Allegation of percentage for payment of wages: Notice issued to three employees asking the reason

ಕೂಲಿ ಪಾವತಿಗೆ ಪರ್ಸೆಂಟೇಜ್ ಆರೋಪ : ಮೂವರು ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಕೂಲಿ ಪಾವತಿಗೆ ಪರ್ಸೆಂಟೇಜ್ ಆರೋಪ : ಮೂವರು ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರಿಗೆ ವೇತನ ಪಾವತಿಸಲು ಪರ್ಸೆಂಟೇಜ್‌ಗೆ ಬೇಡಿಕೆ ಇರಿಸಿರುವ ಆರೋಪದ ಮೇರೆಗೆ ಮೂವರು ನೌಕರರಿಗೆ ತಾಪಂ ಇಓ ಕಾರಣ ಕೇಳುವ ನೋಟಿಸ್ ಜಾರಿ ಮಾಡಿದ್ದಾರೆ.

ಏತನ್ಮಧ್ಯೆ ಶುಕ್ರವಾರವೂ ತಾಪಂ ಕಚೇರಿ ಮುಂದೆ ಧರಣಿ ನಡೆಸಿದ ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ಅವರನ್ನು ಭೇಟಿಯಾದ ತಾಪಂ ಇಒ ನಿಂಗಪ್ಪ ಮಸಳಿ, ಸದರಿ ಕೂಲಿಕಾರರ ಹಣವನ್ನು ಮುಂದಿನ ಹಂತದ ಕೂಲಿ ಪಾವತಿ ಸಮಯದಲ್ಲಿ ಮಾಡುವಂತೆ ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕರಿಗೆ ಸೂಚಿಸಲಾಗಿದೆ. ಗ್ರಾಪಂ ಸದಸ್ಯರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಲು ತಿಳಿಸಲಾಗಿದೆ ಎಂದು ಹೇಳಿದರು.

ಧರಣಿ ನಿರತ ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ಮಾತನಾಡಿ, ತಾಪಂ ಇಒ ಅವರು ಕೊಟ್ಟ ಭರವಸೆ ಮೇರೆಗೆ ಧರಣಿ ಹಿಂದಕ್ಕೆ ಪಡೆದುಕೊಳ್ಳುತ್ತಿದ್ದು ಬಾಕಿ ಕೂಲಿ ಹಣ ಪಾವತಿಸದೇ ಇದ್ದರೆ ಮತ್ತೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದರು. ಗ್ರಾಪಂ ಸದಸ್ಯನ ಹೋರಾಟಕ್ಕೆ ಗ್ರಾಪಂ ಅಧ್ಯಕ್ಷೆ ನೈನಾ ಚವ್ಹಾಣ ಅವರು ಬೆಂಬಲಿಸಿದರು. ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕ ಶಂಕರಗೌಡ ಯಾಳವಾರ, ಟಿಐಇ ಉಮೇಶ ಕನ್ನಿ ಹಾಗೂ ಹುಲ್ಲೂರು ಗ್ರಾಪಂ ಪಿಡಿಒ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಸೇವೆಯಲ್ಲಿರುವ ತಾಂತ್ರಿಕ ಸಹಾಯಕರು, ಎನ್.ಆರ್.ಇ.ಜಿ ಸಿಬ್ಬಂದಿ ಜನಪ್ರತಿನಿಧಿಗಳು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವ್ಯವಹರಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.

ಎನ್.ಆರ್.ಇ.ಜಿ ಕೂಲಿಕಾರರ ವೇತನ ಪಾವತಿಗೆ ಪರ್ಸೇಂಟೇಜ್‌ಗೆ ಬೇಡಿಕೆ ಇಟ್ಟ ವಿಷಯಕ್ಕೆ ಸಂಬಂಧಿಸಿದಂತೆ ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕ ಶಂಕರಗೌಡ ಯಾಳವಾರ, ಟಿಐಇ ಉಮೇಶ ಕನ್ನಿ ಅವರನ್ನು ತಾಪಂ ಇಒ ನಿಂಗಪ್ಪ ಮಸಳಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಲಿಕಾರರ ಹಣ ಪಾವತಿ ಮಾಡಲು ಕೇಳಿದರೆ ಹೀಗೆ ಬೇಜವಾಬ್ದಾರಿಯಿಂದ ವರ್ತಿಸಿದ್ದು ಮರುಕಳಿಸಿದರೆ ಮೇಲಧಿಕಾರಿಗಳಿಗೆ ಕಠಿಣ ಕ್ರಮ ಕೈಗೊಳ್ಳಲು ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ