Running of Mahebuba Nagar-Bidarkundi Nagar Transport

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮುದ್ದೇಬಿಹಾಳ : ಸಾರ್ವಜನಿಕರ ಬೇಡಿಕೆಯೆ ಮೇರೆಗೆ ಶಾಸಕ ಸಿ.ಎಸ್.ನಾಡಗೌಡ ಅವರ ಸೂಚಿಸಿದ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ನಗರದಲ್ಲಿ ಎರಡನೇ ಹಂತದ ಸಿಟಿ ಬಸ್ ಸಂಚಾರ ಗುರುವಾರದಿಂದ ಆರಂಭಿಸಲಾಯಿತು.

ಪಟ್ಟಣದ ಮಹೆಬೂಬ ನಗರದ ಉರ್ದು ಶಾಲೆಯ ಮುಂಭಾಗದಲ್ಲಿ ರಿಬ್ಬನ್ ಕತ್ತರಿಸಿ ನಗರ ಸಾರಿಗೆಗೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಚಾಲನೆ ನೀಡಿದರು.

ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿ, ನಗರದ ಜನತೆಗೆ ಸಿಟಿ ಬಸ್‌ಗಳು ಒಳ್ಳೆಯ ಅನುಕೂಲತೆ ಕಲ್ಪಿಸಿದ್ದು ಖಾಸಗಿಯವರಿಗಿಂತ ಹೆಚ್ಚು ಉಪಯುಕ್ತವಾಗಿವೆ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ, ಕೆಯುಸಿ ಬ್ಯಾಂಕ್ ನಿರ್ದೇಶಕ ಶ್ರೀಶೈಲ ಪೂಜಾರಿ, ಗ್ಯಾರಂಟಿ ಸಮಿತಿ ಸದಸ್ಯ ಸಂಗಣ್ಣ ಮೇಲಿನಮನಿ, ಅಲ್ಲಾಭಕ್ಷ್ಯ ಟಕ್ಕಳಕಿ, ಸಾಹೇಬಲಾಲ ದೇಸಾಯಿ, ಹುಸೇನ ಮುಲ್ಲಾ, ಗೋಪಿ ಮಡಿವಾಳರ, ಹುಸೇನಭಾಷಾ ಹುಣಸಗಿ, ಜಬ್ಬಾರ ಗೋಲಂದಾಜ, ರೋಷನ ಬೇಗ್, ಚಾಲಕ ಶೆಟ್ಟೆಪ್ಪ ಕಡಿ, ಕಂಟ್ರೋಲರ್ ಹಬೀಬ ಹಡಗಲಿ, ನಿರ್ವಾಹಕ ಅಮೋಘಸಿದ್ದ ಹಾದಿಮನಿ ಇದ್ದರು.

ಬಸ್ ಸಮಯ: ಬೆಳಗ್ಗೆ 7 ಗಂಟೆಯಿಂದ ನಾಲತವಾಡ ರಸ್ತೆಯ ಉರ್ದು ಶಾಲೆಯಿಂದ ಆರಂಭಗೊಳ್ಳುವ ನಗರ ಸಾರಿಗೆ ಸಂಚಾರ ಅರ್ಧಗಂಟೆಗೊಮ್ಮೆ ಬಿದರಕುಂದಿ ಗ್ರಾಮದವರೆಗಿನ ಕ್ರಾಸ್‌ವರೆಗೂ ಸಂಚರಿಸಲಿದೆ ಎಂದು ಸಾರಿಗೆ ಘಟಕದ ಮೂಲಗಳು ತಿಳಿಸಿವೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ