ್ನು ತುಳಿಯುತ್ತಾರೆ. ಅವರನ್ನು ಮುಖ್ಯವಾಹಿನಿಗೆ ತರಬೇಕು. ಸಣ್ಣ ಸಣ್ಣ ಸಮಾಜಗಳು ಒಕ್ಕೂಟ ರಚಿಸಿಕೊಂಡು ಒಗ್ಗಟ್ಟಾಗಬೇಕು ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಅವರು ಹೇಳಿದರು.

ತಾಲ್ಲೂಕಿನ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಭಾನುವಾರ ಹಡಪದ ಅಪ್ಪಣ್ಣ ಗುರುಪೀಠದಲ್ಲಿ ಸಮಾಜದ ಪ್ರಥಮ ಗುರು ಲಿಂ.ಬಸವಪ್ರಿಯ ಹಡಪದ ಅಪ್ಪಣ್ಣ ಸ್ವಾಮೀಜಿಯವರ 17ನೇ ಪುಣ್ಯಸ್ಮರಣೆ ಹಾಗೂ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ಮನುಷ್ಯನಿಗೂ ಸ್ವಾಭಿಮಾನ ಮುಖ್ಯವಾಗಿದ್ದು ಒಬ್ಬರ ಮನಸ್ಸಿಗೆ ನೋವಾಗುವಂತೆ ಮಾತನಾಡಬಾರದು. ಹಡಪದ ಜನಾಂಗ ಆರ್ಥಿಕವಾಗಿ ಬೆಳವಣಿಗೆ ಹೊಂದಲು ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು. ಲಿಂ. ಬಸವಪ್ರಿಯ ಅಪ್ಪಣ್ಣನವರ ಗದ್ದುಗೆಯನ್ನು ದೇವಸ್ಥಾನವನ್ನಾಗಿ ಅಭಿವೃದ್ಧಿಪಡಿಸಲು ವಯಕ್ತಿಕವಾಗಿ ಒಂದು ಲಕ್ಷ ರೂ. ಅನುದಾನ ನೀಡುವುದಾಗಿ ವಾಗ್ದಾನ ಮಾಡಿದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸಿದ್ಧರಾಮಯ್ಯನವರ ಅವಧಿಯಲ್ಲಿ ಹಡಪದ ಅಪ್ಪಣ್ಣ ಗುರುಪೀಠದ ಅಭಿವೃದ್ಧಿಗೆ ಒಂದು ಕೋಟಿ ರೂ.ಅನುದಾನ ಒದಗಿಸಲಾಗಿದೆ. ಹಡಪದ ಸಮಾಜದ ಏಳ್ಗೆಗೆ ಸರ್ಕಾರ ಬದ್ಧವಾಗಿದೆ ಎಂದರು.

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಮಾತನಾಡಿ, ಹಡಪದ ಅಪ್ಪಣ್ಣನವರನ್ನು ಬಸವಣ್ಣನವರು ತಮ್ಮ ಕಾರ್ಯದರ್ಶಿಗಳಾಗಿ ಮಾಡಿಕೊಂಡು ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ತಂಗಡಗಿಯನ್ನು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಳಕಲ್ ಚಿತ್ತರಗಿ ವಿಜಯ ಮಹಾಂತೇಶ ಮಠದ ಗುರುಮಹಾಂತ ಸ್ವಾಮೀಜಿ, ಚಿತ್ರದುರ್ಗದ ಮಾಚಿದೇವ ಸಂಸ್ಥಾನ ಮಠದ ಬಸವ ಮಾಚಿದೇವ ಸ್ವಾಮೀಜಿ, ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ, ಟ್ರಸ್ಟ್ನ ಗೌರವಾಧ್ಯಕ್ಷ ಎಂ.ಎಸ್.ನಾವಿ, ನೌಕರರ ಸಂಘದ ಪ್ರಕಾಶ ಹಡಪದ, ಜಿಲ್ಲಾಧ್ಯಕ್ಷ ವಿ.ಜಿ.ಕತ್ನಳ್ಳಿ, ನಿಂಗಪ್ಪ ನಾವಿ, ಮಹಾಂತೇಶ ಮೂಲಿಮನಿ, ಸಿ.ಎಫ್.ನಾವಿ, ನಾಗೇಶ ನಾಗೂರ, ಓಂಕಾರ ನಾವಿ, ಸೋಮನಗೌಡ ಪಾಟೀಲ ನಡಹಳ್ಳಿ ಮೊದಲಾದವರು ಇದ್ದರು.

ಎಸ್.ಎಸ್.ಎಲ್.ಸಿ.,ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ