Minister Santhosh Lad launched our Nagar, Swachh Nagar special campaign

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ʼನಮ್ಮ ನಗರ; ಸ್ವಚ್ಛ ನಗರʼ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಳಮಡ್ಡಿ ಸುತ್ತಮುತ್ತಲಿನ ಪ್ರದೇಶ, ರೈಲು ನಿಲ್ದಾಣ ರಸ್ತೆ ಸಮೀಪ ಹಾಗೂ ಮಹಿಷಿ ರಸ್ತೆ ಹತ್ತಿರ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತಾ ಅಭಿಯಾನಕ್ಕೆ ಸಾರ್ವಜನಿಕರಾದ ನೀವು ಕೈ ಜೋಡಿಸಿ ನಮ್ಮ ನಗರ, ಸ್ವಚ್ಛ ನಗರ ಎಂಬ ಅಭಿಮಾನ ಪ್ರಜ್ಞೆ ನಗರದ ಪ್ರತಿ ನಾಗರಿಕರಲ್ಲಿ ಇರಬೇಕು. ಅಂದಾಗ ಮಾತ್ರ ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮಹಾನಗರ ಪಾಲಿಕೆಯಿಂದ ಆರಂಭಿಸಿರುವ ಸ್ವಚ್ಛತಾ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಿ ಹಾಗೂ ನಗರ ನಿವಾಸಿಗಳು ಸಕ್ರಿಯವಾಗಿ ಭಾಗವಹಿಸಿದರೆ, ನಗರ ಸ್ವಚ್ಛತೆ ಕಾಪಾಡಬಹುದು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಮಹಾನಗರ ಪಾಲಿಕೆಯಿಂದ ಈ ಸ್ವಚ್ಛತಾ ಅಭಿಯಾನವನ್ನು ಪ್ರತಿವಾರ ನಡೆಸಬೇಕು. ಅವಳಿನಗರದ ನಾಗರಿಕರಲ್ಲಿ ಹೆಚ್ಚೆಚ್ಚು ಸಿವಿಕ್ ಸೆನ್ಸ್ ಬಳಸಬೇಕು. ಪ್ರತಿಯೊಬ್ಬರು ಪೌರ ಕಾರ್ಮಿಕರಂತೆ ತಮ್ಮ ಮನೆ ಹಾಗೂ ತಮ್ಮ ಮನೆ ಸುತ್ತಮುತ್ತಲಿನ ಪ್ರದೇಶವನ್ನು ತಾವೇ ಪ್ರತಿದಿನ ಸ್ವಚ್ಛವಾಗಿ ಇಡಬೇಕು. ತಮ್ಮ ಮನೆಯ ಹಿಂದೆ ಮುಂದೆ ಸರಕಾರಿ ಜಮೀನು, ರಸ್ತೆ ಇದ್ದರೂ ಅದು ತಮ್ಮದೆಂದು ತಿಳಿದು ಕ್ಲೀನ್ ಮಾಡಿ ಇಟ್ಟಕೊಳ್ಳಬೇಕು. ಇದು ನಮ್ಮ ನಗರ ಎಂಬ ಹೆಮ್ಮೆ ಮತ್ತು ಇದು ನನ್ನ ಕೆಲಸ ಎಂಬ ಭಾವನೆ ಇದ್ದಾಗ ಮಾತ್ರ ನಗರ ಸುಂದರ, ಹಸಿರು ಆಗಲು ಸಾಧ್ಯವೆಂದು ಸಚಿವರು ತಿಳಿಸಿದರು.

ಧಾರವಾಡ ನಗರದಲ್ಲಿ ರೈಲ್ವೆ ಸ್ಟೇಶನ್, ಮಾಳ ಮಡ್ಡಿ, ವನವಾಸಿ ರಾಮಮಂದಿರ, ಕಬ್ಬೂರ ರಸ್ತೆ ಮತ್ತು ರಾಮನಗೌಡ ಆಸ್ಪತ್ರೆ, ಮಾಳಾಪುರ ಲಾಸ್ಟ್ ಬಸ್ ನಿಲ್ದಾಣ, ಮತ್ತು ಶಿವಾಜಿ ಸರ್ಕಲ್, ಹೆಬ್ಬಳ್ಳಿ ಅಗಸಿ, ಚರಂತಿಮಠ ಗಾರ್ಡನ್, ಹೊಸಯಲ್ಲಾಪುರ ರಸ್ತೆ ಮತ್ತು ಪೌಲ್ ಕ್ಯಾಂಟಿನ್, ಸರಸಗಂಗಾ ಶಾಲೆ, ಜನ್ನತನಗರ ಪ್ರದೇಶಗಳಿಗೆ ಭೇಟಿ ನೀಡಿ, ಪೌರಕಾರ್ಮಿಕರೊಂದಿಗೆ ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಿ, ಸಲಿಕೆಯಿಂದ ತ್ಯಾಜ್ಯ ಸಂಗ್ರಹಿಸಿದರು, ಬುಟ್ಟಿ ತುಂಬಿ ಕಸದ ಟ್ರ್ಯಾಕ್ಟರಿಗೆ ಸ್ವತಃ ಕಸ ಹಾಕಿದರು. ಕಸಬರಿಗೆಯಿಂದ ಕಸಗೂಡಿಸಿದರು. ಸಚಿವರು, ಜಿಲ್ಲಾಧಿಕಾರಿಗಳು ಬುಟ್ಟಿ, ಕಸಬರಿಗೆ ಹಿಡಿದು ಸ್ವಚ್ಛತೆಗೆ ಕೈ ಜೋಡಿಸಿದ್ದರಿಂದ, ಪೌರಕಾರ್ಮಿಕರ ಆತ್ಮಸ್ಥೈರ್ಯ ಹೆಚ್ಚಿ, ಅವರ ಅಭಿಮಾನ, ಗೌರವ, ಹೆಮ್ಮೆಯಿಂದ ಇನ್ನಷ್ಟು ಕೆಲಸ ಮಾಡಲು ಸ್ಫೂರ್ತಿ ದೊರೆಯಿತು.

ಅಭಿಯಾನದಲ್ಲಿ ಜಿ.ಪಂ. ಸಿಇಓ ಭುವನೇಶ ಪಾಟೀಲ, ಎಸ್.ಪಿ. ಡಾ.ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಆದಿಯಾಗಿ ಜಿಲ್ಲೆಯ ಎಲ್ಲ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ತಮ್ಮ ಇಲಾಖೆ, ಕಚೇರಿ ಸಿಬ್ಬಂದಿಗಳೊಂದಿಗೆ ಭಾಗವಹಿಸಿ, ಸಚಿವರ ಕನಸಿನ ಸ್ವಚ್ಛನಗರ ಅಭಿಯಾನಕ್ಕೆ ಕೈ ಜೋಡಿಸಿ, ಕಸಕಡ್ಡಿ, ಚರಂಡಿ ತ್ಯಾಜ್ಯ ತೆಗೆದರು.

ಕೊಳೆತ ಕಸಕಡ್ಡಿ ಚಲ್ಲಬೇಡಿ: ಚರಂಡಿ ಸ್ವಚ್ಛಗೊಳಿಸುವುದು, ತ್ಯಾಜ್ಯದ ಕಸ ತುಂಬುವುದು, ಪರಿಕರಗಳಿಂದ ತ್ಯಾಜ್ಯ ತುಂಬುವುದರ ಮೂಲಕ ಅವರು ಎಲ್ಲೆಂದರಲ್ಲಿ ಕಸ, ಮುಸುರೆ, ತ್ಯಾಜ್ಯ ಚೆಲ್ಲದಂತೆ ಹಾಗೂ ಅಲ್ಲಿಯೇ ತರಕಾರಿ ಮಾರುವವರಿಗೆ ಬೇಡವಾದ, ಕೊಳೆತ ತಪ್ಪಲು, ತರಕಾರಿಯನ್ನು ಎಲ್ಲಿ ಬೇಕಂದರಲ್ಲಿ ಎಸೆಯದಂತೆ ಸಚಿವರು ವಿನಂತಿಸಿದರು.

ಹೂಳು ತುಂಬಿದ ಚರಂಡಿ ಕ್ಲೀನ್: ಧಾರವಾಡ ರೈಲ್ವೆ ಸ್ಟೇಷನ್ ರಸ್ತೆ ಹತ್ತಿರ ಹುಳು ತುಂಬಿದ ಗಟಾರು ಸ್ವತಃ ಅವರೇ ಸ್ವಚ್ಛಗೊಳಿಸಿದರು, ಕಸಚಲ್ಲಿದ ಬ್ಲ್ಯಾಕ್ ಸ್ಪಾಟ್ ಗಳನ್ನು ಎಲ್ಲಾ ಅಧಿಕಾರಿಗಳು ಸೇರಿಕೊಂಡು ಸ್ವಚ್ಛತೆ ಕಾರ್ಯ ಮಾಡಿದರು. ಮನೆಯ ಕಾಂಪೌಂಡಿಗೆ ಹಚ್ಚಿ ಫುಟಪಾತ್ ಮೇಲೆ ಮಣ್ಣಿನ ರಾಶಿ ಬಿದ್ದಿರುವುದನ್ನು ಕಂಡು ತಕ್ಷಣವೇ ಜೆಸಿಬಿ ಮುಖಾಂತರ ತೆರವುಗೊಳಿಸಿದರು. ರಸ್ತೆಯಿಂದ ಮೇಲಿರುವ ಮತ್ತು ಕೆಳಗಿರುವ ಮ್ಯಾನ್ ಹೋಲ್ ಮುಚ್ಚಳಗಳು, ಕಸ ತುಂಬಿದ ಖಾಲಿ ಸೈಟ್‍ಗಳನ್ನು ಪರಿಶೀಲಿಸಿ, ತಕ್ಷಣ ಸಂಬಂಧಿಸಿದವರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದರು.

ಸ್ವಚ್ಛತಾ ಅಭಿಯಾನದಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ರಿತಿಕಾ ವರ್ಮಾ, ಮಹಾನಗರಪಾಲಿಕೆ ಮಹಾಪೌರ ರಾಮಪ್ಪ ಬಡಿಗೇರ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ ಸಂತೋಷ ಬಿರಾದಾರ, ಶಾಲಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎಸ್. ಕೆಳದಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಮಹಾನಗರಪಾಲಿಕೆಯ ಸದಸ್ಯರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು, ಶಿಕ್ಷಕರು, ಇತರ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಪೌರಕಾರ್ಮಿಕರು ಭಾಗವಹಿಸಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ