ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ದಾವಣಗೆರೆ: ಕಳವು ಪ್ರಕರಣವೊಂದರಲ್ಲಿ ಜಪ್ತಿ ಮಾಡಿದ ಚಿನ್ನಾಭರಣ ನ್ಯಾಯಾಲಯದ ಅನುಮತಿ ಪಡೆದು ಮಧ್ಯಪ್ರದೇಶದಿಂದ ತಂದಿದ್ದ ನಗರದ ಬಡಾವಣೆ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (PSI B.R. Nagarajappa) ಮರುದಿನವೇ ಕೌಟುಂಬಿಕ ಕಲದಿಂದ ಮನನೊಂದು ನಾಪತ್ತೆಯಾಗಿದ್ದರು ಎಂದು ವರದಿಯಾಗಿತ್ತು. (Suicide)

ಕಳವು ಪ್ರಕರಣವೊಂದರಲ್ಲಿ ಮಧ್ಯಪ್ರದೇಶದಲ್ಲಿ ಸಿಕ್ಕಿಬಿದ್ದ ಆರೋಪಿಗಳು ದಾವಣಗೆರೆಯಲ್ಲಿ ಕೃತ್ಯ ಎಸಗಿದ್ದ ಬಗ್ಗೆ ಮಾಹಿತಿಯನ್ನೂ ನೀಡಿದ್ದರು.

ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು, ಸ್ವತ್ತು ವಶಕ್ಕೆ ಎಸ್‌ಐ ನಾಗರಾಜಪ್ಪ ನೇತೃತ್ವದಲ್ಲಿ ತೆರಳಿದ್ದರು. ವಿಶೇಷ ಕರ್ತವ್ಯ ಮುಗಿಸಿ ಜೂ. 30ರಂದು ಬೆಳಗ್ಗೆ 11ಕ್ಕೆ ಮನೆಗೆ ಮರಳಿದ್ದ ಅವರು, ಜುಲೈ 1ರ ನಸುಕಿನಲ್ಲಿ ಮನೆಯನ್ನು ತೊರೆದಿದ್ದರು ಎನ್ನಲಾಗಿದೆ.

ಜೂ. 30ರ ರಾತ್ರಿ 9 ಗಂಟೆಯ ಹೊತ್ತಿಗೆ ಕೌಟುಂಬಿಕ ವಿಚಾರವಾಗಿ ಪತ್ನಿಯೊಂದಿಗೆ ಗಲಾಟೆ ನಡೆಯಿತು. ಇದರಿಂದ ಬೇಸರ ಮಾಡಿಕೊಂಡ ಅವರು ನಸುಕಿನ 2 ಗಂಟೆಯ ಹೊತ್ತಿಗೆ ಮನೆಯಿಂದ ಹೊರಹೋಗಿದ್ದರು. ಮನೆಗೂ ಮರಳದೇ ಕರ್ತವ್ಯಕ್ಕೂ ಹಾಜರಾಗದ ಇರುವುದು ಆತಂಕ ಮೂಡಿಸಿದೆ. ಕಾಣೆಯಾಗಿರುವ ಪತಿಯನ್ನು ಹುಡುಕಿಕೊಡಿ ಎಂದು ಪತ್ನಿ ಕೆ.ಇ. ಲಲಿತಾ ಅವರು ಕೆಟಿಜೆ ನಗರ ಠಾಣೆಗೆ ಜುಲೈ 2ರಂದು ದೂರು ದಾಖಲಿಸಿದ್ದರು.

ದಾವಣಗೆರೆ ತಾಲ್ಲೂಕಿನ ಜವಳಘಟ್ಟ ಗ್ರಾಮದ ನಾಗರಾಜಪ್ಪ, 1993ರಲ್ಲಿ ಪೊಲೀಸ್‌ ಇಲಾಖೆ ಸೇರಿದ್ದರು. ಕಾನ್‌ಸ್ಟೆಬಲ್‌ ಆಗಿ ಚಿತ್ರದುರ್ಗದಿಂದ ಕರ್ತವ್ಯ ಆರಂಭಿಸಿದ ಅವರು ಹಲವು ಠಾಣೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ದಾವಣಗೆರೆಯ ಸಂಚಾರ ಪೊಲೀಸ್‌ ಠಾಣೆ, ಬಸವನಗರ ಠಾಣೆಯಲ್ಲಿ ಕೆಲಸ ಮಾಡಿ ಎಎಸ್‌ಐ ಆಗಿ ಬಡ್ತಿ ಪಡೆದಿದ್ದರು. ಇತ್ತೀಚೆಗೆ ಬಡಾವಣೆ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ನಿವೃತ್ತಿಯ ಅಂಚಿನಲ್ಲಿದ್ದರು.

ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಲಲಿತಾ ಅವರನ್ನು ನಾಗರಾಜಪ್ಪ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ನಿಟುವಳ್ಳಿಯ ಪೊಲೀಸ್‌ ವಸತಿ ಗೃಹದಲ್ಲಿ ನೆಲೆಸಿದ್ದರು. ಇಬ್ಬರು ಮಕ್ಕಳ ಪೈಕಿ ಪುತ್ರಿಯ ವಿವಾಹವಾಗಿದೆ. 8 ತಿಂಗಳ ತುಂಬು ಗರ್ಭಿಣಿಯಾಗಿರುವ ಪುತ್ರಿ ಹೆರಿಗೆಗೆ ಇತ್ತೀಚೆಗೆ ತವರು ಮನೆಗೆ ಬಂದಿದ್ದಾರೆ. ಪುತ್ರಿಯ ಮೇಲೆ ಅಪಾರ ಪ್ರೀತಿ ಇಟ್ಟುಕೊಂಡಿದ್ದ ನಾಗರಾಜಪ್ಪ, ಜೀವನ ಅಂತ್ಯಗೊಳಿಸಿಕೊಂಡಿದ್ದು ಕುಟುಂಬವನ್ನು ದುಃಖದ ಮಡುವಿಗೆ ತಳ್ಳಿದೆ.

ಮಗ, ಅಳಿಯ, ಅಕ್ಕನ ಮಕ್ಕಳೊಂದಿಗೆ ಸೇರಿ ಎಲ್ಲೆಡೆ ಹುಡಕಾಟ ನಡೆಸಿದೆವು. ಪೊಲೀಸರ ಬಳಿಯೂ ವಿಚಾರಿಸಿದೆವು. ಒಂದು ದಿನ ಕಳೆದರೂ ಪತಿ ಮನೆಗೆ ಮರಳಲಿಲ್ಲ. ಆತಂಕಗೊಂಡು ಜುಲೈ 2ರಂದು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದೆವು. ಭಾನುವಾರ ಬೆಳಗ್ಗೆ 8ಕ್ಕೆ ದೂರವಾಣಿ ಕರೆ ಮಾಡಿದ ಪೊಲೀಸರು ತುಮಕೂರಿನಲ್ಲಿ ಮೃತಪಟ್ಟಿರುವ ಮಾಹಿತಿ ನೀಡಿದರು ಎಂದು ಕಣ್ಣೀರು ಸುರಿಸಿದರು.

ಎಸ್‌ಐ ಅಂತ್ಯಕ್ರಿಯೆ:

ತುಮಕೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಬಡಾವಣೆಯ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (59) ಅವರ ಮೃತದೇಹವನ್ನು ಭಾನುವಾರ ಸಂಜೆ ದಾವಣಗೆರೆಗೆ ತರಲಾಯಿತು. ಮನೆಯ ಮುಂದೆ ಕೆಲ ಹೊತ್ತು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಕುಟುಂಬದ ಆಕ್ರಂದನ ಮನಕಲಕುವಂತಿತ್ತು. ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಹಿಂಭಾಗದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ