A member who unraveled a series of problems in the Hescom office premises

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಕಳೆದ ಇಪ್ಪತ್ತು ವರ್ಷಗಳಿಂದ ನಾನು ನೋಡಿಕೊಂಡೇ ಬಂದಿದ್ದು ಸರಿಯಾದ ಸ್ಪಂದನೆ ಸಿಗುವುದಿಲ್ಲ. ಇಲ್ಲಿ ‘ಹಲವು ರೀತಿಯ ವ್ಯವಹಾರ’ ನಡೆಯುತ್ತವೆ ಎಂದು ಹೆಸ್ಕಾಂ ಗ್ರಾಹಕರ ಸಲಹಾ ಸಮೀತಿ ಸದಸ್ಯೆ ಕವಿತಾ ದಡ್ಡಿ ಅಧಿಕಾರಿಗಳ ಕಾರ್ಯವೈಖರಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣದ ಹೆಸ್ಕಾಂ ಕಚೇರಿಯ ಆವರಣದಲ್ಲಿ ಗುರುವಾರ ಗ್ರಾಹಕರ ಸಲಹಾ ಸಮಿತಿಗೆ ನೇಮಕಗೊಂಡ ನೂತನ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಲ್ಲಿನ ಹೆಸ್ಕಾಂ ಕಚೇರಿ ಆವರಣದಲ್ಲಿರುವ ಆಲದಮರದ ಕಟ್ಟೆ,ಈಶ್ವರ ಗುಡಿಯಲ್ಲಿ ಅನಧಿಕೃತ ವ್ಯಕ್ತಿಗಳು ಇಸ್ಪೀಟ್ ಆಡುತ್ತಾ ಕೂರುತ್ತಾರೆ. ಕಚೇರಿಗೆ ಬಿಲ್ ತುಂಬಲು ಬರುವ ಮಹಿಳೆಯರು ಮುಜುಗರದಿಂದ ಕಚೇರಿಗೆ ಬರುವ ದುಸ್ಥಿತಿ ಇದೆ. ಕಚೇರಿಯಲ್ಲಿ ಯಾವುದಕ್ಕೂ ಸರಿಯಾದ ಸ್ಪಂದನೆ ಸಿಗುವುದಿಲ್ಲ. ಗ್ರಾಹಕರಿಗೆ ಒಳ್ಳೆಯ ಸೇವೆ ಕೊಡುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ಹೇಳಿದರು.

ಹೆಸ್ಕಾಂ ಸ್ಟೇಷನ್‌ದಲ್ಲೂ ನಡೆಯಬಾರದ ಚಟುವಟಿಕೆಗಳು ನಡೆಯುತ್ತವೆ ಎಂಬ ದೂರುಗಳಿವೆ. ಇಲ್ಲಿ ನಿಮ್ಮದೇ ಸಿಬ್ಬಂದಿಯ ವಸತಿಗೃಹಗಳಿದ್ದು ಮಹಿಳೆಯರು, ಮಕ್ಕಳು ಇರುತ್ತಾರೆ. ಅವರ ಮೇಲೆ ಕಚೇರಿ ಆವರಣದಲ್ಲಿ ನಡೆಯುವ ಅನಧಿಕೃತ ಚಟುವಟಿಕೆಗಳು ಪರಿಣಾಮ ಬೀರುತ್ತವೆ. ಇದಕ್ಕೆಲ್ಲ ಇನ್ನು ಮುಂದೆ ಕಡಿವಾಣ ಹಾಕಬೇಕು ಎಂದು ಸೂಚಿಸಿದರು.
ರೈತರ ಪ್ರತಿನಿಧಿ ಸಾಯೇಬಣ್ಣ ವಾಲೀಕಾರ ಮಾತನಾಡಿ, ಹೆಸ್ಕಾಂ ನಿಂದ ನೇಬಗೇರಿ, ಕೋಳೂರು, ಹಡಲಗೇರಿ ಭಾಗದಲ್ಲಿ ತೋಟಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ರೈತರು ಹೇಳುತ್ತಿದ್ದಾರೆ. ಇದನ್ನು ಸರಿಪಡಿಸಬೇಕು ಎಂದು ತಿಳಿಸಿದರು.

ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ ಮಾತನಾಡಿ, ಗ್ರಾಹಕರ ಸಲಹಾ ಸಮಿತಿ ಸದಸ್ಯರು ಕಚೇರಿ ಆವರಣದಲ್ಲಿ ನಡೆಯುವ ಚಟುವಟಿಕೆಗಳ ಕುರಿತು ಈಗಾಗಲೇ ಭಾಗಶಃ ಕಡಿವಾಣ ಹಾಕಿದ್ದು ಪೊಲೀಸರ ಗಮನಕ್ಕೆ ತಂದು ಕಚೇರಿಯ ಆವರಣದಲ್ಲಿ ಮತ್ತಷ್ಟು ಭದ್ರತೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರಲ್ಲದೇ ಕಚೇರಿ ಆವರಣದಲ್ಲಿ ಸಿಸಿ ಟಿವಿ ಅಳವಡಿಕೆ ಬಗ್ಗೆ ಮೇಲಧಿಕಾರಿಗಳಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಸಮೀತಿ ಸದಸ್ಯ ಸಿಕಂದರ್ ಜಾನ್ವೇಕರ, ನಾಗೇಶ ಭಜಂತ್ರಿ, ಬಸಲಿಂಗಪ್ಪಗೌಡ ಬಿರಾದಾರ, ಹೆಸ್ಕಾಂ ಸೆಕ್ಷನ್ ಅಧಿಕಾರಿಗಳಾದ ಮಲ್ಲಿಕಾರ್ಜುನ ಹೊಳಿ, ಎಂ. ಎಸ್. ತೆಗ್ಗಿನಮಠ, ಬಿ. ಎಸ್. ಯಲಗೋಡ, ಎ. ಎನ್. ಬಿರಾದಾರ, ಸಂತೋಷ ನಡಗೇರಿ, ಮೈನೂದ್ದೀನ ಜಹಾಗೀದಾರ, ಲೆಕ್ಕಾಧಿಕಾರಿ ಬಿ. ಎ. ಮಡಿವಾಳರ, ಕುಂಟೋಜಿ ಗ್ರಾಪಂ ಅಧ್ಯಕ್ಷ ಜಗದೀಶ ಲಮಾಣಿ,ಮೈಬೂಬ ದಖನಿ ಇದ್ದರು.

ಹೆಸ್ಕಾಂ ಕಚೇರಿಯ ಆವರಣ ಮಳೆ ಬಂದರೆ ಸಾಕು ತಗ್ಗುದಿನ್ನೆಗಳಿಂದ ಆವರಿಸುತ್ತದೆ. ಬಿಲ್ ಕಲೆಕ್ಟರ್‌ಗಳಿಂದ ಸರಿಯಾಗಿ ಕೆಲಸ ಮಾಡಿಸಿಕೊಳ್ಳಬೇಕು. ಕುಡಿದು ಕೆಲವರು ಕಚೇರಿ ಬರುತ್ತಾರೆ. ಸಿಬ್ಬಂದಿ, ನೌಕರರ ಮೇಲೆ ಮೇಲಧಿಕಾರಿಗಳು ಸರಿಯಾದ ಬಿಗಿ ಇಟ್ಟುಕೊಳ್ಳಬೇಕು. ಹೆಸ್ಕಾಂ ಕಚೇರಿಯ ಹೊರಗಡೆ ನಾಮಫಲಕ ಹಾಕಬೇಕು.

ಹೆಸ್ಕಾಂ ಗ್ರಾಹಕರ ಸಲಹಾ ಸಮೀತಿ ಸದಸ್ಯರು

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು