Sudden sit-in by Gramam member: Allegedly demanding bribe for payment of Narega wages

ಗ್ರಾಪಂ ಸದಸ್ಯನಿಂದ ದಿಢೀರ್ ಧರಣಿ: ನರೇಗಾ ಕೂಲಿ ಹಣ ಪಾವತಿಗೆ ಲಂಚಕ್ಕೆ ಬೇಡಿಕೆ ಆರೋಪ

ಗ್ರಾಪಂ ಸದಸ್ಯನಿಂದ ದಿಢೀರ್ ಧರಣಿ: ನರೇಗಾ ಕೂಲಿ ಹಣ ಪಾವತಿಗೆ ಲಂಚಕ್ಕೆ ಬೇಡಿಕೆ ಆರೋಪ

ಮುದ್ದೇಬಿಹಾಳ : ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ 40 ಕೂಲಿಕಾರರು ಕೆಲಸ ಮಾಡಿದ್ದು ಅವರಿಗೆ ಬಿಲ್ ಪಾವತಿಸುವಂತೆ ಕೇಳಿದರೆ ಇಲ್ಲಿನ ತಾಪಂ ಕಚೇರಿಯ ಜೆ.ಇ ಉಮೇಶ ಕನ್ನಿ, ತಾಲ್ಲೂಕ ಸಂಯೋಜಕ ಶಂಕರಗೌಡ ಯಾಳವಾರ ಪರ್ಸೆಂಟೇಜ್‌ಗೆ ಬೇಡಿಕೆ ಇಡುತ್ತಿದ್ದಾರೆ. ಪರ್ಸೆಂಟೇಜ್ ಕೊಡದಿದ್ದರೆ ಬಿಲ್ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಹುಲ್ಲೂರು ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ತಾಪಂ ಕಚೇರಿ ಮುಂದೆ ಗುರುವಾರ ದಿಢೀರ್ ಧರಣಿ ನಡೆಸಿದರು.

ತಾಪಂ ಕಚೇರಿ ಮುಂದೆ ಏಕಾಂಗಿಯಾಗಿ ಧರಣಿ ನಡೆಸುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತಾಲ್ಲೂಕಿನ ಹುಲ್ಲೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಎಮ್.ಜಿ.ಎನ್.ಆರ್.ಜಿ ಬಿಲ್ ಪಾವತಿಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಜು. 4 ರಂದು ಕಾಮಗಾರಿ ಮುಕ್ತವಾಗಿದ್ದು ಸರಕಾರದ ಸುತ್ತೋಲೆಯಲ್ಲಿ ಕೂಲಿಕಾರ ಬಿಲ್ ಪಾವತಿಸಲು ಕೆಲಸ ಮುಗಿದ ಮೂರು ದಿನಗಳಲ್ಲಿ ಬಿಲ್‌ಪಾವತಿಸಲು ಆದೇಶ ಇದ್ದರೂ ಇಲ್ಲಿನ ಅಧಿಕಾರಿಗಳು ಎಂ.ಐ.ಎಸ್ ಮಾಡಲು ನಿರಾಕರಿಸಿದ್ದಾರೆ ಎಂದು ದೂರಿದರು.

ಈ ಕುರಿತು ತಾಪಂ ಇಒ ಗಮನಕ್ಕೆ ತಂದರೂ ಅವರು ಕೂಲಿಕಾರರ ಕೂಲಿ ಪಾವತಿಗೆ ಸಂಬಂಧಿಸಿದವರಿಗೆ ಸೂಚಿಸದೇ ಮೌನವಾಗಿದ್ದಾರೆ. ಲಂಚ ಕೊಡದಿದ್ದರೆ ಬಿಲ್ ಮಾಡುವುದಿಲ್ಲ. ಯಾರ ಮುಂದೆ ಹೇಳಿಕೊಳ್ಳುತ್ತಿರೋ ಹೇಳಿಕೊಳ್ಳಿ ಎಲ್ಲರಿಗೂ ನಾವು ಲಂಚ ಮುಟ್ಟಿಸುತ್ತೇವೆ ಎಂದು ಹೇಳಿದ್ದು ಇವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಏಕಾಂಗಿಯಾಗಿ ಧರಣಿ ನಡೆಸುತ್ತಿದ್ದ ಗ್ರಾಪಂ ಸದಸ್ಯ ಶಿವಾನಂದ ಅವರನ್ನು ಭೇಟಿ ಮಾಡಿದ ತಾಪಂ ಯೋಜನಾಧಿಕಾರಿ ಖೂಭಾಸಿಂಗ ಜಾಧವ, ನೀವು ಇಲ್ಲಿ ಪ್ರತಿಭಟನೆ ಮಾಡಿದರೆ ಯಾರೂ ಕೇಳುವುದಿಲ್ಲ. ಜಿಪಂ ಆವರಣದಲ್ಲಿ ಧರಣಿ ಮಾಡಿ ಎಂದು ಬೇಜವಬ್ದಾರಿಯಿಂದ ಉತ್ತರಿಸಿದ್ದಾರೆ ಎಂದು ಆರೋಪಿಸಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು