Memoirs of Basapriya Appanna: Kulavrti is not derogatory - R.B. Thimmapura

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಮುದ್ದೇಬಿಹಾಳ : ಕುಲಕಸುಬು ಮಾಡುವವರನ್ನು ಸಮಾನತೆಯಿಂದ ಸಮಾಜ ಈವರೆಗೂ ಕಾಣುತ್ತಿಲ್ಲ. ಸಣ್ಣ ಸಮಾಜದವರನ್ನು ತುಳಿಯುತ್ತಾರೆ. ಅವರನ್ನು ಮುಖ್ಯವಾಹಿನಿಗೆ ತರಬೇಕು. ಸಣ್ಣ ಸಣ್ಣ ಸಮಾಜಗಳು ಒಕ್ಕೂಟ ರಚಿಸಿಕೊಂಡು ಒಗ್ಗಟ್ಟಾಗಬೇಕು ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಅವರು ಹೇಳಿದರು.

ತಾಲ್ಲೂಕಿನ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಭಾನುವಾರ ಹಡಪದ ಅಪ್ಪಣ್ಣ ಗುರುಪೀಠದಲ್ಲಿ ಸಮಾಜದ ಪ್ರಥಮ ಗುರು ಲಿಂ.ಬಸವಪ್ರಿಯ ಹಡಪದ ಅಪ್ಪಣ್ಣ ಸ್ವಾಮೀಜಿಯವರ 17ನೇ ಪುಣ್ಯಸ್ಮರಣೆ ಹಾಗೂ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ಮನುಷ್ಯನಿಗೂ ಸ್ವಾಭಿಮಾನ ಮುಖ್ಯವಾಗಿದ್ದು ಒಬ್ಬರ ಮನಸ್ಸಿಗೆ ನೋವಾಗುವಂತೆ ಮಾತನಾಡಬಾರದು. ಹಡಪದ ಜನಾಂಗ ಆರ್ಥಿಕವಾಗಿ ಬೆಳವಣಿಗೆ ಹೊಂದಲು ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು. ಲಿಂ. ಬಸವಪ್ರಿಯ ಅಪ್ಪಣ್ಣನವರ ಗದ್ದುಗೆಯನ್ನು ದೇವಸ್ಥಾನವನ್ನಾಗಿ ಅಭಿವೃದ್ಧಿಪಡಿಸಲು ವಯಕ್ತಿಕವಾಗಿ ಒಂದು ಲಕ್ಷ ರೂ. ಅನುದಾನ ನೀಡುವುದಾಗಿ ವಾಗ್ದಾನ ಮಾಡಿದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸಿದ್ಧರಾಮಯ್ಯನವರ ಅವಧಿಯಲ್ಲಿ ಹಡಪದ ಅಪ್ಪಣ್ಣ ಗುರುಪೀಠದ ಅಭಿವೃದ್ಧಿಗೆ ಒಂದು ಕೋಟಿ ರೂ.ಅನುದಾನ ಒದಗಿಸಲಾಗಿದೆ. ಹಡಪದ ಸಮಾಜದ ಏಳ್ಗೆಗೆ ಸರ್ಕಾರ ಬದ್ಧವಾಗಿದೆ ಎಂದರು.

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಮಾತನಾಡಿ, ಹಡಪದ ಅಪ್ಪಣ್ಣನವರನ್ನು ಬಸವಣ್ಣನವರು ತಮ್ಮ ಕಾರ್ಯದರ್ಶಿಗಳಾಗಿ ಮಾಡಿಕೊಂಡು ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ತಂಗಡಗಿಯನ್ನು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಳಕಲ್ ಚಿತ್ತರಗಿ ವಿಜಯ ಮಹಾಂತೇಶ ಮಠದ ಗುರುಮಹಾಂತ ಸ್ವಾಮೀಜಿ, ಚಿತ್ರದುರ್ಗದ ಮಾಚಿದೇವ ಸಂಸ್ಥಾನ ಮಠದ ಬಸವ ಮಾಚಿದೇವ ಸ್ವಾಮೀಜಿ, ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ, ಟ್ರಸ್ಟ್ನ ಗೌರವಾಧ್ಯಕ್ಷ ಎಂ.ಎಸ್.ನಾವಿ, ನೌಕರರ ಸಂಘದ ಪ್ರಕಾಶ ಹಡಪದ, ಜಿಲ್ಲಾಧ್ಯಕ್ಷ ವಿ.ಜಿ.ಕತ್ನಳ್ಳಿ, ನಿಂಗಪ್ಪ ನಾವಿ, ಮಹಾಂತೇಶ ಮೂಲಿಮನಿ, ಸಿ.ಎಫ್.ನಾವಿ, ನಾಗೇಶ ನಾಗೂರ, ಓಂಕಾರ ನಾವಿ, ಸೋಮನಗೌಡ ಪಾಟೀಲ ನಡಹಳ್ಳಿ ಮೊದಲಾದವರು ಇದ್ದರು.

ಎಸ್.ಎಸ್.ಎಲ್.ಸಿ.,ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ