Siddaramaiah-led government is the only government that gives money to the people: Minister Santhosh Lad

ಜನರ ದುಡ್ಡು, ಜನರಿಗೆ ನೀಡುವ ಸಿದ್ದರಾಮಯ್ಯ ನೇತೃತ್ವದ ಏಕೈಕ ಸರ್ಕಾರ: ಸಚಿವ ಸಂತೋಷ ಲಾಡ್

ಜನರ ದುಡ್ಡು, ಜನರಿಗೆ ನೀಡುವ ಸಿದ್ದರಾಮಯ್ಯ ನೇತೃತ್ವದ ಏಕೈಕ ಸರ್ಕಾರ: ಸಚಿವ ಸಂತೋಷ ಲಾಡ್

ವಿಜಯನಗರ (ಹೊಸಪೇಟೆ), ಜುಲೈ4 : ರಾಜ್ಯದಲ್ಲಿರುವ ವಿವಿಧ 91 ವರ್ಗಗಳ 35 ಲಕ್ಷ ಕಾರ್ಮಿಕರನ್ನು ಗುರುತಿಸಿ, ಉಚಿತವಾಗಿ ನೋಂದಾಯಿಸಿ ವಿವಿಧ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ ಕಾರ್ಡ್ ನೀಡುವ ಮೂಲಕ ಜನರ ದುಡ್ಡನ್ನು ಜನರಿಗೆ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕಾರ್ಮಿಕ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಧ್ಯಕ್ಷರಾದ ಸಂತೋಷ್ ಲಾಡ್ ಹೇಳಿದರು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಪಂ ಸಹಯೋಗದಲ್ಲಿ ವಿಜಯನಗರ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿನ ಆರಂಭಿಕವಾಗಿ 26 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲಾಗಿತ್ತು. ಹೊಸದಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಪಾರಂಪಾರಿಕ ವೃತ್ತಿಯಲ್ಲಿ ತೊಡಗಿರುವ 38 ವರ್ಗಗಳು ಹಾಗೂ ಹಿಂದುಗಳಿದ ವರ್ಗಗಳ ಅಲೆಮಾರಿ ಹಾಗೂ ಅರೆ ಅಲೆಮಾರಿ ಪಂಗಡದ ಕುಲಕಸುಬಿನಲ್ಲಿ ತೊಡಗಿರುವ 27 ವರ್ಗಗಳ ಕಾರ್ಮಿಕರು ಸೇರಿದಂತೆ ಒಟ್ಟು 91 ವರ್ಗಗಳ ಕಾರ್ಮಿಕರನ್ನು ಗುರುತಿಸಿ ಸೌಲಭ್ಯವನ್ನು ನೀಡಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ಅಪಘಾತ ಪರಿಹಾರ ಸೌಲಭ್ಯ ಅಪಘಾತದಿಂದ ಮರಣ ಹೊಂದಿದಲ್ಲಿ, ಅಥವಾ ಸಂಪೂರ್ಣ ದುರ್ಬಲತೆ ಹೊಂದಿದಲ್ಲಿ ಅವರ ನಾಮನಿದೇರ್ಶಿತರಿಗೆ 1 ಲಕ್ಷ ರೂ ಪರಿಹಾರ, ಆಸ್ಪತ್ರೆ ಚಿಕಿತ್ಸೆ ವೆಚ್ಚಕ್ಕೆ 50 ಸಾವಿರ ರೂ, ಸಹಜ ಮರಣ ಪರಿಹಾರ ಮತ್ತು ಅಂತ್ಯಕ್ರಿಯೆ ವೆಚ್ಚ 10 ಸಾವಿರ ರೂಗಳ ಧನ ಸಹಾಯ ನೀಡಲಾಗುತ್ತದೆ. ಅಷ್ಟೇ ಅಲ್ಲದೇ 2024 ರಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ರೂಪಿಸಿ ಅಧಿನಿಯಮವನ್ನು ಜಾರಿಗೊಳಿಸಿ 20 ವರ್ಗಗಳನ್ನು ಗುರುತಿಸಿ ಸೌಲಭ್ಯಗಳನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಯಡಿ ಅಪಘಾತದಿಂದ ಫಲಾನುಭವಿ ನಿಧನರಾದರೆ 5 ಲಕ್ಷ ರೂ ಪರಿಹಾರ, ಶಾಶ್ವತ ದುರ್ಬಲತೆ ಹೊಂದಿದರೆ 2 ಲಕ್ಷ ರೂ ವರೆಗೆ ಪರಿಹಾರ , ತಾತ್ಕಾಲಿಕ ದುರ್ಬಲತೆ ಹೊಂದಿದರೇ ಆಸ್ಪತ್ರೆ ಚಿಕಿತ್ಸೆ ವೆಚ್ಚಕ್ಕಾಗಿ 1 ಲಕ್ಷ ರೂ ವರೆಗೆ ಪರಿಹಾರ, ಮೃತರ ಕುಟುಂಬದ ಇಬ್ಬರು ಮಕ್ಕಳಿಗೆ 1 ರಿಂದ ಪದವಿವರೆಗೆ ತಲಾ 10 ಸಾವಿರ ರೂಗಳು ನೀಡಲಾಗುತ್ತಿದೆ ಎಂದರು.

ರಾಜ್ಯ ಸರ್ಕಾರದ ಪೆಟ್ರೋಲ್ ಮತ್ತು ಡಿಸೇಲ್‌ನಿಂದ ರಾಜ್ಯಕ್ಕೆ ಬರುವ ತೆರಿಗೆ ಸಂಗ್ರಹದಲ್ಲಿ ಕನಿಷ್ಠ ಶೇ.1 ರಷ್ಟು ಹಣವನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಒಪ್ಪಿಗೆ ಸಿಕ್ಕರೆ 2200 ಕೋಟಿ ರೂ ಸಂಗ್ರಹವಾಗಲಿದೆ. ಅದನ್ನು ನೇರವಾಗಿ ಸ್ಮಾರ್ಟ್ ಕಾರ್ಡ್ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ಬಳಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರ ಅಡಳಿತಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿಗಳ ಅನುಷ್ಠಾನದ ವಿರುದ್ದ ವಿಪಕ್ಷಗಳು ಸೇರಿದಂತೆ ಹಲವರು ಟೀಕೆ ಮಾಡಿದ್ದರು. ಕೇವಲ ಎರಡು ತಿಂಗಳಲ್ಲೇ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ರಾಜ್ಯದ ಜನತೆಗೆ ವರ್ಷಕ್ಕೆ ನೇರವಾಗಿ 60 ಸಾವಿರ ಕೋಟಿ ರೂ, ಐದು ವರ್ಷಕ್ಕೆ 3 ಲಕ್ಷ ಕೋಟಿ ನೀಡುವ ದೇಶದ ಏಕೈಕ ಸಿ ಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಂಬುದನ್ನು ಹೆಮ್ಮೆಯಿಂದ ತೋರಿಸಿದ್ದೇವೆ. ಕೇಂದ್ರ ಸರ್ಕಾರ ಜಿಡಿಪಿಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯನ್ನು ಮೂಡಿಸುತ್ತಿದೆ. ಸುಮಾರು 23 ಪಿಎಸ್‌ಯು ಸಂಸ್ಥೆಗಳು ದಿವಾಳಿ ಆಗಿವೆ. ಬಿಎಸ್‌ಎನ್‌ಎಲ್ ಸಂಸ್ಥೆ ನೆಲಕಚ್ಚಿದೆ. ಜಿಯೋ ಉನ್ನತ ಸ್ಥಾನಕ್ಕೇರಿದೆ ಎಂದರು.

ಬಳ್ಳಾರಿ ಮತ್ತು ವಿಜಯನಗರ ಸಂಸದ ಈ.ತುಕಾರಾಂ, ಶಾಸಕರಾದ ಹೆಚ್.ಆರ್.ಗವಿಯಪ್ಪ, ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿದರು.

ಈ ವೇಳೆ ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಉಪಾಧ್ಯಕ್ಷ ರಮೇಶ್, ಹುಡಾ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿ ಪಂ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ, ಎಸ್ಪಿ ಶ್ರೀಹರಿಬಾಬು ಬಿ.ಎಲ್, ಕಾರ್ಮಿಕ ಆಯುಕ್ತರಾದ ಡಾ.ಎಚ್.ಎನ್.ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿ ಡಾ.ಎಸ್.ಬಿ.ರವಿಕುಮಾರ್, ಕಲಬುರಗಿ ಉಪಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ, ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಈ.ದೊಂಬರಮತ್ತೂರು ಸೇರಿದಂತೆ ವಿವಿಧ ಮುಖಂಡರು, ನಗರಸಭೆ ಸದಸ್ಯರು ಉಪಸ್ಥಿತರಿದ್ದರು.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ