A caste was jailed by a Guru - Jayasiddeswar Sri

ಜಾತಿಗೊಬ್ಬ ಗುರು ಮಾಡಿದವ ಜೈಲು ಸೇರಿದ- ಜಯಸಿದ್ದೇಶ್ವರ ಶ್ರೀ

ಜಾತಿಗೊಬ್ಬ ಗುರು ಮಾಡಿದವ ಜೈಲು ಸೇರಿದ- ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಜಾತಿಗೊಬ್ಬ ಗುರುವನ್ನು ಮಾಡಿದ್ದರಿಂದ ವೀರಶೈವ ಲಿಂಗಾಯತ ಧರ್ಮ ಹಾಳಾಗಿ ಹೋಗಿದೆ. ಜಾತಿಗೊಬ್ಬ ಗುರು ಮಾಡಿದವ ಜೈಲು ಸೇರಿದ ಎಂದು ಹಿರೂರು ಅನ್ನದಾನೇಶ್ವರ ಮಠದ ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಗಜದಂಡ ಶಿವಾಚಾರ್ಯರ ಮಠದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗುರುಪೌರ್ಣಿಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 3-4 ಕಾವಿಧಾರಿಗಳು ಧರ್ಮವನ್ನು ಕೆಡಿಸಿದ್ದಾರೆ. ಕಂಡ ಕಂಡವರಿಗೆಲ್ಲ ಸ್ವಾಮಿಗಳೆಂದು ಕಾಲು ಮುಗಿಯಬೇಡಿ. ಕೆಲ ಕಾವಿಧಾರಿಗಳು ವೀರಶೈವ ಲಿಂಗಾಯತ ಧರ್ಮ ಒಡೆಯಲು ಮುಂದಾಗಿದ್ದಾರೆ. ಗುರುವಿನ ಹಿನ್ನೆಲೆ ಅರಿತು ಕಾಲು ಮುಗಿಯಬೇಕು. ಶಿಶುನಾಳ ಷರೀಫ, ಸಜ್ಜಲಗುಡ್ಡ ಶರಣಮ್ಮ, ಸಿದ್ಧಾರೂಢರು, ಗಜದಂಡ ಶಿವಾಚಾರ್ಯರು ದೇವರನ್ನು ತೋರಿಸುವ ಗುರುಗಳಾಗಿದ್ದರು ಎಂದರು.

ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಸ್ವಾಮಿಗಳು ಹಲವರಿದ್ದು ಸ್ವಾಮಿತ್ವ ಪಡೆವರೆಷ್ಟು ಲೆಕ್ಕ ಹಾಕಿ ನೋಡಿದರೆ ಕಳವಳ ಉಂಟಾಗುತ್ತದೆ. ಸ್ವಾಮಿಯಾಗುವುದು ಈಗ ಉದ್ಯೋಗವಾಗಿದೆ. ತಂದೆ, ತಾಯಿ, ಸಂಸ್ಕಾರ ನೀಡುವ ಶಿಕ್ಷಕರು, ರೈತರು, ಸೈನಿಕರು ಗುರುಗಳಾಗಿದ್ದಾರೆ ಎಂದರು.

ಸರೂರು-ಅಗತೀರ್ಥ ಹಾಲುಮತ ಗುರುಪೀಠದ ರೇವಣಸಿದ್ದೇಶ್ವರ ಸ್ವಾಮೀಜಿ, ಸಾಹಿತಿ ಬಿ. ಎಂ. ಹಿರೇಮಠ, ಕನ್ನೂರಿನ ಚಂದ್ರಶೇಖರ ಮಹಾರಾಜರು, ಉದ್ಯಮಿ ಟಿ. ವಿಜಯಭಾಸ್ಕರ್, ಜಮ್ಮಲದಿನ್ನಿ ಸಿದ್ಧರಾಮದೇವರು, ಸಂತೋಷ ಶಾಸ್ತ್ರಿ ಸುಶೀಲಮ್ಮ ಶರಣೆ ಇದ್ದರು. ಗಜದಂಡ ಹಾಗೂ ಸಿದ್ದಾರೂಢ ಸ್ವಾಮೀಜಿಗಳ ಚಿತ್ರವನ್ನು ಮೆರವಣಿಗೆ ನಡೆಸಲಾಯಿತು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು