Siddaramaiah-led government is the only government that gives money to the people: Minister Santhosh Lad

ಜನರ ದುಡ್ಡು, ಜನರಿಗೆ ನೀಡುವ ಸಿದ್ದರಾಮಯ್ಯ ನೇತೃತ್ವದ ಏಕೈಕ ಸರ್ಕಾರ: ಸಚಿವ ಸಂತೋಷ ಲಾಡ್

ಜನರ ದುಡ್ಡು, ಜನರಿಗೆ ನೀಡುವ ಸಿದ್ದರಾಮಯ್ಯ ನೇತೃತ್ವದ ಏಕೈಕ ಸರ್ಕಾರ: ಸಚಿವ ಸಂತೋಷ ಲಾಡ್

ವಿಜಯನಗರ (ಹೊಸಪೇಟೆ), ಜುಲೈ4 : ರಾಜ್ಯದಲ್ಲಿರುವ ವಿವಿಧ 91 ವರ್ಗಗಳ 35 ಲಕ್ಷ ಕಾರ್ಮಿಕರನ್ನು ಗುರುತಿಸಿ, ಉಚಿತವಾಗಿ ನೋಂದಾಯಿಸಿ ವಿವಿಧ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ ಕಾರ್ಡ್ ನೀಡುವ ಮೂಲಕ ಜನರ ದುಡ್ಡನ್ನು ಜನರಿಗೆ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕಾರ್ಮಿಕ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಧ್ಯಕ್ಷರಾದ ಸಂತೋಷ್ ಲಾಡ್ ಹೇಳಿದರು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಪಂ ಸಹಯೋಗದಲ್ಲಿ ವಿಜಯನಗರ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿನ ಆರಂಭಿಕವಾಗಿ 26 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲಾಗಿತ್ತು. ಹೊಸದಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಪಾರಂಪಾರಿಕ ವೃತ್ತಿಯಲ್ಲಿ ತೊಡಗಿರುವ 38 ವರ್ಗಗಳು ಹಾಗೂ ಹಿಂದುಗಳಿದ ವರ್ಗಗಳ ಅಲೆಮಾರಿ ಹಾಗೂ ಅರೆ ಅಲೆಮಾರಿ ಪಂಗಡದ ಕುಲಕಸುಬಿನಲ್ಲಿ ತೊಡಗಿರುವ 27 ವರ್ಗಗಳ ಕಾರ್ಮಿಕರು ಸೇರಿದಂತೆ ಒಟ್ಟು 91 ವರ್ಗಗಳ ಕಾರ್ಮಿಕರನ್ನು ಗುರುತಿಸಿ ಸೌಲಭ್ಯವನ್ನು ನೀಡಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ಅಪಘಾತ ಪರಿಹಾರ ಸೌಲಭ್ಯ ಅಪಘಾತದಿಂದ ಮರಣ ಹೊಂದಿದಲ್ಲಿ, ಅಥವಾ ಸಂಪೂರ್ಣ ದುರ್ಬಲತೆ ಹೊಂದಿದಲ್ಲಿ ಅವರ ನಾಮನಿದೇರ್ಶಿತರಿಗೆ 1 ಲಕ್ಷ ರೂ ಪರಿಹಾರ, ಆಸ್ಪತ್ರೆ ಚಿಕಿತ್ಸೆ ವೆಚ್ಚಕ್ಕೆ 50 ಸಾವಿರ ರೂ, ಸಹಜ ಮರಣ ಪರಿಹಾರ ಮತ್ತು ಅಂತ್ಯಕ್ರಿಯೆ ವೆಚ್ಚ 10 ಸಾವಿರ ರೂಗಳ ಧನ ಸಹಾಯ ನೀಡಲಾಗುತ್ತದೆ. ಅಷ್ಟೇ ಅಲ್ಲದೇ 2024 ರಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ರೂಪಿಸಿ ಅಧಿನಿಯಮವನ್ನು ಜಾರಿಗೊಳಿಸಿ 20 ವರ್ಗಗಳನ್ನು ಗುರುತಿಸಿ ಸೌಲಭ್ಯಗಳನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಯಡಿ ಅಪಘಾತದಿಂದ ಫಲಾನುಭವಿ ನಿಧನರಾದರೆ 5 ಲಕ್ಷ ರೂ ಪರಿಹಾರ, ಶಾಶ್ವತ ದುರ್ಬಲತೆ ಹೊಂದಿದರೆ 2 ಲಕ್ಷ ರೂ ವರೆಗೆ ಪರಿಹಾರ , ತಾತ್ಕಾಲಿಕ ದುರ್ಬಲತೆ ಹೊಂದಿದರೇ ಆಸ್ಪತ್ರೆ ಚಿಕಿತ್ಸೆ ವೆಚ್ಚಕ್ಕಾಗಿ 1 ಲಕ್ಷ ರೂ ವರೆಗೆ ಪರಿಹಾರ, ಮೃತರ ಕುಟುಂಬದ ಇಬ್ಬರು ಮಕ್ಕಳಿಗೆ 1 ರಿಂದ ಪದವಿವರೆಗೆ ತಲಾ 10 ಸಾವಿರ ರೂಗಳು ನೀಡಲಾಗುತ್ತಿದೆ ಎಂದರು.

ರಾಜ್ಯ ಸರ್ಕಾರದ ಪೆಟ್ರೋಲ್ ಮತ್ತು ಡಿಸೇಲ್‌ನಿಂದ ರಾಜ್ಯಕ್ಕೆ ಬರುವ ತೆರಿಗೆ ಸಂಗ್ರಹದಲ್ಲಿ ಕನಿಷ್ಠ ಶೇ.1 ರಷ್ಟು ಹಣವನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಒಪ್ಪಿಗೆ ಸಿಕ್ಕರೆ 2200 ಕೋಟಿ ರೂ ಸಂಗ್ರಹವಾಗಲಿದೆ. ಅದನ್ನು ನೇರವಾಗಿ ಸ್ಮಾರ್ಟ್ ಕಾರ್ಡ್ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ಬಳಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರ ಅಡಳಿತಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿಗಳ ಅನುಷ್ಠಾನದ ವಿರುದ್ದ ವಿಪಕ್ಷಗಳು ಸೇರಿದಂತೆ ಹಲವರು ಟೀಕೆ ಮಾಡಿದ್ದರು. ಕೇವಲ ಎರಡು ತಿಂಗಳಲ್ಲೇ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ರಾಜ್ಯದ ಜನತೆಗೆ ವರ್ಷಕ್ಕೆ ನೇರವಾಗಿ 60 ಸಾವಿರ ಕೋಟಿ ರೂ, ಐದು ವರ್ಷಕ್ಕೆ 3 ಲಕ್ಷ ಕೋಟಿ ನೀಡುವ ದೇಶದ ಏಕೈಕ ಸಿ ಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಂಬುದನ್ನು ಹೆಮ್ಮೆಯಿಂದ ತೋರಿಸಿದ್ದೇವೆ. ಕೇಂದ್ರ ಸರ್ಕಾರ ಜಿಡಿಪಿಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯನ್ನು ಮೂಡಿಸುತ್ತಿದೆ. ಸುಮಾರು 23 ಪಿಎಸ್‌ಯು ಸಂಸ್ಥೆಗಳು ದಿವಾಳಿ ಆಗಿವೆ. ಬಿಎಸ್‌ಎನ್‌ಎಲ್ ಸಂಸ್ಥೆ ನೆಲಕಚ್ಚಿದೆ. ಜಿಯೋ ಉನ್ನತ ಸ್ಥಾನಕ್ಕೇರಿದೆ ಎಂದರು.

ಬಳ್ಳಾರಿ ಮತ್ತು ವಿಜಯನಗರ ಸಂಸದ ಈ.ತುಕಾರಾಂ, ಶಾಸಕರಾದ ಹೆಚ್.ಆರ್.ಗವಿಯಪ್ಪ, ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿದರು.

ಈ ವೇಳೆ ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಉಪಾಧ್ಯಕ್ಷ ರಮೇಶ್, ಹುಡಾ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿ ಪಂ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ, ಎಸ್ಪಿ ಶ್ರೀಹರಿಬಾಬು ಬಿ.ಎಲ್, ಕಾರ್ಮಿಕ ಆಯುಕ್ತರಾದ ಡಾ.ಎಚ್.ಎನ್.ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿ ಡಾ.ಎಸ್.ಬಿ.ರವಿಕುಮಾರ್, ಕಲಬುರಗಿ ಉಪಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ, ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಈ.ದೊಂಬರಮತ್ತೂರು ಸೇರಿದಂತೆ ವಿವಿಧ ಮುಖಂಡರು, ನಗರಸಭೆ ಸದಸ್ಯರು ಉಪಸ್ಥಿತರಿದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ