Press Day on June 26: Awards for best journalists

ಜು.26 ರಂದು ಪತ್ರಿಕಾ ದಿನಾಚರಣೆ: ಉತ್ತಮ ಪತ್ರಕರ್ತರಿಗೆ ಪ್ರಶಸ್ತಿಗೆ

ಜು.26 ರಂದು ಪತ್ರಿಕಾ ದಿನಾಚರಣೆ: ಉತ್ತಮ ಪತ್ರಕರ್ತರಿಗೆ ಪ್ರಶಸ್ತಿಗೆ

ಮುದ್ದೇಬಿಹಾಳ : ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.26 ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದ್ದು ನಗರ,ಗ್ರಾಮೀಣ ಭಾಗದ ಐವರು ಪತ್ರಕರ್ತರಿಗೆ ಹಾಗೂ ಒಬ್ಬರನ್ನು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಮುತ್ತು ವಡವಡಗಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದಿದ್ದ ಕಾನಿಪ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಜು.26ರಂದು ಬೆಳಿಗ್ಗೆ 9 ಗಂಟೆಗೆ ಆಲಮಟ್ಟಿ ರಸ್ತೆ ಪಕ್ಕದ ಅರಿಹಂತಗಿರಿಯಲ್ಲಿರುವ ಅರಿಹಂತ ಚಾರಿಟೇಬಲ್ ಟ್ರಸ್ಟ್ನ ಕಾಲೇಜು ಆವರಣದಲ್ಲಿ ಸಮಾರಂಭ ಹಮ್ಮಿಕೊಳ್ಳಲು, ಪಿಯುಸಿ, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮದ ಮೌಲ್ಯ, ಪತ್ರಕರ್ತರ ಕರ್ತವ್ಯ ಸೇರಿ ಹಲವು ವಿಷಯಗಳನ್ನು ತಿಳಿಸಿಕೊಡಲು ವಿಶೇಷ ಉಪನ್ಯಾಸ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ. ವಡವಡಗಿ ಮಾತನಾಡಿ, ಕೆಯುಡಬ್ಲುಜೆ ವಿಜಯಪುರ ಜಿಲ್ಲಾ ಘಟಕಕ್ಕೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಸವನ ಬಾಗೇವಾಡಿಯ ಹಿರಿಯ ಪತ್ರಕರ್ತ ಪ್ರಕಾಶ ಬೆಣ್ಣೂರ ಅವರನ್ನು ಸನ್ಮಾನಿಸಲು ತೀರ್ಮಾನಿಸಿರುವ ಹಾಗೂ ಸರ್ವ ಸದಸ್ಯರು ಸ್ವ ಇಚ್ಚೆಯಿಂದ ಸಮಾರಂಭದ ಜವಾಬ್ಧಾರಿ ವಹಿಸಿಕೊಂಡು ಯಾರಿಂದಲೂ ಚಂದಾ ಎತ್ತದೆ ಸಮಾರಂಭವನ್ನು ಮಾದರಿಯಾಗಿಸಲು ಮುಂದೆ ಬಂದಿರುವುದು ಶ್ಲಾಘನೀಯ ಎಂದರು.

ಸಂಘದ ತಾಲೂಕು ಉಪಾಧ್ಯಕ್ಷ ಸಿದ್ದು ಚಲವಾದಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನವರ್, ಸಂಘದ ಮಾಜಿ ಅಧ್ಯಕ್ಷರಾದ ಎಚ್.ಆರ್.ಬಾಗವಾನ, ಅಮೀನಸಾಬ ಮುಲ್ಲಾ, ಸದಸ್ಯರಾದ ನೂರೇನಬಿ ನದಾಫ, ಬಂದೇನವಾಜ್ ಕುಮಸಿ, ಬಸವರಾಜ ಕುಂಬಾರ, ಸಾಗರ ಉಕ್ಕಲಿ, ಪುಂಡಲೀಕ ಮುರಾಳ, ಮಕ್ಬುಲ್ ಬನ್ನೆಟ್ಟಿ, ಹಣಮಂತ ಬೀರಗೊಂಡ(ಢವಳಗಿ), ಮುತ್ತು ಬೀರಗೊಂಡ (ಢವಳಗಿ), ಗುರುರಾಜ ಪತ್ತಾರ(ಬಡಿಗೇರ), ಕೃಷ್ಣಾ ಕುಂಬಾರ, ಸೂರಜ್ ರಿಸಾಲ್ದಾರ್, ಈಶ್ವರ ಈಳಗೇರ(ರೂಢಗಿ), ನಾಗೇಂದ್ರ ಶಿವಸಿಂಪಿ ಇದ್ದರು.

ಆಯ್ಕೆಯಾದ ಪತ್ರಕರ್ತರು:
ಮುದ್ದೇಬಿಹಾಳ ತಾಲೂಕು ಮಟ್ಟದ ಉತ್ತಮ ಪತ್ರಕರ್ತ ವಾರ್ಷಿಕ ಪ್ರಶಸ್ತಿಗೆ ಯುವ ಪತ್ರಕರ್ತರಾದ ಹಣಮಂತ ಬೀರಗೊಂಡ (ಢವಳಗಿ), ರಿಯಾಜ್ ಮುಲ್ಲಾ, ಮುತ್ತು ಟಕ್ಕಳಕಿ, ಈಶ್ವರ ಈಳಗೇರ (ರೂಢಗಿ) ಮತ್ತು ಕೃಷ್ಣಾ ಕುಂಬಾರ ಹಾಗೂ ಸಂಘದ ಹಿರಿಯ ಸದಸ್ಯ ನೂರೇನಬಿ ನದಾಫ ಅವರನ್ನು ಚೀಟಿ ಎತ್ತುವ ಮೂಲಕ ಸಂಘದ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ