Shankara Hebba is the unopposed choice for Banashankari Patta's cooperative society

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕರ ಈ. ಹೆಬ್ಬಾಳ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.

ಇಲ್ಲಿನ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ತುರ್ತು ಸಭೆಯಲ್ಲಿ ಸರ್ವ ಸದಸ್ಯರು ಈ ಆಯ್ಕೆಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು.

ಸಂಘದ ಈ ಹಿಂದಿನ ಅಧ್ಯಕ್ಷರಾಗಿದ್ದ ಬಸಪ್ಪ ಹೆಬ್ಬಾಳ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಿರ್ದೇಶಕ ಶಂಕರ ಹೆಬ್ಬಾಳ ಅವರನ್ನು ಅಧ್ಯಕ್ಷರಾಗಿ ಸರ್ವ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಸಂಘದ ಪ್ರಧಾನ ವ್ಯವಸ್ಥಾಪಕರಾದ ವಿಜಯಲಕ್ಷ್ಮಿ ಪ್ಯಾಟಿಗೌಡರ ತಿಳಿಸಿದರು.

ಬಸಪ್ಪ ಹೆಬ್ಬಾಳ ಅವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ಅವರ ಪುತ್ರ ಚಂದ್ರಕಾಂತ ಹೆಬ್ಬಾಳ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಮೇಶ ಹೆಬ್ಬಾಳ, ನಿರ್ದೇಶಕರಾದ ಸಂಗಪ್ಪ ಕಲ್ಲುಂಡಿ, ಸುಭಾಷ ರುದ್ರಗಂಟಿ, ಉಮೇಶ ಪ್ಯಾಟಿಗೌಡರ, ದ್ಯಾವಪ್ಪ ಹುಣಶ್ಯಾಳ, ಬಸಪ್ಪ ಹುಣಶ್ಯಾಳ, ಬಸವರಾಜ ಅಗಸಬಾಳ, ಶಂಕ್ರಮ್ಮ ಪ್ಯಾಟಿಗೌಡರ, ಜಯಶ್ರೀ ಹೆಬ್ಬಾಳ, ಚಂದ್ರಕಾಂತ ಹೆಬ್ಬಾಳ ಇದ್ದರು.

ಪ್ರಧಾನ ವ್ಯವಸ್ಥಾಪಕರಾದ ವಿಜಯಲಕ್ಷ್ಮಿ ಪ್ಯಾಟಿಗೌಡರ ನಿರೂಪಿಸಿ ವಂದಿಸಿದರು. ಅಗಲಿದ ಹಿಂದಿನ ಅಧ್ಯಕ್ಷ ಬಸಪ್ಪ ಹೆಬ್ಬಾಳ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು.

ಮುದ್ದೇಬಿಹಾಳದಲ್ಲಿ ಕಳೆದ ಇಪ್ಪತೈದು ವರ್ಷಗಳ ಹಿಂದೆ ಆರಂಭಗೊಂಡಿರುವ ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ನನ್ನನ್ನು ಆಯ್ಕೆ ಮಾಡಿರುವ ಸರ್ವ ಆಡಳಿತ ಮಂಡಳಿ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.ನನ್ನ ಅವಧಿಯಲ್ಲಿ ಸಂಘದ ಗ್ರಾಹಕರು, ಶೇರುದಾರರ ವಿಶ್ವಾಸ ವೃದ್ಧಿಸಿ ಸಿಬ್ಬಂದಿಯ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ.
–ಶಂಕರ ಈ.ಹೆಬ್ಬಾಳ,ಅಧ್ಯಕ್ಷ, ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘ

Latest News

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್‌ಗೆ ಪೈಪ್ ಜೋಡಿಸುವ ವೇಳೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ ಪಾತ್ರವಾಗಿದೆ.ಕೋವಿಡ್ ಸಮಯದಲ್ಲಿ ಲಕ್ಷಾಂತರ ಜನರ ಜೀವ ಉಳಿಸಲು ಶ್ರಮಿಸಿದ ಅವರನ್ನು ಆಕ್ಸಿಜನ್ ಮ್ಯಾನ್ ಎಂದೇ ಗುರುತಿಸಲಾಗಿದೆ ಎಂದು ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಹೇಳಿದರು. ಪಟ್ಟಣದ ಬಸವೇಶ್ವರ ಸರ್ಕಲ್‌ನಲ್ಲಿ ಎನ್.ಎಸ್.ಯೂ.ಐ ಹಾಗೂ ಯುವ ಕಾಂಗ್ರೆಸ್ ಸಂಘಟನೆ ವತಿಯಿಂದ ಮಂಗಳವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಅಧಿಕಾರ ಪೂರೈಸಿದ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು ನೆರಬೆಂಚಿ ಗ್ರಾಮದ ವೇ.ಸಂಗಯ್ಯ ಹಾಲಗಂಗಾಧರಮಠ ಹೇಳಿದರು. ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನಲ್ಲಿ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರ ಇಂದು ವ್ಯಾಪಾರೀಕರಣಗೊಂಡಿದೆ.ಎಲ್.ಕೆ.ಜಿ.ಯುಕೆಜಿ ಮಕ್ಕಳಿಗೆ 50-60 ಸಾವಿರ ರೂ.ಶುಲ್ಕ ವಸೂಲಿ ಮಾಡುವ ಮೂಲಕ ಶಿಕ್ಷಣ ದುಬಾರಿಯೆನ್ನುವ ಭಾವನೆಯನ್ನು ಉಳ್ಳವರು ಪ್ರದರ್ಶನ ಮಾಡುತ್ತಿದ್ದಾರೆ.ಬಡ.ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣ ಕೈಗೆಟುಕಬೇಕಾದರೆ