Minister Santhosh Lad launched our Nagar, Swachh Nagar special campaign

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ʼನಮ್ಮ ನಗರ; ಸ್ವಚ್ಛ ನಗರʼ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಳಮಡ್ಡಿ ಸುತ್ತಮುತ್ತಲಿನ ಪ್ರದೇಶ, ರೈಲು ನಿಲ್ದಾಣ ರಸ್ತೆ ಸಮೀಪ ಹಾಗೂ ಮಹಿಷಿ ರಸ್ತೆ ಹತ್ತಿರ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತಾ ಅಭಿಯಾನಕ್ಕೆ ಸಾರ್ವಜನಿಕರಾದ ನೀವು ಕೈ ಜೋಡಿಸಿ ನಮ್ಮ ನಗರ, ಸ್ವಚ್ಛ ನಗರ ಎಂಬ ಅಭಿಮಾನ ಪ್ರಜ್ಞೆ ನಗರದ ಪ್ರತಿ ನಾಗರಿಕರಲ್ಲಿ ಇರಬೇಕು. ಅಂದಾಗ ಮಾತ್ರ ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮಹಾನಗರ ಪಾಲಿಕೆಯಿಂದ ಆರಂಭಿಸಿರುವ ಸ್ವಚ್ಛತಾ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಿ ಹಾಗೂ ನಗರ ನಿವಾಸಿಗಳು ಸಕ್ರಿಯವಾಗಿ ಭಾಗವಹಿಸಿದರೆ, ನಗರ ಸ್ವಚ್ಛತೆ ಕಾಪಾಡಬಹುದು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಮಹಾನಗರ ಪಾಲಿಕೆಯಿಂದ ಈ ಸ್ವಚ್ಛತಾ ಅಭಿಯಾನವನ್ನು ಪ್ರತಿವಾರ ನಡೆಸಬೇಕು. ಅವಳಿನಗರದ ನಾಗರಿಕರಲ್ಲಿ ಹೆಚ್ಚೆಚ್ಚು ಸಿವಿಕ್ ಸೆನ್ಸ್ ಬಳಸಬೇಕು. ಪ್ರತಿಯೊಬ್ಬರು ಪೌರ ಕಾರ್ಮಿಕರಂತೆ ತಮ್ಮ ಮನೆ ಹಾಗೂ ತಮ್ಮ ಮನೆ ಸುತ್ತಮುತ್ತಲಿನ ಪ್ರದೇಶವನ್ನು ತಾವೇ ಪ್ರತಿದಿನ ಸ್ವಚ್ಛವಾಗಿ ಇಡಬೇಕು. ತಮ್ಮ ಮನೆಯ ಹಿಂದೆ ಮುಂದೆ ಸರಕಾರಿ ಜಮೀನು, ರಸ್ತೆ ಇದ್ದರೂ ಅದು ತಮ್ಮದೆಂದು ತಿಳಿದು ಕ್ಲೀನ್ ಮಾಡಿ ಇಟ್ಟಕೊಳ್ಳಬೇಕು. ಇದು ನಮ್ಮ ನಗರ ಎಂಬ ಹೆಮ್ಮೆ ಮತ್ತು ಇದು ನನ್ನ ಕೆಲಸ ಎಂಬ ಭಾವನೆ ಇದ್ದಾಗ ಮಾತ್ರ ನಗರ ಸುಂದರ, ಹಸಿರು ಆಗಲು ಸಾಧ್ಯವೆಂದು ಸಚಿವರು ತಿಳಿಸಿದರು.

ಧಾರವಾಡ ನಗರದಲ್ಲಿ ರೈಲ್ವೆ ಸ್ಟೇಶನ್, ಮಾಳ ಮಡ್ಡಿ, ವನವಾಸಿ ರಾಮಮಂದಿರ, ಕಬ್ಬೂರ ರಸ್ತೆ ಮತ್ತು ರಾಮನಗೌಡ ಆಸ್ಪತ್ರೆ, ಮಾಳಾಪುರ ಲಾಸ್ಟ್ ಬಸ್ ನಿಲ್ದಾಣ, ಮತ್ತು ಶಿವಾಜಿ ಸರ್ಕಲ್, ಹೆಬ್ಬಳ್ಳಿ ಅಗಸಿ, ಚರಂತಿಮಠ ಗಾರ್ಡನ್, ಹೊಸಯಲ್ಲಾಪುರ ರಸ್ತೆ ಮತ್ತು ಪೌಲ್ ಕ್ಯಾಂಟಿನ್, ಸರಸಗಂಗಾ ಶಾಲೆ, ಜನ್ನತನಗರ ಪ್ರದೇಶಗಳಿಗೆ ಭೇಟಿ ನೀಡಿ, ಪೌರಕಾರ್ಮಿಕರೊಂದಿಗೆ ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಿ, ಸಲಿಕೆಯಿಂದ ತ್ಯಾಜ್ಯ ಸಂಗ್ರಹಿಸಿದರು, ಬುಟ್ಟಿ ತುಂಬಿ ಕಸದ ಟ್ರ್ಯಾಕ್ಟರಿಗೆ ಸ್ವತಃ ಕಸ ಹಾಕಿದರು. ಕಸಬರಿಗೆಯಿಂದ ಕಸಗೂಡಿಸಿದರು. ಸಚಿವರು, ಜಿಲ್ಲಾಧಿಕಾರಿಗಳು ಬುಟ್ಟಿ, ಕಸಬರಿಗೆ ಹಿಡಿದು ಸ್ವಚ್ಛತೆಗೆ ಕೈ ಜೋಡಿಸಿದ್ದರಿಂದ, ಪೌರಕಾರ್ಮಿಕರ ಆತ್ಮಸ್ಥೈರ್ಯ ಹೆಚ್ಚಿ, ಅವರ ಅಭಿಮಾನ, ಗೌರವ, ಹೆಮ್ಮೆಯಿಂದ ಇನ್ನಷ್ಟು ಕೆಲಸ ಮಾಡಲು ಸ್ಫೂರ್ತಿ ದೊರೆಯಿತು.

ಅಭಿಯಾನದಲ್ಲಿ ಜಿ.ಪಂ. ಸಿಇಓ ಭುವನೇಶ ಪಾಟೀಲ, ಎಸ್.ಪಿ. ಡಾ.ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಆದಿಯಾಗಿ ಜಿಲ್ಲೆಯ ಎಲ್ಲ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ತಮ್ಮ ಇಲಾಖೆ, ಕಚೇರಿ ಸಿಬ್ಬಂದಿಗಳೊಂದಿಗೆ ಭಾಗವಹಿಸಿ, ಸಚಿವರ ಕನಸಿನ ಸ್ವಚ್ಛನಗರ ಅಭಿಯಾನಕ್ಕೆ ಕೈ ಜೋಡಿಸಿ, ಕಸಕಡ್ಡಿ, ಚರಂಡಿ ತ್ಯಾಜ್ಯ ತೆಗೆದರು.

ಕೊಳೆತ ಕಸಕಡ್ಡಿ ಚಲ್ಲಬೇಡಿ: ಚರಂಡಿ ಸ್ವಚ್ಛಗೊಳಿಸುವುದು, ತ್ಯಾಜ್ಯದ ಕಸ ತುಂಬುವುದು, ಪರಿಕರಗಳಿಂದ ತ್ಯಾಜ್ಯ ತುಂಬುವುದರ ಮೂಲಕ ಅವರು ಎಲ್ಲೆಂದರಲ್ಲಿ ಕಸ, ಮುಸುರೆ, ತ್ಯಾಜ್ಯ ಚೆಲ್ಲದಂತೆ ಹಾಗೂ ಅಲ್ಲಿಯೇ ತರಕಾರಿ ಮಾರುವವರಿಗೆ ಬೇಡವಾದ, ಕೊಳೆತ ತಪ್ಪಲು, ತರಕಾರಿಯನ್ನು ಎಲ್ಲಿ ಬೇಕಂದರಲ್ಲಿ ಎಸೆಯದಂತೆ ಸಚಿವರು ವಿನಂತಿಸಿದರು.

ಹೂಳು ತುಂಬಿದ ಚರಂಡಿ ಕ್ಲೀನ್: ಧಾರವಾಡ ರೈಲ್ವೆ ಸ್ಟೇಷನ್ ರಸ್ತೆ ಹತ್ತಿರ ಹುಳು ತುಂಬಿದ ಗಟಾರು ಸ್ವತಃ ಅವರೇ ಸ್ವಚ್ಛಗೊಳಿಸಿದರು, ಕಸಚಲ್ಲಿದ ಬ್ಲ್ಯಾಕ್ ಸ್ಪಾಟ್ ಗಳನ್ನು ಎಲ್ಲಾ ಅಧಿಕಾರಿಗಳು ಸೇರಿಕೊಂಡು ಸ್ವಚ್ಛತೆ ಕಾರ್ಯ ಮಾಡಿದರು. ಮನೆಯ ಕಾಂಪೌಂಡಿಗೆ ಹಚ್ಚಿ ಫುಟಪಾತ್ ಮೇಲೆ ಮಣ್ಣಿನ ರಾಶಿ ಬಿದ್ದಿರುವುದನ್ನು ಕಂಡು ತಕ್ಷಣವೇ ಜೆಸಿಬಿ ಮುಖಾಂತರ ತೆರವುಗೊಳಿಸಿದರು. ರಸ್ತೆಯಿಂದ ಮೇಲಿರುವ ಮತ್ತು ಕೆಳಗಿರುವ ಮ್ಯಾನ್ ಹೋಲ್ ಮುಚ್ಚಳಗಳು, ಕಸ ತುಂಬಿದ ಖಾಲಿ ಸೈಟ್‍ಗಳನ್ನು ಪರಿಶೀಲಿಸಿ, ತಕ್ಷಣ ಸಂಬಂಧಿಸಿದವರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದರು.

ಸ್ವಚ್ಛತಾ ಅಭಿಯಾನದಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ರಿತಿಕಾ ವರ್ಮಾ, ಮಹಾನಗರಪಾಲಿಕೆ ಮಹಾಪೌರ ರಾಮಪ್ಪ ಬಡಿಗೇರ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ ಸಂತೋಷ ಬಿರಾದಾರ, ಶಾಲಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎಸ್. ಕೆಳದಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಮಹಾನಗರಪಾಲಿಕೆಯ ಸದಸ್ಯರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು, ಶಿಕ್ಷಕರು, ಇತರ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಪೌರಕಾರ್ಮಿಕರು ಭಾಗವಹಿಸಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ