Discussion on problems of factory workers by Minister Lad

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು.

ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:
ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು. ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಈ ವೇಳೆ ಆಡಳಿತ ಮಂಡಳಿಯವರಿಗೆ ಸಚಿವರು ಸೂಚಿಸಿದರು.

ಗೃಹ ಕಾರ್ಮಿಕರ ಸಮಸ್ಯೆ ಚರ್ಚೆ:
ಕರ್ನಾಟಕ ಗೃಹ ಕಾರ್ಮಿಕರ ವೇದಿಕೆ ಬೆಂಗಳೂರು ಇವರ ಮನವಿ ಮೇರೆಗೆ ಸಚಿವ ಲಾಡ್‌ ಅವರು, ಗೃಹ ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಎಂವಿ ಫೋಟೋ ಒಲ್ಟಾಯಿಕ್ ಪವರ್ ಕಾರ್ಮಿಕರ ಸಮಸ್ಯೆ ಚರ್ಚೆ:
ಹಾಗೆಯೇ ಎಂವಿ ಫೋಟೋ ಒಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಎಲ್ಲಾ ಸಭೆಗಳಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತರಾದ ಶ್ರೀ ರವಿಕುಮಾರ್, ಗೃಹ ಕಾರ್ಮಿಕ ವೇದಿಕೆಯ ಪ್ರಮುಖರು, ಕಂಪನಿಯ ಆಡಳಿತ ಮಂಡಳಿ ಮುಖ್ಯಸ್ಥರು, ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು