A member who unraveled a series of problems in the Hescom office premises

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಕಳೆದ ಇಪ್ಪತ್ತು ವರ್ಷಗಳಿಂದ ನಾನು ನೋಡಿಕೊಂಡೇ ಬಂದಿದ್ದು ಸರಿಯಾದ ಸ್ಪಂದನೆ ಸಿಗುವುದಿಲ್ಲ. ಇಲ್ಲಿ ‘ಹಲವು ರೀತಿಯ ವ್ಯವಹಾರ’ ನಡೆಯುತ್ತವೆ ಎಂದು ಹೆಸ್ಕಾಂ ಗ್ರಾಹಕರ ಸಲಹಾ ಸಮೀತಿ ಸದಸ್ಯೆ ಕವಿತಾ ದಡ್ಡಿ ಅಧಿಕಾರಿಗಳ ಕಾರ್ಯವೈಖರಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣದ ಹೆಸ್ಕಾಂ ಕಚೇರಿಯ ಆವರಣದಲ್ಲಿ ಗುರುವಾರ ಗ್ರಾಹಕರ ಸಲಹಾ ಸಮಿತಿಗೆ ನೇಮಕಗೊಂಡ ನೂತನ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಲ್ಲಿನ ಹೆಸ್ಕಾಂ ಕಚೇರಿ ಆವರಣದಲ್ಲಿರುವ ಆಲದಮರದ ಕಟ್ಟೆ,ಈಶ್ವರ ಗುಡಿಯಲ್ಲಿ ಅನಧಿಕೃತ ವ್ಯಕ್ತಿಗಳು ಇಸ್ಪೀಟ್ ಆಡುತ್ತಾ ಕೂರುತ್ತಾರೆ. ಕಚೇರಿಗೆ ಬಿಲ್ ತುಂಬಲು ಬರುವ ಮಹಿಳೆಯರು ಮುಜುಗರದಿಂದ ಕಚೇರಿಗೆ ಬರುವ ದುಸ್ಥಿತಿ ಇದೆ. ಕಚೇರಿಯಲ್ಲಿ ಯಾವುದಕ್ಕೂ ಸರಿಯಾದ ಸ್ಪಂದನೆ ಸಿಗುವುದಿಲ್ಲ. ಗ್ರಾಹಕರಿಗೆ ಒಳ್ಳೆಯ ಸೇವೆ ಕೊಡುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ಹೇಳಿದರು.

ಹೆಸ್ಕಾಂ ಸ್ಟೇಷನ್‌ದಲ್ಲೂ ನಡೆಯಬಾರದ ಚಟುವಟಿಕೆಗಳು ನಡೆಯುತ್ತವೆ ಎಂಬ ದೂರುಗಳಿವೆ. ಇಲ್ಲಿ ನಿಮ್ಮದೇ ಸಿಬ್ಬಂದಿಯ ವಸತಿಗೃಹಗಳಿದ್ದು ಮಹಿಳೆಯರು, ಮಕ್ಕಳು ಇರುತ್ತಾರೆ. ಅವರ ಮೇಲೆ ಕಚೇರಿ ಆವರಣದಲ್ಲಿ ನಡೆಯುವ ಅನಧಿಕೃತ ಚಟುವಟಿಕೆಗಳು ಪರಿಣಾಮ ಬೀರುತ್ತವೆ. ಇದಕ್ಕೆಲ್ಲ ಇನ್ನು ಮುಂದೆ ಕಡಿವಾಣ ಹಾಕಬೇಕು ಎಂದು ಸೂಚಿಸಿದರು.
ರೈತರ ಪ್ರತಿನಿಧಿ ಸಾಯೇಬಣ್ಣ ವಾಲೀಕಾರ ಮಾತನಾಡಿ, ಹೆಸ್ಕಾಂ ನಿಂದ ನೇಬಗೇರಿ, ಕೋಳೂರು, ಹಡಲಗೇರಿ ಭಾಗದಲ್ಲಿ ತೋಟಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ರೈತರು ಹೇಳುತ್ತಿದ್ದಾರೆ. ಇದನ್ನು ಸರಿಪಡಿಸಬೇಕು ಎಂದು ತಿಳಿಸಿದರು.

ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ ಮಾತನಾಡಿ, ಗ್ರಾಹಕರ ಸಲಹಾ ಸಮಿತಿ ಸದಸ್ಯರು ಕಚೇರಿ ಆವರಣದಲ್ಲಿ ನಡೆಯುವ ಚಟುವಟಿಕೆಗಳ ಕುರಿತು ಈಗಾಗಲೇ ಭಾಗಶಃ ಕಡಿವಾಣ ಹಾಕಿದ್ದು ಪೊಲೀಸರ ಗಮನಕ್ಕೆ ತಂದು ಕಚೇರಿಯ ಆವರಣದಲ್ಲಿ ಮತ್ತಷ್ಟು ಭದ್ರತೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರಲ್ಲದೇ ಕಚೇರಿ ಆವರಣದಲ್ಲಿ ಸಿಸಿ ಟಿವಿ ಅಳವಡಿಕೆ ಬಗ್ಗೆ ಮೇಲಧಿಕಾರಿಗಳಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಸಮೀತಿ ಸದಸ್ಯ ಸಿಕಂದರ್ ಜಾನ್ವೇಕರ, ನಾಗೇಶ ಭಜಂತ್ರಿ, ಬಸಲಿಂಗಪ್ಪಗೌಡ ಬಿರಾದಾರ, ಹೆಸ್ಕಾಂ ಸೆಕ್ಷನ್ ಅಧಿಕಾರಿಗಳಾದ ಮಲ್ಲಿಕಾರ್ಜುನ ಹೊಳಿ, ಎಂ. ಎಸ್. ತೆಗ್ಗಿನಮಠ, ಬಿ. ಎಸ್. ಯಲಗೋಡ, ಎ. ಎನ್. ಬಿರಾದಾರ, ಸಂತೋಷ ನಡಗೇರಿ, ಮೈನೂದ್ದೀನ ಜಹಾಗೀದಾರ, ಲೆಕ್ಕಾಧಿಕಾರಿ ಬಿ. ಎ. ಮಡಿವಾಳರ, ಕುಂಟೋಜಿ ಗ್ರಾಪಂ ಅಧ್ಯಕ್ಷ ಜಗದೀಶ ಲಮಾಣಿ,ಮೈಬೂಬ ದಖನಿ ಇದ್ದರು.

ಹೆಸ್ಕಾಂ ಕಚೇರಿಯ ಆವರಣ ಮಳೆ ಬಂದರೆ ಸಾಕು ತಗ್ಗುದಿನ್ನೆಗಳಿಂದ ಆವರಿಸುತ್ತದೆ. ಬಿಲ್ ಕಲೆಕ್ಟರ್‌ಗಳಿಂದ ಸರಿಯಾಗಿ ಕೆಲಸ ಮಾಡಿಸಿಕೊಳ್ಳಬೇಕು. ಕುಡಿದು ಕೆಲವರು ಕಚೇರಿ ಬರುತ್ತಾರೆ. ಸಿಬ್ಬಂದಿ, ನೌಕರರ ಮೇಲೆ ಮೇಲಧಿಕಾರಿಗಳು ಸರಿಯಾದ ಬಿಗಿ ಇಟ್ಟುಕೊಳ್ಳಬೇಕು. ಹೆಸ್ಕಾಂ ಕಚೇರಿಯ ಹೊರಗಡೆ ನಾಮಫಲಕ ಹಾಕಬೇಕು.

ಹೆಸ್ಕಾಂ ಗ್ರಾಹಕರ ಸಲಹಾ ಸಮೀತಿ ಸದಸ್ಯರು

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ