Is it wrong to question the Prime Ministers of the country?: Minister Lad

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ಧಾರವಾಡ, ಜುಲೈ 14: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಪ್ರಶ್ನಿಸಿದರು.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಹುಲ್‌ ಗಾಂಧಿ, ಇಂದಿರಾ ಗಾಂಧಿ, ನೆಹರು ಬಗ್ಗೆ ಮಾತನಾಡಬಹುದು. ಪ್ರಪಂಚದ ಎಲ್ಲ ನಾಯಕರ ಬಗ್ಗೆ ಮಾತನಾಡಬಹುದು. ಆದರೆ ಕಾಂಗ್ರೆಸ್‌ನವರು ಮಾತ್ರ ಅವರಿಗೆ ಏನೂ ಕೇಳಬಾರದು. ಇವರಿಗೆ ಸರಿಯಾದ ಒಂದೇ ಪ್ರಶ್ನೆ ಕೇಳಬಾರದು. ಮುಜುಗರ ಆಗುವ ಪ್ರಶ್ನೆ ಕೇಳಬಾರದು. ಕೇಳಿದರೆ ಸಂತೋಷ್‌ ಲಾಡ್‌ ಹಾಗೆ ಮಾತನಾಡುತ್ತಾನೆ. ಹೀಗೆ ಮಾತನಾಡುತ್ತಾನೆ ಎಂದು ಹೇಳ್ತಾರೆ ಎಂದು ಹೇಳಿದರು.

ಟ್ರಂಪ್‌ ಯಾರ ಫ್ರೆಂಡ್‌
ಭಾರತ ಮತ್ತು ಪಾಕಿಸ್ತನ ನಡುವಿನ ಯುದ್ಧ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಕಳೆದ ನಲವತ್ತು ಐವತ್ತು ದಿನಗಳಲ್ಲಿ ಹಲವಾರು ಬಾರಿ ಹೇಳಿದ್ದಾರೆ. ಹಾಗಾದರೆ ಟ್ರಂಪ್‌ ಯಾರ ಫ್ರೆಂಡ್‌. ಟ್ರಂಪ್‌ ಹೇಳಿಕೆ ಬಗ್ಗೆ ಕೇಂದ್ರದ ಯಾವುದೇ ಸಚಿವರು, ಹೋಗಲಿ ಪ್ರಧಾನಿ ಇದಕ್ಕೆ ಉತ್ತರ ಕೊಡುತ್ತಿಲ್ಲ. ಇದನ್ನು ಪ್ರಶ್ನೆ ಮಾಡಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು.

ಮೋದಿ ಅವರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಏನು ವಾಗ್ದಾನ ಮಾಡಿದ್ರು. ಅದನ್ನು ನಾವು ಯಾವಾಗಲೂ ಪ್ರಶ್ನೆ ಮಾಡ್ತ ಇದ್ದೇವೆ. ಅವರಿಗೂ ನಮಗೂ ಯಾವುದೇ ವೈಯಕ್ತಿಯ ಅಜೆಂಡಾ ಇಲ್ಲ. ಆಗ ಇವರು ಸ್ಥಳೀಯ ವಿಷಯ ಮಾತ್ರ ಮಾತನಾಡಬೇಕು ಎನ್ನುತ್ತಾರೆ. ನಮ್ಮ ದೇಶದ ಪ್ರಧಾನಿಗೆ ಯಾರೇ ಪ್ರಶ್ನೆ ಮಾಡುವ ಹಕ್ಕು ಇದೆ. ಆ ಆವಕಾಶ ಚಲಾಯಿಸುತ್ತಿದ್ದೇವೆ. ನಾನು ಕೇಳುವ ಪ್ರಶ್ನೆಯಲ್ಲಿ ತಪ್ಪಿದ್ದರೆ ತಿದ್ದಿಕೊಳ್ಳುವೆ ಎಂದರು.

ಭಾರತಕ್ಕಿಂತ ಮೋದಿ ವರ್ಚಸ್ಸು ದೊಡ್ಡದಾಯ್ತಾ?
ಭಾರತಕ್ಕಿಂತ ಮೋದಿ ಅವರ ವರ್ಚಸ್ಸು ದೊಡ್ಡದಾ? ಈ ದೇಶ ಬರೀ ಕಾಂಗ್ರೆಸ್‌ ಬಿಜೆಪಿಯದ್ದಲ್ಲ. ದೇಶ ಎಲ್ಲರಿಗೂ ಸೇರಿದ್ದು. ಮೋದಿ ಅವರು ಕೇವಲ ಈ ದೇಶದ ಪ್ರಧಾನಿ ಅಷ್ಟೇ ಎಂದರು.

ಭಾರತದ ಸಾಧನೆ ಏನು
ಕಳೆದ ಹನ್ನೊಂದು ವರ್ಷದಲ್ಲಿ ಭಾರತ ಯಾವುದರಲ್ಲಿ ಮುಂದೆ ಇದೆ. ಏನು ಸಾಧನೆ ಮಾಡಿದೆ. ಯಾವ ಇಲಾಖೆಯಲ್ಲಿ ಸಾಧನೆ ಮಾಡಿದೆ ಎಂಬುದನ್ನು ತೋರಿಸಲಿ. ಡಾ. ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ̇87 ನೇ ರ್ಯಾಂಕಿಂಗ್‌ ನಲ್ಲಿ ಇದ್ದ ಭಾರತ ಇಂದು 150ನೇ ರ್ಯಾಂಕಿಂಗ್‌ಗೆ ಇಳಿದಿದೆ. ಇದು ನಾಚಿಕೆಗೇಡು ಅಲ್ಲವೇ ಎಂದು ವ್ಯಂಗ್ಯವಾಡಿದರು.

ಬಿಜೆಪಿಯಲ್ಲಿ ಇಂಗ್ಲಿಷ್‌ ಮಾತನಾಡುವವರು ಇಲ್ಲವೇ
ಪ್ರಧಾನಿ ಮೋದಿ ಅವರು ಈವರೆಗೆ 90 ದೇಶಕ್ಕೆ ಹೋಗಿದ್ದಾರೆ. ಶಶಿತರೂರ್‌ ಅವರು ಇವರಿಗೆ ಯಾಕೆ ಬೇಕು. ಇವರು ವಿಶ್ವಗುರು ಅಲ್ಲವೇ. ಬಿಜೆಪಿಯಲ್ಲಿ ಇಂಗ್ಲಿಷ್‌ ನಲ್ಲಿ ಸಮರ್ಥವಾಗಿ ಮಾತನಾಡುವವರು ಯಾರು ಇಲ್ಲವೇ. ಮೋದಿ ಅವರ ಕಾಲದಲ್ಲಿ ಭಾರತಕ್ಕೆ ವಿಶ್ವದ ಬೆಂಬಲದ ಕಡಿಮೆ ಆಗಿದೆ ಎಂದು ಹೇಳಿದರು.

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ