Election of office bearers for photographers' association: Ravi Talikoti elected as president, Parasurama Nagarabetta as vice president

ಛಾಯಾಚಿತ್ರಗ್ರಾಹಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ: ರವಿ ತಾಳಿಕೋಟಿ ಅಧ್ಯಕ್ಷ,ಪರಶುರಾಮ ನಾಗರಬೆಟ್ಟ ಉಪಾಧ್ಯಕ್ಷರಾಗಿ ಆಯ್ಕೆ

ಛಾಯಾಚಿತ್ರಗ್ರಾಹಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ: ರವಿ ತಾಳಿಕೋಟಿ ಅಧ್ಯಕ್ಷ,ಪರಶುರಾಮ ನಾಗರಬೆಟ್ಟ ಉಪಾಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಛಾಯಾಚಿತ್ರ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳನ್ನು ಭಾನುವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಆಯ್ಕೆ ಮಾಡಲಾಯಿತು.

ಸಂಘದ ಸಲಹ ಸಮೀತಿ ಸದಸ್ಯರಾದ ಹಿರಿಯ ಛಾಯಾಗ್ರಾಹಕರಾದ ಬುಡ್ಡಾ ಕುಂಟೋಜಿ, ಬಸವರಾಜ ಅಂಗಡಗೇರಿ, ಗುಲಾಮಮೊಹ್ಮದ ದಫೇದಾರ, ಮಹೇಶ ಕೆಂಧೂಳಿ, ಶೇಖರ ಪತ್ತಾರ, ಮುತ್ತು ಮಾದಿನಾಳ ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರವಿ ತಾಳಿಕೋಟಿ, ಉಪಾಧ್ಯಕ್ಷರಾಗಿ ಪರಶುರಾಮ ನಾಗರಬೆಟ್ಟ, ಪ್ರಧಾನ ಕಾರ್ಯದರ್ಶಿಯಾಗಿ ವಿವೇಕ ದೋಟಿಹಾಳ, ಸಹ ಕಾರ್ಯದರ್ಶಿಯಾಗಿ ಶಿವು ತಾಳಿಕೋಟಿ, ಖಜಾಂಚಿಯಾಗಿ ಲಕ್ಕಪ್ಪ ತುರುಡಗಿ, ಸಂಘಟನಾ ಕಾರ್ಯದರ್ಶಿಯಾಗಿ ಅಯ್ಯಪ್ಪ ತಂಗಡಗಿ, ಕಾರ್ಯಕಾರಿ ಸಮೀತಿ ಸದಸ್ಯರಾಗಿ ಹೊಳೆಪ್ಪ ಕಣಕಾಲ, ಯಲ್ಲಪ್ಪ ಮ್ಯಾಗೇರಿ, ಸೋಮು ಸಜ್ಜನ(ಬಿದರಕುಂದಿ), ಮಲ್ಲು ಕಡಿ, ಮುನ್ನಾ ಸಾತಕೇಡ, ಸೋಮು ಸಜ್ಜನ, ಜಗದೀಶ ಹಡಪದ, ಬಸವರಾಜ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಂಘದ ನೂತನ ಅಧ್ಯಕ್ಷ ರವಿ ತಾಳಿಕೋಟಿ, ನಿಂತ ನೀರಾಗಿದ್ದ ಛಾಯಾಚಿತ್ರಗ್ರಾಹಕರ ಸಂಘದ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದು ಖುಷಿ ತಂದಿದೆ. ಕಟ್ಟ ಕಡೆಯ ಫೋಟೋಗ್ರಾಫರ್ ಕೂಡಾ ಆರ್ಥಿಕವಾಗಿ ಸಬಲರಾಗಬೇಕು ಎಂಬ ಗುರಿಯನ್ನಿಟ್ಟುಕೊಂಡು ಸರ್ವ ಸದಸ್ಯರ ಸಹಕಾರದಿಂದ ಸಂಘವನ್ನು ಮುನ್ನಡೆಸುವುದಾಗಿ ತಿಳಿಸಿದರು.

ಉಪಾಧ್ಯಕ್ಷ ಪರಶುರಾಮ ನಾಗರಬೆಟ್ಟ ಮಾತನಾಡಿ, ಸಂಘದ ಎಲ್ಲ ಸದಸ್ಯರ ಸಹಕಾರದೊಂದಿಗೆ ರಾಜ್ಯ ಸಂಘದವರು ತಿರುಗಿ ನೋಡುವಂತೆ ಮತ್ತೊಮ್ಮೆ ಸಂಘಟನೆಯನ್ನು ಬಲಪಡಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ಬಿಎಲ್‌ಡಿ ಸೌಹಾರ್ದ ಸಹಕಾರಿ ಬ್ಯಾಂಕಿನ ಸಲಹಾ ಸಮಿತಿ ನಿರ್ದೇಶಕರಾಗಿ ನೇಮಕಗೊಂಡ ಹಿರಿಯ ಛಾಯಾಗ್ರಾಹಕ ಬುಡ್ಡಾ ಕುಂಟೋಜಿ ಅವರನ್ನು ಸಂಘದ ಪರವಾಗಿ ಸನ್ಮಾನಿಸಲಾಯಿತು. ಮುದ್ದೇಬಿಹಾಳ ತಾಲ್ಲೂಕು ಛಾಯಾಚಿತ್ರ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು