People's lives are more important than debt recovery, let there be humanity in recovery: Minister Lad

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ: ಸಚಿವ ಲಾಡ್

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ: ಸಚಿವ ಲಾಡ್

ಧಾರವಾಡ, ಜುಲೈ14: ರೈತರು ಸೇರಿದಂತೆ ಅನೇಕ ಕುಶಲಕರ್ಮಿಗಳು, ಉದ್ಯೋಗಿಗಳು ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಪಡೆಯುತ್ತಾರೆ. ಕೇಲವು ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಸಾಧ್ಯವಾಗದೆ ಸುಸ್ತಿದಾರ ಆಗುತ್ತಾರೆ. ಬ್ಯಾಂಕ್‍ಗಳು ರೈತರಿಂದ ಅಥವಾ ಸುಸ್ತಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೊರಬೇಕು. ಮರುಪಾವತಿಗೆ ಕಾಲಾವಕಾಶ ನೀಡಬೇಕು. ಸಾಲ ವಸೂಲಿಗಿಂತ ಜನರ ಜೀವ ಮುಖ್ಯವಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ಬ್ಯಾಂಕರ್ಸ್‍ಗಳೊಂದಿಗೆ ರೈತ ಆತ್ಮಹತ್ಯೆ ಪ್ರಕರಣಗಳು ಮತ್ತು ಕೃಷಿ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಭೆ ಜರುಗಿಸಿ, ಮಾತನಾಡಿದರು.

ಸಾಲ ವಸೂಲಾತಿಯಲ್ಲಿ ಮಾನವೀಯತೆ ಮೀರಿ ಯಾರೂ ವರ್ತಿಸಬಾರದು. ಜನರ ಜೀವ ಮುಖ್ಯ. ರೈತ ಆತ್ಮಹತ್ಯೆಗಳು ಯಾವ ಕಾರಣಕ್ಕಾಗಿ ಮತ್ತು ಯಾವ ಸಂದರ್ಭಗಳಿಂದ ಘಟಿಸುತ್ತಿವೆ ಎಂಬುವುದರ ಕುರಿತು ಅಧ್ಯಯನ ಮಾಡಲು ಕೃಷಿ ವಿಶ್ವವಿದ್ಯಾಲಯ, ಕಂದಾಯ, ಕೃಷಿ ಇಲಾಖೆ, ಬ್ಯಾಂಕ್ ಅಧಿಕಾರಿ ಹಾಗೂ ಸಾಮಾಜಿಕ ತಜ್ಞರ ಒಳಗೊಂಡ ಸಮಿತಿಯನ್ನು ರಚಿಸಲು ಕ್ರಮವಹಿಸಲಾಗುತ್ತದೆ. ಕೃಷಿ ತಜ್ಞರನ್ನು ಸಹ ಭಾಗಿ ಮಾಡಿಕೊಂಡು ವೈಜ್ಞಾನಿಕವಾಗಿ ಅಧ್ಯಯನವನ್ನು ಮಾಡಲಾಗುತ್ತದೆ. ಬ್ಯಾಂಕ್ ಅಧಿಕಾರಿಗಳು ರೈತರ ಮನೆಗಳಿಗೆ ಹೋಗಿ ಸಾಲ ಮರುಪಾವತಿಗಾಗಿ ತಿಳಿವಳಿಕೆ ನೀಡಬೇಕು. ಅವರ ಆರ್ಥಿಕ ಸ್ಥಿತಿ, ಉದ್ಯೋಗ ಬಗ್ಗೆ ತಿಳಿದು ಕಾಲಾವಕಾಶ ನೀಡಬೇಕೆಂದು ಅವರು ಹೇಳಿದರು.

ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಗಳ ಮನೆಗಳಿಗೆ ಇಂದು ಭೇಟಿ ನೀಡಿದ್ದೇವೆ. ರೈತರ ಆತ್ಮಹತ್ಯೆಯ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು. ಧಾರವಾಡ ಜಿಲ್ಲೆಯಲ್ಲಿ ಸುಮಾರು ಐವತ್ತು ಸಾವಿರ ಅಕೌಂಟ್‍ಗಳು ಎನ್‍ಪಿ (ಕಾರ್ಯನಿರ್ವಹಿಸದ ಖಾತೆ) ಆಗಿವೆ. ಈ ಎಲ್ಲ ಎನ್.ಪಿ ಬ್ಯಾಂಕ್ ಖಾತೆಗಳನ್ನು ಎ,ಬಿ,ಸಿ ವರ್ಗ ಮಾಡಿಕೊಂಡು ಅತಿಯಾಗಿ ಯಾರು ತೊಂದರೆಯಲ್ಲಿ ಇದ್ದಾರೆ, ಅವರನ್ನು ಪತ್ತೆ ಹಚ್ಚಬೇಕು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಅವರಿಗೆ ಯೋಜನೆಗಳ ಸೌಲಭ್ಯಗಳು ಸಿಗುತ್ತಿವೆಯೋ, ಇಲ್ಲವೋ, ಎಂದು ತಿಳಿದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅವರು ಹೇಳಿದರು.

ರೈತರ ಏಳಿಗೆಯೇ ನಮ್ಮ ಸರ್ಕಾರದ ಗುರಿ ಆಗಿದೆ. ರೈತರಿಗೆ ಸಕಾಲದಲ್ಲಿ ಬೀಜ, ಗೊಬ್ಬರ ಮತ್ತು ಕೃಷಿ ಉಪಕರಣಗಳು ಲಭ್ಯವಾಗುತ್ತಿರುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಕೃಷಿ ಇಲಾಖೆ ಖಾತ್ರಿಪಡಿಸಬೇಕು. ಬೆಳೆ ವಿಮೆ ಯೋಜನೆಯ ಲಾಭ ಪ್ರತಿಯೊಬ್ಬ ಅರ್ಹ ರೈತನಿಗೂ ತಲುಪಬೇಕು ಎಂದು ಹೇಳಿದರು.

ಸರ್ಕಾರದಿಂದ ಸಿಗುವ ಪಿಂಚಣಿ, ಪರಿಹಾರ, ಸಹಾಯಧನ ಮುಟ್ಟುವಂತಿಲ್ಲ: ರಾಷ್ಟ್ರೀಕೃತ ಬ್ಯಾಂಕ್, ಯಾವುದೇ ಬ್ಯಾಂಕ್ ಇದ್ದರೂ ಸಹ ಎನ್.ಪಿ ಆಗಿರುವ ಅಕೌಂಟ್‍ಗಳಿಗೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಸಹಾಯಧನ, ಪಿಂಚಣಿ, ಬೆಳೆ ಪರಿಹಾರ, ವಿಮೆ ಪರಿಹಾರ, ಇತರ ಸಾಲ ಸೌಲಭ್ಯಗಳಿಂದ ಯಾವುದೇ ರೀತಿ ಹಣ ಅವರ ಉಳಿತಾಯ ಖಾತೆಗೆ ಬಂದರೂ ಯಾವುದೇ ಕಾರಣಕ್ಕೂ ಬ್ಯಾಂಕ್ ನವರು ಅದನ್ನು ಸಾಲಕ್ಕೆ ಮರು ಹೊಂದಾಣಿಕೆ ಅಥವಾ ಸಾಲದ ಖಾತೆಗೆ ಜಮೆ ಪಡೆಯುವ ಅವಕಾಶವಿಲ್ಲ. ಮತ್ತು ಈ ರೀತಿ ಕ್ರಮ ವಹಿಸಲು ಬ್ಯಾಂಕ್‍ನವರಿಗೆ ಯಾವುದೇ ರೀತಿ ಕಾನೂನಿನಲ್ಲಿ ಅವಕಾಶವಿಲ್ಲ. ಇದರ ಬಗ್ಗೆ ಮಾನ್ಯ ಮುಖ್ಯಮಂತ್ರಿ ಅವರ ಜೊತೆ ಚರ್ಚೆಯನ್ನು ಸಹ ಮಾಡುತ್ತೇನೆ. ಕ್ರಾಪ್ ಲೋನ್ ಆಗಿರಲಿ, ಬೇರೆ ಯಾವುದೇ ರೀತಿಯ ಲೋನ್ ತೆಗೆದುಕೊಂಡರು ಸರ್ಕಾರದ ಸಬ್ಸಿಡಿಗೆ ಅದನ್ನು ಅಟ್ಯಾಚ್ ಮಾಡಬಾರದು ಎಂದು ಸಚಿವ ಸಂತೋಷ ಲಾಡ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆಕೊಟ್ಟರು.

ಸಭೆಯಲ್ಲಿ ಕುಂದಗೋಳ ಶಾಸಕ ಎಂ. ಆರ್. ಪಾಟೀಲ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಗೋಪಾಲ ಎಂ. ಬ್ಯಾಕೋಡ್, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕೆ.ಸಿ.ಭದ್ರಣ್ಣವರ, ಲೀಡ್ ಬ್ಯಾಂಕ್ ಮ್ಯಾನೇಜರ್ ಬಸವರಾಜ ಗಡಾದ, ಎಲ್ಲ ತಾಲೂಕುಗಳ ತಹಶೀಲ್ದಾರರು, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲೆಯ ಎಲ್ಲ ಬ್ಯಾಂಕ್‍ಗಳ ಪ್ರತಿನಿಧಿಗಳು ಮತ್ತು ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಕಂದಾಯ, ಭೂದಾಖಲೆಗಳ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ