Development of vachana literature is due to Halakatti

ಹಳಕಟ್ಟಿಯವರಿಂದಲೇ ವಚನ ಸಾಹಿತ್ಯದ ಅಭಿವೃದ್ಧಿ

ಹಳಕಟ್ಟಿಯವರಿಂದಲೇ ವಚನ ಸಾಹಿತ್ಯದ ಅಭಿವೃದ್ಧಿ

ಮುದ್ದೇಬಿಹಾಳ : ಶರಣರು ವಚನಗಳನ್ನು ಬರೆದರೆ ಅವುಗಳನ್ನು ಸಂಗ್ರಹಿಸಿ ಸಮಾಜಕ್ಕೆ ಪಸರಿಸಿದ ಫ. ಗು. ಹಳಕಟ್ಟಿ ವಚನ ಸಾಹಿತ್ಯವನ್ನು ಬೆಳೆಸಿದ್ದಾರೆ ಎಂದು ಚಿಂತಕಿ ಸೀಮಾ ದಂಡಾವತಿ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿ ಸುರೇಶ ಬಾದರಬಂಡಿ ಅವರ ಮನೆಯಲ್ಲಿ ಗುರುವಾರ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ವೇದಿಕೆ,ಬಸವ ಮಹಾಮನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಶರಣ ಬೆಳಗು ಅನುಭಾವ ಮಾಲೆ -40 ಸಂಚಿಕೆಯ ಹುಣ್ಣಿಮೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಕ ರುದ್ರೇಶ ಕಿತ್ತೂರ ಮಾತನಾಡಿ, ಡಾ.ಫ.ಗು.ಹಳಕಟ್ಟಿ ಅವರು ವಚನ ಗುಮ್ಮಟ ಎಂದು ಖ್ಯಾತರಾದವರು. ಅವರಿಂದಲೇ ವಚನ ಸಾಹಿತ್ಯ ಉಳಿಯಿತು. ಬೆಳೆದು ಹರಡಲು ಸಾಧ್ಯವಾಯಿತು. ವಚನಶಾಸ್ತ್ರ ಸಾರ 3 ಸಂಪುಟಗಳು, ಹರಿಹರನ ರಗಳೆ, ಶೂನ್ಯ ಸಂಪಾದನೆ ಶಿವಶರಣ ಚರಿತ್ರೆ, ಅಮರ ಗಣಾಧಿಶ್ವರರ ಚರಿತ್ರೆ ಅತ್ಯಂತ ಮಹತ್ವದ ಕೃತಿಗಳಾಗಿವೆ ಎಂದು ಹೇಳಿದರು.

ಶಿಕ್ಷಕಿ ರಾಜೇಶ್ವರಿ ಕಡಿ ಮಾತನಾಡಿ, ಹಡಪದ ಅಪ್ಪಣ್ಣನವರು ಬಸವಣ್ಣನವರ ಆಪ್ತ ಕಾರ್ಯದರ್ಶಿ. ತಾಂಬೂಲುವನ್ನು ಒದಗಿಸುವ ಅಚ್ಚುಮೆಚ್ಚಿನ ಶರಣಾಗಿದ್ದರು. ಭೌತಿಕದಲ್ಲಿ ಮಾತ್ರವಲ್ಲ ಪಾರಮಾರ್ಥಿಕ ವಿಷಯಗಳಲ್ಲಿಯೂ ಬಸವಣ್ಣನವರಿಗೆ ಸಹಾಯಕರಾಗಿದ್ದರು ಎಂದರು.

ಕದಳಿ ವೇದಿಕೆ ಅಧ್ಯಕ್ಷೆ ಕಾಶಿಬಾಯಿ ರಾಂಪೂರ , ನಿವೃತ್ತ ಮುಖ್ಯಶಿಕ್ಷಕಿ ಡಿ.ಬಿ.ಗುರಿಕಾರ, ಕುಷ್ಟಗಿಯ ರಮೇಶ ಸ್ವಾಮೀಜಿ, ಮಹಾದೇವಿ ನಾಲತವಾಡ ಮಾತನಾಡಿದರು. ಚೌಡಮ್ಮ ಶಿವಯೋಗಿಮಠ ಸ್ವಾಗತಿಸಿದರು. ಸರೋಜಾ ಕೋರಿ ನಿರೂಪಿಸಿದರು. ಕದಳಿ ವೇದಿಕೆ, ಶರಣ ಸಾಹಿತ್ಯ ಪರಿಷತ್, ಮನೆಯಲ್ಲಿಮಹಾಮನೆ ಬಳಗದ ಸದಸ್ಯರು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು