ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ದಾವಣಗೆರೆ: ಕಳವು ಪ್ರಕರಣವೊಂದರಲ್ಲಿ ಜಪ್ತಿ ಮಾಡಿದ ಚಿನ್ನಾಭರಣ ನ್ಯಾಯಾಲಯದ ಅನುಮತಿ ಪಡೆದು ಮಧ್ಯಪ್ರದೇಶದಿಂದ ತಂದಿದ್ದ ನಗರದ ಬಡಾವಣೆ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (PSI B.R. Nagarajappa) ಮರುದಿನವೇ ಕೌಟುಂಬಿಕ ಕಲದಿಂದ ಮನನೊಂದು ನಾಪತ್ತೆಯಾಗಿದ್ದರು ಎಂದು ವರದಿಯಾಗಿತ್ತು. (Suicide)

ಕಳವು ಪ್ರಕರಣವೊಂದರಲ್ಲಿ ಮಧ್ಯಪ್ರದೇಶದಲ್ಲಿ ಸಿಕ್ಕಿಬಿದ್ದ ಆರೋಪಿಗಳು ದಾವಣಗೆರೆಯಲ್ಲಿ ಕೃತ್ಯ ಎಸಗಿದ್ದ ಬಗ್ಗೆ ಮಾಹಿತಿಯನ್ನೂ ನೀಡಿದ್ದರು.

ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು, ಸ್ವತ್ತು ವಶಕ್ಕೆ ಎಸ್‌ಐ ನಾಗರಾಜಪ್ಪ ನೇತೃತ್ವದಲ್ಲಿ ತೆರಳಿದ್ದರು. ವಿಶೇಷ ಕರ್ತವ್ಯ ಮುಗಿಸಿ ಜೂ. 30ರಂದು ಬೆಳಗ್ಗೆ 11ಕ್ಕೆ ಮನೆಗೆ ಮರಳಿದ್ದ ಅವರು, ಜುಲೈ 1ರ ನಸುಕಿನಲ್ಲಿ ಮನೆಯನ್ನು ತೊರೆದಿದ್ದರು ಎನ್ನಲಾಗಿದೆ.

ಜೂ. 30ರ ರಾತ್ರಿ 9 ಗಂಟೆಯ ಹೊತ್ತಿಗೆ ಕೌಟುಂಬಿಕ ವಿಚಾರವಾಗಿ ಪತ್ನಿಯೊಂದಿಗೆ ಗಲಾಟೆ ನಡೆಯಿತು. ಇದರಿಂದ ಬೇಸರ ಮಾಡಿಕೊಂಡ ಅವರು ನಸುಕಿನ 2 ಗಂಟೆಯ ಹೊತ್ತಿಗೆ ಮನೆಯಿಂದ ಹೊರಹೋಗಿದ್ದರು. ಮನೆಗೂ ಮರಳದೇ ಕರ್ತವ್ಯಕ್ಕೂ ಹಾಜರಾಗದ ಇರುವುದು ಆತಂಕ ಮೂಡಿಸಿದೆ. ಕಾಣೆಯಾಗಿರುವ ಪತಿಯನ್ನು ಹುಡುಕಿಕೊಡಿ ಎಂದು ಪತ್ನಿ ಕೆ.ಇ. ಲಲಿತಾ ಅವರು ಕೆಟಿಜೆ ನಗರ ಠಾಣೆಗೆ ಜುಲೈ 2ರಂದು ದೂರು ದಾಖಲಿಸಿದ್ದರು.

ದಾವಣಗೆರೆ ತಾಲ್ಲೂಕಿನ ಜವಳಘಟ್ಟ ಗ್ರಾಮದ ನಾಗರಾಜಪ್ಪ, 1993ರಲ್ಲಿ ಪೊಲೀಸ್‌ ಇಲಾಖೆ ಸೇರಿದ್ದರು. ಕಾನ್‌ಸ್ಟೆಬಲ್‌ ಆಗಿ ಚಿತ್ರದುರ್ಗದಿಂದ ಕರ್ತವ್ಯ ಆರಂಭಿಸಿದ ಅವರು ಹಲವು ಠಾಣೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ದಾವಣಗೆರೆಯ ಸಂಚಾರ ಪೊಲೀಸ್‌ ಠಾಣೆ, ಬಸವನಗರ ಠಾಣೆಯಲ್ಲಿ ಕೆಲಸ ಮಾಡಿ ಎಎಸ್‌ಐ ಆಗಿ ಬಡ್ತಿ ಪಡೆದಿದ್ದರು. ಇತ್ತೀಚೆಗೆ ಬಡಾವಣೆ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ನಿವೃತ್ತಿಯ ಅಂಚಿನಲ್ಲಿದ್ದರು.

ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಲಲಿತಾ ಅವರನ್ನು ನಾಗರಾಜಪ್ಪ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ನಿಟುವಳ್ಳಿಯ ಪೊಲೀಸ್‌ ವಸತಿ ಗೃಹದಲ್ಲಿ ನೆಲೆಸಿದ್ದರು. ಇಬ್ಬರು ಮಕ್ಕಳ ಪೈಕಿ ಪುತ್ರಿಯ ವಿವಾಹವಾಗಿದೆ. 8 ತಿಂಗಳ ತುಂಬು ಗರ್ಭಿಣಿಯಾಗಿರುವ ಪುತ್ರಿ ಹೆರಿಗೆಗೆ ಇತ್ತೀಚೆಗೆ ತವರು ಮನೆಗೆ ಬಂದಿದ್ದಾರೆ. ಪುತ್ರಿಯ ಮೇಲೆ ಅಪಾರ ಪ್ರೀತಿ ಇಟ್ಟುಕೊಂಡಿದ್ದ ನಾಗರಾಜಪ್ಪ, ಜೀವನ ಅಂತ್ಯಗೊಳಿಸಿಕೊಂಡಿದ್ದು ಕುಟುಂಬವನ್ನು ದುಃಖದ ಮಡುವಿಗೆ ತಳ್ಳಿದೆ.

ಮಗ, ಅಳಿಯ, ಅಕ್ಕನ ಮಕ್ಕಳೊಂದಿಗೆ ಸೇರಿ ಎಲ್ಲೆಡೆ ಹುಡಕಾಟ ನಡೆಸಿದೆವು. ಪೊಲೀಸರ ಬಳಿಯೂ ವಿಚಾರಿಸಿದೆವು. ಒಂದು ದಿನ ಕಳೆದರೂ ಪತಿ ಮನೆಗೆ ಮರಳಲಿಲ್ಲ. ಆತಂಕಗೊಂಡು ಜುಲೈ 2ರಂದು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದೆವು. ಭಾನುವಾರ ಬೆಳಗ್ಗೆ 8ಕ್ಕೆ ದೂರವಾಣಿ ಕರೆ ಮಾಡಿದ ಪೊಲೀಸರು ತುಮಕೂರಿನಲ್ಲಿ ಮೃತಪಟ್ಟಿರುವ ಮಾಹಿತಿ ನೀಡಿದರು ಎಂದು ಕಣ್ಣೀರು ಸುರಿಸಿದರು.

ಎಸ್‌ಐ ಅಂತ್ಯಕ್ರಿಯೆ:

ತುಮಕೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಬಡಾವಣೆಯ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (59) ಅವರ ಮೃತದೇಹವನ್ನು ಭಾನುವಾರ ಸಂಜೆ ದಾವಣಗೆರೆಗೆ ತರಲಾಯಿತು. ಮನೆಯ ಮುಂದೆ ಕೆಲ ಹೊತ್ತು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಕುಟುಂಬದ ಆಕ್ರಂದನ ಮನಕಲಕುವಂತಿತ್ತು. ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಹಿಂಭಾಗದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ