High Court notice to APMC for disposal of disputed space

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಗಳ ಕುರಿತು ತೀರ್ಮಾನ ಕೈಗೊಳ್ಳಲು ಸದರಿ ಜಾಗೆಯನ್ನು ಮೋಜಣಿ ಕಾರ್ಯ ಕೈಗೊಂಡು ಪಿಟಿ ಶೀಟ ತಯಾರಿಸುವಂತೆ ಆದೇಶ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬುಧವಾರ ಇಲ್ಲಿನ ವಿವಾದಿತ ಜಾಗೆಯನ್ನು ಉಪ ವಿಭಾಗಾಧಿಕಾರಿ ಗುರುನಾಥ ದಡ್ಡಿ ಪರಿಶೀಲನೆ ನಡೆಸಿದರು.

ಎಪಿಎಂಸಿಗೆ ಕೊಟ್ಟಿರುವ ಜಾಗೆ, ರಸ್ತೆಗಳು, ಅತಿಕ್ರಮಣಗೊಂಡಿರುವ ಜಾಗೆಯನ್ನು ವೀಕ್ಷಿಸಿದರು. ಅರ್ಜಿದಾರ ಲಕ್ಷ್ಮಣ ವಾಲಿಕಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಪಿಎಂಸಿಗೆ ರಿ.ಸ.ನಂ 98ರಲ್ಲಿ 21 ಎಕರೆ 30 ಗುಂಟೆ ಜಮೀನಿದ್ದು ಸದರಿ ಜಮೀನನ್ನು ನಮ್ಮ ಅಜ್ಜನವರು 10 ಎಕರೆ 28 ಗುಂಟೆ ಕ್ರಯಕ್ಕೆ ನೀಡಿದ್ದು 9 ಎಕರೆ 39 ಗುಂಟೆ ಏಪಿಎಂಸಿಗೆ ಭೂಸ್ವಾಧೀನವಾಗಿರುತ್ತದೆ. ಉಳಿದ 1 ಎಕರೆ 3 ಗುಂಟೆ ಜಮೀನನ್ನು ಅಳತೆ ಮಾಡಿ ಪಿಟಿ ಶೀಟ್ ತಯಾರಿಸಿ ಕೊಡುವಂತೆ ಹೈಕೋರ್ಟ್ ಆದೇಶ ಮಾಡಿ ನಾಲ್ಕು ತಿಂಗಳು ಗತಿಸಿದರೂ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಅಧಿಕಾರಿಗಳು ಹೈಕೋರ್ಟ್ ಆದೇಶವನ್ನು ಪಾಲಿಸದೇ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಅರ್ಜಿದಾರ ಲಕ್ಷ್ಮಣ ವಾಲಿಕಾರ, ಉಪ ವಿಭಾಗಾಧಿಕಾರಿಗಳೊಂದಿಗೆ, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ತಹಸೀಲ್ದಾರ್‌ರು ಸಮರ್ಪಕ ಕ್ರಮವನ್ನು ಕೈಗೊಳ್ಳುತ್ತಿಲ್ಲ ಎಂದು ಅರ್ಜಿದಾರರು ವಾಗ್ವಾದ ನಡೆಸಿದರು. ಅಲ್ಲದೇ ಅಕ್ರಮವಾಗಿ ಕೆಲವರ ಪ್ರಭಾವಕ್ಕೆ ಅಧಿಕಾರಿಗಳು ಒಳಗಾಗಿ ಹೈಕೋರ್ಟ್ ಆದೇಶವನ್ನು ಗಂಭೀರವಾಗಿ ಪರಿಗಣಿಸದೇ ಮೋಜಣಿ ಕಾರ್ಯ ವಿಳಂಬ ಮಾಡುವುದರೊಂದಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡಿ, ಸದರಿ ಜಮೀನಿನ ವಿವಾದದ ಕುರಿತು ದಾಖಲೆಗಳನ್ನು ಪರಿಶೀಲನೆ ನಡೆಸಿ ಮೇಲಧಿಕಾರಿಗಳ ಅನುಮತಿ ಪಡೆದುಕೊಂಡು ಮರು ಸರ್ವೆಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ತಹಸೀಲ್ದಾರ್ ಬಲರಾಮ ಕಟ್ಟಿಮನಿ, ಭೂದಾಖಲೆಗಳ ಸಹಾಯಕ ನಿರ್ದೇಶಕ ಎಸ್. ಎಸ್. ಸಜ್ಜನ, ನಗರ ಮಾಪನ ಅಧಿಕಾರಿ ಶೈಲಶ್ರೀ ಹಿರೇಮಠ, ಕಂದಾಯ ನಿರೀಕ್ಷಕ ಪವನ ತಳವಾರ ಇದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ