Press Day on June 26: Awards for best journalists

ಜು.26 ರಂದು ಪತ್ರಿಕಾ ದಿನಾಚರಣೆ: ಉತ್ತಮ ಪತ್ರಕರ್ತರಿಗೆ ಪ್ರಶಸ್ತಿಗೆ

ಜು.26 ರಂದು ಪತ್ರಿಕಾ ದಿನಾಚರಣೆ: ಉತ್ತಮ ಪತ್ರಕರ್ತರಿಗೆ ಪ್ರಶಸ್ತಿಗೆ

ಮುದ್ದೇಬಿಹಾಳ : ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.26 ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದ್ದು ನಗರ,ಗ್ರಾಮೀಣ ಭಾಗದ ಐವರು ಪತ್ರಕರ್ತರಿಗೆ ಹಾಗೂ ಒಬ್ಬರನ್ನು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಮುತ್ತು ವಡವಡಗಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದಿದ್ದ ಕಾನಿಪ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಜು.26ರಂದು ಬೆಳಿಗ್ಗೆ 9 ಗಂಟೆಗೆ ಆಲಮಟ್ಟಿ ರಸ್ತೆ ಪಕ್ಕದ ಅರಿಹಂತಗಿರಿಯಲ್ಲಿರುವ ಅರಿಹಂತ ಚಾರಿಟೇಬಲ್ ಟ್ರಸ್ಟ್ನ ಕಾಲೇಜು ಆವರಣದಲ್ಲಿ ಸಮಾರಂಭ ಹಮ್ಮಿಕೊಳ್ಳಲು, ಪಿಯುಸಿ, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮದ ಮೌಲ್ಯ, ಪತ್ರಕರ್ತರ ಕರ್ತವ್ಯ ಸೇರಿ ಹಲವು ವಿಷಯಗಳನ್ನು ತಿಳಿಸಿಕೊಡಲು ವಿಶೇಷ ಉಪನ್ಯಾಸ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ. ವಡವಡಗಿ ಮಾತನಾಡಿ, ಕೆಯುಡಬ್ಲುಜೆ ವಿಜಯಪುರ ಜಿಲ್ಲಾ ಘಟಕಕ್ಕೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಸವನ ಬಾಗೇವಾಡಿಯ ಹಿರಿಯ ಪತ್ರಕರ್ತ ಪ್ರಕಾಶ ಬೆಣ್ಣೂರ ಅವರನ್ನು ಸನ್ಮಾನಿಸಲು ತೀರ್ಮಾನಿಸಿರುವ ಹಾಗೂ ಸರ್ವ ಸದಸ್ಯರು ಸ್ವ ಇಚ್ಚೆಯಿಂದ ಸಮಾರಂಭದ ಜವಾಬ್ಧಾರಿ ವಹಿಸಿಕೊಂಡು ಯಾರಿಂದಲೂ ಚಂದಾ ಎತ್ತದೆ ಸಮಾರಂಭವನ್ನು ಮಾದರಿಯಾಗಿಸಲು ಮುಂದೆ ಬಂದಿರುವುದು ಶ್ಲಾಘನೀಯ ಎಂದರು.

ಸಂಘದ ತಾಲೂಕು ಉಪಾಧ್ಯಕ್ಷ ಸಿದ್ದು ಚಲವಾದಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನವರ್, ಸಂಘದ ಮಾಜಿ ಅಧ್ಯಕ್ಷರಾದ ಎಚ್.ಆರ್.ಬಾಗವಾನ, ಅಮೀನಸಾಬ ಮುಲ್ಲಾ, ಸದಸ್ಯರಾದ ನೂರೇನಬಿ ನದಾಫ, ಬಂದೇನವಾಜ್ ಕುಮಸಿ, ಬಸವರಾಜ ಕುಂಬಾರ, ಸಾಗರ ಉಕ್ಕಲಿ, ಪುಂಡಲೀಕ ಮುರಾಳ, ಮಕ್ಬುಲ್ ಬನ್ನೆಟ್ಟಿ, ಹಣಮಂತ ಬೀರಗೊಂಡ(ಢವಳಗಿ), ಮುತ್ತು ಬೀರಗೊಂಡ (ಢವಳಗಿ), ಗುರುರಾಜ ಪತ್ತಾರ(ಬಡಿಗೇರ), ಕೃಷ್ಣಾ ಕುಂಬಾರ, ಸೂರಜ್ ರಿಸಾಲ್ದಾರ್, ಈಶ್ವರ ಈಳಗೇರ(ರೂಢಗಿ), ನಾಗೇಂದ್ರ ಶಿವಸಿಂಪಿ ಇದ್ದರು.

ಆಯ್ಕೆಯಾದ ಪತ್ರಕರ್ತರು:
ಮುದ್ದೇಬಿಹಾಳ ತಾಲೂಕು ಮಟ್ಟದ ಉತ್ತಮ ಪತ್ರಕರ್ತ ವಾರ್ಷಿಕ ಪ್ರಶಸ್ತಿಗೆ ಯುವ ಪತ್ರಕರ್ತರಾದ ಹಣಮಂತ ಬೀರಗೊಂಡ (ಢವಳಗಿ), ರಿಯಾಜ್ ಮುಲ್ಲಾ, ಮುತ್ತು ಟಕ್ಕಳಕಿ, ಈಶ್ವರ ಈಳಗೇರ (ರೂಢಗಿ) ಮತ್ತು ಕೃಷ್ಣಾ ಕುಂಬಾರ ಹಾಗೂ ಸಂಘದ ಹಿರಿಯ ಸದಸ್ಯ ನೂರೇನಬಿ ನದಾಫ ಅವರನ್ನು ಚೀಟಿ ಎತ್ತುವ ಮೂಲಕ ಸಂಘದ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ