Is it wrong to question the Prime Ministers of the country?: Minister Lad

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ಧಾರವಾಡ, ಜುಲೈ 14: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಪ್ರಶ್ನಿಸಿದರು.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಹುಲ್‌ ಗಾಂಧಿ, ಇಂದಿರಾ ಗಾಂಧಿ, ನೆಹರು ಬಗ್ಗೆ ಮಾತನಾಡಬಹುದು. ಪ್ರಪಂಚದ ಎಲ್ಲ ನಾಯಕರ ಬಗ್ಗೆ ಮಾತನಾಡಬಹುದು. ಆದರೆ ಕಾಂಗ್ರೆಸ್‌ನವರು ಮಾತ್ರ ಅವರಿಗೆ ಏನೂ ಕೇಳಬಾರದು. ಇವರಿಗೆ ಸರಿಯಾದ ಒಂದೇ ಪ್ರಶ್ನೆ ಕೇಳಬಾರದು. ಮುಜುಗರ ಆಗುವ ಪ್ರಶ್ನೆ ಕೇಳಬಾರದು. ಕೇಳಿದರೆ ಸಂತೋಷ್‌ ಲಾಡ್‌ ಹಾಗೆ ಮಾತನಾಡುತ್ತಾನೆ. ಹೀಗೆ ಮಾತನಾಡುತ್ತಾನೆ ಎಂದು ಹೇಳ್ತಾರೆ ಎಂದು ಹೇಳಿದರು.

ಟ್ರಂಪ್‌ ಯಾರ ಫ್ರೆಂಡ್‌
ಭಾರತ ಮತ್ತು ಪಾಕಿಸ್ತನ ನಡುವಿನ ಯುದ್ಧ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಕಳೆದ ನಲವತ್ತು ಐವತ್ತು ದಿನಗಳಲ್ಲಿ ಹಲವಾರು ಬಾರಿ ಹೇಳಿದ್ದಾರೆ. ಹಾಗಾದರೆ ಟ್ರಂಪ್‌ ಯಾರ ಫ್ರೆಂಡ್‌. ಟ್ರಂಪ್‌ ಹೇಳಿಕೆ ಬಗ್ಗೆ ಕೇಂದ್ರದ ಯಾವುದೇ ಸಚಿವರು, ಹೋಗಲಿ ಪ್ರಧಾನಿ ಇದಕ್ಕೆ ಉತ್ತರ ಕೊಡುತ್ತಿಲ್ಲ. ಇದನ್ನು ಪ್ರಶ್ನೆ ಮಾಡಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು.

ಮೋದಿ ಅವರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಏನು ವಾಗ್ದಾನ ಮಾಡಿದ್ರು. ಅದನ್ನು ನಾವು ಯಾವಾಗಲೂ ಪ್ರಶ್ನೆ ಮಾಡ್ತ ಇದ್ದೇವೆ. ಅವರಿಗೂ ನಮಗೂ ಯಾವುದೇ ವೈಯಕ್ತಿಯ ಅಜೆಂಡಾ ಇಲ್ಲ. ಆಗ ಇವರು ಸ್ಥಳೀಯ ವಿಷಯ ಮಾತ್ರ ಮಾತನಾಡಬೇಕು ಎನ್ನುತ್ತಾರೆ. ನಮ್ಮ ದೇಶದ ಪ್ರಧಾನಿಗೆ ಯಾರೇ ಪ್ರಶ್ನೆ ಮಾಡುವ ಹಕ್ಕು ಇದೆ. ಆ ಆವಕಾಶ ಚಲಾಯಿಸುತ್ತಿದ್ದೇವೆ. ನಾನು ಕೇಳುವ ಪ್ರಶ್ನೆಯಲ್ಲಿ ತಪ್ಪಿದ್ದರೆ ತಿದ್ದಿಕೊಳ್ಳುವೆ ಎಂದರು.

ಭಾರತಕ್ಕಿಂತ ಮೋದಿ ವರ್ಚಸ್ಸು ದೊಡ್ಡದಾಯ್ತಾ?
ಭಾರತಕ್ಕಿಂತ ಮೋದಿ ಅವರ ವರ್ಚಸ್ಸು ದೊಡ್ಡದಾ? ಈ ದೇಶ ಬರೀ ಕಾಂಗ್ರೆಸ್‌ ಬಿಜೆಪಿಯದ್ದಲ್ಲ. ದೇಶ ಎಲ್ಲರಿಗೂ ಸೇರಿದ್ದು. ಮೋದಿ ಅವರು ಕೇವಲ ಈ ದೇಶದ ಪ್ರಧಾನಿ ಅಷ್ಟೇ ಎಂದರು.

ಭಾರತದ ಸಾಧನೆ ಏನು
ಕಳೆದ ಹನ್ನೊಂದು ವರ್ಷದಲ್ಲಿ ಭಾರತ ಯಾವುದರಲ್ಲಿ ಮುಂದೆ ಇದೆ. ಏನು ಸಾಧನೆ ಮಾಡಿದೆ. ಯಾವ ಇಲಾಖೆಯಲ್ಲಿ ಸಾಧನೆ ಮಾಡಿದೆ ಎಂಬುದನ್ನು ತೋರಿಸಲಿ. ಡಾ. ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ̇87 ನೇ ರ್ಯಾಂಕಿಂಗ್‌ ನಲ್ಲಿ ಇದ್ದ ಭಾರತ ಇಂದು 150ನೇ ರ್ಯಾಂಕಿಂಗ್‌ಗೆ ಇಳಿದಿದೆ. ಇದು ನಾಚಿಕೆಗೇಡು ಅಲ್ಲವೇ ಎಂದು ವ್ಯಂಗ್ಯವಾಡಿದರು.

ಬಿಜೆಪಿಯಲ್ಲಿ ಇಂಗ್ಲಿಷ್‌ ಮಾತನಾಡುವವರು ಇಲ್ಲವೇ
ಪ್ರಧಾನಿ ಮೋದಿ ಅವರು ಈವರೆಗೆ 90 ದೇಶಕ್ಕೆ ಹೋಗಿದ್ದಾರೆ. ಶಶಿತರೂರ್‌ ಅವರು ಇವರಿಗೆ ಯಾಕೆ ಬೇಕು. ಇವರು ವಿಶ್ವಗುರು ಅಲ್ಲವೇ. ಬಿಜೆಪಿಯಲ್ಲಿ ಇಂಗ್ಲಿಷ್‌ ನಲ್ಲಿ ಸಮರ್ಥವಾಗಿ ಮಾತನಾಡುವವರು ಯಾರು ಇಲ್ಲವೇ. ಮೋದಿ ಅವರ ಕಾಲದಲ್ಲಿ ಭಾರತಕ್ಕೆ ವಿಶ್ವದ ಬೆಂಬಲದ ಕಡಿಮೆ ಆಗಿದೆ ಎಂದು ಹೇಳಿದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ