Sapling in Police Station Premises: Amritamitra 2.0ft Maintenance of Parks

ಪೊಲೀಸ್ ಠಾಣೆ ಆವರಣದಲ್ಲಿ ಸಸಿ ನೆಡುವ ಕಾರ್ಯ: ಅಮೃತಮಿತ್ರ 2.0 ಅಡಿ ಉದ್ಯಾನವನಗಳ ನಿರ್ವಹಣೆ

ಪೊಲೀಸ್ ಠಾಣೆ ಆವರಣದಲ್ಲಿ ಸಸಿ ನೆಡುವ ಕಾರ್ಯ: ಅಮೃತಮಿತ್ರ 2.0 ಅಡಿ ಉದ್ಯಾನವನಗಳ ನಿರ್ವಹಣೆ

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಉದ್ಯಾನವನಗಳಲ್ಲಿ ಅಮೃತ 2.0 ಯೋಜನೆ ಅಡಿ ಅಮೃತಮಿತ್ರ ಹೆಸರಿನಲ್ಲಿ ಎಂಟು ಸಾರ್ವಜನಿಕ ಉದ್ಯಾನವನಗಳ ನಿರ್ವಹಣೆಗೆ ಟೆಂಡರ್ ಕರೆಯಲಾಗುವುದು ಎಂದು ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ಇಲಾಖೆ, ಹಸಿರು ತೋರಣ ಗೆಳೆಯರ ಬಳಗದ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಯೋಜನೆಯಡಿ ತಲಾ ಹತ್ತು ಲಕ್ಷ ರೂ.ಗಳಂತೆ ಉದ್ಯಾನವನಗಳ ನಿರ್ವಹಣೆ ಕೈಗೊಳ್ಳಲಾಗುವುದು. ಎರಡು ಸಾಂಸ್ಥಿಕ ಮತ್ತು ಸಮುದಾಯ ಕುಡಿವ ನೀರಿನ ಘಟಕಗಳ ತಪಾಸಣೆಗೆ ಆಯ್ಕೆ ಮಾಡಲಾಗುವುದು. ಮುಂಬರುವ ದಿನಗಳಲ್ಲಿ ಜನನಿಬೀಡ ಉದ್ಯಾನವನಗಳಲ್ಲಿ ಮಕ್ಕಳಿಗೆ ಆಟಿಕೆ ಸಾಮಾನು ಅಳವಡಿಸಲು ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಪಿ.ಎಸ್.ಐ ಸಂಜಯ ತಿಪರೆಡ್ಡಿ ಮಾತನಾಡಿ, ಪೊಲೀಸ್ ಠಾಣೆಯ ಆವರಣದಲ್ಲಿ ಒಣಗಿದ್ದ ಗಿಡಗಳನ್ನು ತೆರವುಗೊಳಿಸಿ ಹೊಸದಾಗಿ ಸಸಿಗಳನ್ನು ನೆಡುವ ಕಾರ್ಯ ಮಾಡಲಾಗಿದೆ. ಠಾಣೆಯ ಆವರಣದಲ್ಲಿ ಹಸಿರೀಕರಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.

ಹಸಿರು ತೋರಣ ಗೆಳೆಯರ ಬಳಗದ ಬಿ.ಎಚ್.ಬಳಬಟ್ಟಿ, ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಬಳಗದ ಸಂಚಾಲಕ ಮಹಾಬಳೇಶ ಗಡೇದ, ಸದಸ್ಯೆ ಸಂಗಮ್ಮ ದೇವರಳ್ಳಿ,ರವಿ ಗೂಳಿ ಮಾತನಾಡಿದರು.

ಪುರಸಭೆ ಸದಸ್ಯೆ ಸಹನಾ ಬಡಿಗೇರ, ಭಾರತಿ ಪಾಟೀಲ, ಬಳಗದ ಸದಸ್ಯರಾದ ಬಿ.ಎಸ್.ಮೇಟಿ, ನಾಗಭೂಷಣ ನಾವದಗಿ, ವಿಲಾಸ ದೇಶಪಾಂಡೆ, ಅಶೋಕ ರೇವಡಿ, ಮಲ್ಲಿಕಾರ್ಜುನ ಬಾಗೇವಾಡಿ, ಸುರೇಶ ಕಲಾಲ, ಅಮರೇಶ ಗೂಳಿ ಮೊದಲಾದವರು ಇದ್ದರು.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ