Silver Festival Guruvandana program at Yadwada

ಯಾದವಾಡದಲ್ಲಿ ಬೆಳ್ಳಿ ಹಬ್ಬದ ಗುರುವಂದನಾ ಕಾರ್ಯಕ್ರಮ

ಯಾದವಾಡದಲ್ಲಿ ಬೆಳ್ಳಿ ಹಬ್ಬದ ಗುರುವಂದನಾ ಕಾರ್ಯಕ್ರಮ

ವಿದ್ಯೆ ಅರಿಸಿಬಂದವರಿಗೆ ಬದುಕು ಕೊಡುವ ಗುಣ ಯಾದವಾಡದ ಮಣ್ಣಿಗಿದೆ: ಪಂಚಗಾರ

ಮುಧೋಳ: ವಿದ್ಯೆ ಅರಿಸಿಕೊಂಡು ಬಂದವರಿಗೆ ಅಪ್ಪಿಕೊಂಡು ಬದುಕು ಕಟ್ಟಿಕೊಳ್ಳಲು ಅಪ್ಪಿಕೊಂಡ ಮಣ್ಣಿನ ಗುಣ ಯಾದವಾಡದ ಮಣ್ಣಿನಲ್ಲಿದೆ ಇದೊಂದು ಒಂದು ಶಕ್ತಿ ಕೇಂದ್ರ, ಕವಿಪುಂಗವರು ಸ್ವಾತಂತ್ರ್ಯ ಹೋರಾಟಗಾರರಿಗೆ ಜನ್ಮ ನೀಡಿದ ಭೂಮಿ ಇಲ್ಲಿ ವಿದ್ಯೆ ಅರಿಸಿ ಬಂದ ಅದೆಷ್ಟೋ ವಿದ್ಯಾರ್ಥಿಗಳು ಇಂದು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದು ಸ್ಮರಣೀಯವಾದುದು ಎಂದು ನಿವೃತ್ತ ಪ್ರಾಚಾರ್ಯ ಎನ್.ಎಸ್. ಪಂಚಗಾರ ಹೇಳಿದರು.

ಸಮೀಪದ ಯಾದವಾಡ ಪಟ್ಟಣದ ಚನ್ನಬಸಪ್ಪ ಹುಬ್ಬಳ್ಳಿ ಮುತ್ಯಾ ಸುಮಂಗಲಾ ಕಲ್ಯಾಣ ಮಂಟಪದಲ್ಲಿ ಜಿ.ಎನ್.ಎಸ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ೨೦೦೦ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಲ್ಲಿ ಕಲಿತ ಎಲ್ಲರೂ ಪುಣ್ಯವಂತರು ಹೆತ್ತ ಮಕ್ಕಳು ಕೂಡಾ ಗೌರವಿಸದ ಈ ಕಾಲ ಘಟ್ಟದಲ್ಲಿ ಹಳೆ ವಿದ್ಯಾರ್ಥಿಗಳು ನಮ್ಮನ್ನು ನಡೆಸಿಕೊಂಡ ರೀತಿ ಅದ್ಭುತ, ಅದನ್ನು ಮಾತಿನಲ್ಲಿ ವರ್ಣಿಸಲ ಸಾಧ್ಯ ಎಂದು ಭಾವುಕರಾದರು.

ಪತ್ರಕರ್ತ ವೆಂಕಟೇಶ ಗುಡೆಪ್ಪನವರ, ಶಿಕ್ಷಕಿ ಮಹಾದೇವಿ ವಕ್ಕುಂದ, ಅಣ್ಣಪ್ಪ ಗಾಣಗೇರ, ಶ್ರೀಶೈಲ್ ಶಂಕರಶೆಟ್ಟಿ, ಮಂಜುನಾಥ ಗಾಣಗೇರ, ಮಾತನಾಡಿ ಬದುಕಿನಲ್ಲಿ ಯಾವುದೇ ಸಾಧನೆಯ ಹಿಂದೆ ಗುರುಗಳ ಮಾರ್ಗದರ್ಶನ ಜೀವನುದುದ್ದಕ್ಕೂ ಅಗತ್ಯ, ಅದರಲ್ಲಿಯೂ ಬದುಕಿನ ಆರಂಭದ ಮೆಟ್ಟಿಲುಗಳನ್ನು ಕಲಿಸುವ ಪ್ರೌಢಶಾಲಾ ಶಿಕ್ಷಕರನ್ನಂತೂ ಮೆರೆಯಲು ಅಸಾಧ್ಯ ಎಂದು ಅಭಿಪ್ರಾಯಪಟ್ಟರು.

ರಾಜ್ಯ ಸಂಪನ್ಮೂಲ ಶಿಕ್ಷಕ ಎಸ್.ಎಸ್. ಬಳೂರಗಿ ಮಾತನಾಡಿ ಜಿ.ಎನ್.ಎಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳೇ ಬದುಕು, ಸಮಾಜದಲ್ಲಿ ಛಲ, ಹಿಂಜರಿಕೆಯಿಲ್ಲದೇ ಮುನ್ನಡೆಯಲು ಸಾಧ್ಯ ಎಂದರು.

ಹುಬ್ಬಳ್ಲಿ ಮಠದ ಶ್ರೀ ಚನ್ನಬಸಪ್ಪ ಮಹಾಸ್ವಾಮಿಗಳು ಸಾನಿಧ್ಯವಹಿಸಿ ಮಾತನಾಡಿ ಎಸ್.ಸಿ.ಗಾಣಗಿ, ಎಂ.ಗೋಪಾಲ, ಪಿ.ಬಿ.ದೇಶಪಾಂಡೆ, ಪಿ.ಎಸ್.ಕಲ್ಯಾಣಿ, ಜಿ.ಎಚ್.ಕಾಂಬಳೆ, ಹನಮಂತ ಮಾದರ ಶಿಕ್ಷಕರು ಮಾತನಾಡುವುದುರ ಜೊತಗೆ ಹಾಡು ಹಾಡಿ ರಂಜಿಸಿದರು. ಎನ್.ಡಿ.ಅತ್ತಾರ ಎಸ್.ಪಿ.ಗಾಣಗಿ, ಎಸ್.ಎಸ್.ಹೊಸಮನಿ, ಆಯ್,ಎಚ್.ಪಠಾಣ, ಪತ್ರಕರ್ತ ವೆಂಕಟೇಶ ಗುಡೆಪ್ಪನವರ, ಶಿಕ್ಷಕಿ ಮಹಾದೇವಿ ವಕ್ಕುಂದ ಶ್ರೀಶೈಲ್ ಶಂಕರಶೆಟ್ಟಿ, ಮಂಜುನಾಥ ಗಾಣಗೇರ, ಲಲಿತಾ ಶೆಗುಣಸಿ, ಸುಮನ್ ಚನ್ನಾಳ, ಡಾ.ಇಂದಿರಾ ಪಾಲಬಾವಿ ಮಾತನಾಡಿದರು.

ಬಿ.ಜಿ.ಕಾಗವಾಡ, ವಿಠ್ಠಲ ಮೇತ್ರಿ, ಯಶವಂತ ತೊಂಡಕಟ್ಟಿ, ವಿಲಾಸ ಬಂಡಿ, ಹಣಮಂತ ಕೆಂಜೋಳ ಸೇರಿದಂತೆ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗೆ ಸನ್ಮಾನಿಸಿಲಾಯಿತು. ಎಲ್ಲ ವೃತ್ತಿಯಲ್ಲಿರುವ ಹಾಗೂ ನಿವೃತ್ತ ಶಿಕ್ಷಕ ಹಾಗೂ ಶಿಕ್ಷಕೇತರ ಶಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಹಳೆ ವಿದ್ಯಾರ್ಥಿಗಳಿಂದ ಮನರಂಜನೆ ಕಾರ್ಯಕ್ರಮ, ಆಟಗಳು ಜರುಗಿದವು, ಶಿಕ್ಷಕರನ್ನು ಮೆರವಣಿಗೆಯ ಮೂಲಕ ಕಾರ್ಯಕ್ರಮದ ಹಾಲ್‌ಗೆ ಪುಷ್ಪಾರ್ಚನೆಯ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು ತದನಂತರದಲ್ಲಿ ಎಲ್ಲರಿಗೂ ಸಾಮೂಹಿಕ ಬೋಜನ ಕೂಟ ಏರ್ಪಡಿಸಲಾಯಿತು. ಅನ್ವರ ಜಿಡ್ಡಿಮನಿ, ಸ್ವಾಗತಿಸಿ, ಮಹಾದೇವಿ ವಕ್ಕುಂದ ಪ್ರಶಾಂತ ಚಿಕ್ಕೇಗೌಡರ ನಿರೂಪಿಸಿ ವೀಣಾ ತಿರ್ಲಾಪುರ ವಂದಿಸಿದರು. ಎಲ್‌ಇಡಿ ಪರದೆಯ ಮೇಲೆ ಬಿತ್ತರಿಸಿದ ಇಂದಿನ ಹಾಗೂ ಹಳೆಯ ನೆನಪುಗಳು ಭಾವುಕರಾಗುವಂತೆ ಮಾಡಿದವು. ಬಸವರಾಜ ಕೌಜಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

“ನಮ್ಮ ಪ್ರೌಢ ಶಾಲಾ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿರುವುದು ನಮ್ಮ ಶಿಕ್ಷಕ ವೃತ್ತಿಗೆ ಹೆಮ್ಮೆ ತಂದಿದೆ. ಶಿಷ್ಯರು ಉನ್ನತ ಮಟ್ಟಕ್ಕೆ ಬೆಳೆದಾಗ ಗುರುವಿಗೆ ಸಂತಸ, ಸಾರ್ಥಕ ಭಾವ ಬರುತ್ತದೆ”.
ಎಸ್.ಎಸ್.ಬಳೂರಗಿ ಗಣಿತ ಶಿಕ್ಷಕರು

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ