Minister Santosh Lad visited the families of farmers who died due to debt

ಸಾಲಭಾದೆಯಿಂದ ಮೃತರಾದ ರೈತ ಕುಟುಂಬಗಳಿಗೆ ಸಚಿವ ಸಂತೋಷ್ ಲಾಡ್ ಭೇಟಿ

ಸಾಲಭಾದೆಯಿಂದ ಮೃತರಾದ ರೈತ ಕುಟುಂಬಗಳಿಗೆ ಸಚಿವ ಸಂತೋಷ್ ಲಾಡ್ ಭೇಟಿ

ಹುಬ್ಬಳ್ಳಿ̧ ಜುಲೈ 14: ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.

ಭರದ್ವಾಡ ಗ್ರಾಮಕ್ಕೆ ಭೇಟಿ ನೀಡಿ, ಇತ್ತೀಚೆಗೆ ಮೃತರಾದ ರೈತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಭರದ್ವಾಡ ಗ್ರಾಮದ ರೈತರಾದ ರವಿರಾಜ ಬಸವರಾಜ ಜಾಡರ ಹಾಗೂ ಬಸನಗೌಡ ಶಿವನಗೌಡ ಪಾಟೀಲ ಅವರ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ಸರ್ಕಾರದ ವತಿಯಿಂದ ಅವರ ಕುಟುಂಬಸ್ಥರಿಗೆ ಮನೆ, ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ರವಿರಾಜ ಜಾಡರ ಅವರ ಕೆನರಾ ಬ್ಯಾಂಕ್ ಸಾಲವನ್ನು ನಮ್ಮ ಫೌಂಡೇಶನ್ ವತಿಯಿಂದ ಭರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಬೆಳೆ ವಿಮೆ ಪರಿಹಾರವನ್ನು ಹಂತ ಹಂತವಾಗಿ ಹಾಗೂ ವ್ಯವಸ್ಥಿತ ರೀತಿಯಲ್ಲಿ ವಿತರಣೆ ಮಾಡಲಾಗುವುದು. ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಹುಬ್ಬಳ್ಳಿ ಧಾರವಾಡ ನಡುವೆ ಇಆರ್‌‌ಟಿ ಸಾರಿಗೆ:
ಹುಬ್ಬಳ್ಳಿ ಧಾರವಾಡ ನಡುವೆ ಓಡಾಡುತ್ತಿರುವ ಬಿಆರ್‌‌ಟಿಎಸ್ (ತ್ವರಿತ ಬಸ್ ಸಾರಿಗೆ ವ್ಯವಸ್ಥೆ) ಬದಲಿಗೆ ಇಆರ್‌‌ಟಿ ಸಾರಿಗೆ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ‌. ಅದರ ಸಾಧಕ ಬಾಧಕಗಳ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರಿಗೆ ವ್ಯವಸ್ಥೆಯನ್ನು ನೀಡುವುದು ಸರ್ಕಾರದ ಮೂಲ ಧ್ಯೇಯವಾಗಿದೆ. ಮುಂದಿನ ಒಂದು ತಿಂಗಳಲ್ಲಿ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಎಂ.ಎಸ್.ಅಕ್ಕಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ. ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಬ್ಯಾಕೋಡ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತಹಶೀಲ್ದಾರ ರಾಜು ಮಾವರಕರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ