Silver Festival Guruvandana program at Yadwada

ಯಾದವಾಡದಲ್ಲಿ ಬೆಳ್ಳಿ ಹಬ್ಬದ ಗುರುವಂದನಾ ಕಾರ್ಯಕ್ರಮ

ಯಾದವಾಡದಲ್ಲಿ ಬೆಳ್ಳಿ ಹಬ್ಬದ ಗುರುವಂದನಾ ಕಾರ್ಯಕ್ರಮ

ವಿದ್ಯೆ ಅರಿಸಿಬಂದವರಿಗೆ ಬದುಕು ಕೊಡುವ ಗುಣ ಯಾದವಾಡದ ಮಣ್ಣಿಗಿದೆ: ಪಂಚಗಾರ

ಮುಧೋಳ: ವಿದ್ಯೆ ಅರಿಸಿಕೊಂಡು ಬಂದವರಿಗೆ ಅಪ್ಪಿಕೊಂಡು ಬದುಕು ಕಟ್ಟಿಕೊಳ್ಳಲು ಅಪ್ಪಿಕೊಂಡ ಮಣ್ಣಿನ ಗುಣ ಯಾದವಾಡದ ಮಣ್ಣಿನಲ್ಲಿದೆ ಇದೊಂದು ಒಂದು ಶಕ್ತಿ ಕೇಂದ್ರ, ಕವಿಪುಂಗವರು ಸ್ವಾತಂತ್ರ್ಯ ಹೋರಾಟಗಾರರಿಗೆ ಜನ್ಮ ನೀಡಿದ ಭೂಮಿ ಇಲ್ಲಿ ವಿದ್ಯೆ ಅರಿಸಿ ಬಂದ ಅದೆಷ್ಟೋ ವಿದ್ಯಾರ್ಥಿಗಳು ಇಂದು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದು ಸ್ಮರಣೀಯವಾದುದು ಎಂದು ನಿವೃತ್ತ ಪ್ರಾಚಾರ್ಯ ಎನ್.ಎಸ್. ಪಂಚಗಾರ ಹೇಳಿದರು.

ಸಮೀಪದ ಯಾದವಾಡ ಪಟ್ಟಣದ ಚನ್ನಬಸಪ್ಪ ಹುಬ್ಬಳ್ಳಿ ಮುತ್ಯಾ ಸುಮಂಗಲಾ ಕಲ್ಯಾಣ ಮಂಟಪದಲ್ಲಿ ಜಿ.ಎನ್.ಎಸ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ೨೦೦೦ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಲ್ಲಿ ಕಲಿತ ಎಲ್ಲರೂ ಪುಣ್ಯವಂತರು ಹೆತ್ತ ಮಕ್ಕಳು ಕೂಡಾ ಗೌರವಿಸದ ಈ ಕಾಲ ಘಟ್ಟದಲ್ಲಿ ಹಳೆ ವಿದ್ಯಾರ್ಥಿಗಳು ನಮ್ಮನ್ನು ನಡೆಸಿಕೊಂಡ ರೀತಿ ಅದ್ಭುತ, ಅದನ್ನು ಮಾತಿನಲ್ಲಿ ವರ್ಣಿಸಲ ಸಾಧ್ಯ ಎಂದು ಭಾವುಕರಾದರು.

ಪತ್ರಕರ್ತ ವೆಂಕಟೇಶ ಗುಡೆಪ್ಪನವರ, ಶಿಕ್ಷಕಿ ಮಹಾದೇವಿ ವಕ್ಕುಂದ, ಅಣ್ಣಪ್ಪ ಗಾಣಗೇರ, ಶ್ರೀಶೈಲ್ ಶಂಕರಶೆಟ್ಟಿ, ಮಂಜುನಾಥ ಗಾಣಗೇರ, ಮಾತನಾಡಿ ಬದುಕಿನಲ್ಲಿ ಯಾವುದೇ ಸಾಧನೆಯ ಹಿಂದೆ ಗುರುಗಳ ಮಾರ್ಗದರ್ಶನ ಜೀವನುದುದ್ದಕ್ಕೂ ಅಗತ್ಯ, ಅದರಲ್ಲಿಯೂ ಬದುಕಿನ ಆರಂಭದ ಮೆಟ್ಟಿಲುಗಳನ್ನು ಕಲಿಸುವ ಪ್ರೌಢಶಾಲಾ ಶಿಕ್ಷಕರನ್ನಂತೂ ಮೆರೆಯಲು ಅಸಾಧ್ಯ ಎಂದು ಅಭಿಪ್ರಾಯಪಟ್ಟರು.

ರಾಜ್ಯ ಸಂಪನ್ಮೂಲ ಶಿಕ್ಷಕ ಎಸ್.ಎಸ್. ಬಳೂರಗಿ ಮಾತನಾಡಿ ಜಿ.ಎನ್.ಎಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳೇ ಬದುಕು, ಸಮಾಜದಲ್ಲಿ ಛಲ, ಹಿಂಜರಿಕೆಯಿಲ್ಲದೇ ಮುನ್ನಡೆಯಲು ಸಾಧ್ಯ ಎಂದರು.

ಹುಬ್ಬಳ್ಲಿ ಮಠದ ಶ್ರೀ ಚನ್ನಬಸಪ್ಪ ಮಹಾಸ್ವಾಮಿಗಳು ಸಾನಿಧ್ಯವಹಿಸಿ ಮಾತನಾಡಿ ಎಸ್.ಸಿ.ಗಾಣಗಿ, ಎಂ.ಗೋಪಾಲ, ಪಿ.ಬಿ.ದೇಶಪಾಂಡೆ, ಪಿ.ಎಸ್.ಕಲ್ಯಾಣಿ, ಜಿ.ಎಚ್.ಕಾಂಬಳೆ, ಹನಮಂತ ಮಾದರ ಶಿಕ್ಷಕರು ಮಾತನಾಡುವುದುರ ಜೊತಗೆ ಹಾಡು ಹಾಡಿ ರಂಜಿಸಿದರು. ಎನ್.ಡಿ.ಅತ್ತಾರ ಎಸ್.ಪಿ.ಗಾಣಗಿ, ಎಸ್.ಎಸ್.ಹೊಸಮನಿ, ಆಯ್,ಎಚ್.ಪಠಾಣ, ಪತ್ರಕರ್ತ ವೆಂಕಟೇಶ ಗುಡೆಪ್ಪನವರ, ಶಿಕ್ಷಕಿ ಮಹಾದೇವಿ ವಕ್ಕುಂದ ಶ್ರೀಶೈಲ್ ಶಂಕರಶೆಟ್ಟಿ, ಮಂಜುನಾಥ ಗಾಣಗೇರ, ಲಲಿತಾ ಶೆಗುಣಸಿ, ಸುಮನ್ ಚನ್ನಾಳ, ಡಾ.ಇಂದಿರಾ ಪಾಲಬಾವಿ ಮಾತನಾಡಿದರು.

ಬಿ.ಜಿ.ಕಾಗವಾಡ, ವಿಠ್ಠಲ ಮೇತ್ರಿ, ಯಶವಂತ ತೊಂಡಕಟ್ಟಿ, ವಿಲಾಸ ಬಂಡಿ, ಹಣಮಂತ ಕೆಂಜೋಳ ಸೇರಿದಂತೆ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗೆ ಸನ್ಮಾನಿಸಿಲಾಯಿತು. ಎಲ್ಲ ವೃತ್ತಿಯಲ್ಲಿರುವ ಹಾಗೂ ನಿವೃತ್ತ ಶಿಕ್ಷಕ ಹಾಗೂ ಶಿಕ್ಷಕೇತರ ಶಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಹಳೆ ವಿದ್ಯಾರ್ಥಿಗಳಿಂದ ಮನರಂಜನೆ ಕಾರ್ಯಕ್ರಮ, ಆಟಗಳು ಜರುಗಿದವು, ಶಿಕ್ಷಕರನ್ನು ಮೆರವಣಿಗೆಯ ಮೂಲಕ ಕಾರ್ಯಕ್ರಮದ ಹಾಲ್‌ಗೆ ಪುಷ್ಪಾರ್ಚನೆಯ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು ತದನಂತರದಲ್ಲಿ ಎಲ್ಲರಿಗೂ ಸಾಮೂಹಿಕ ಬೋಜನ ಕೂಟ ಏರ್ಪಡಿಸಲಾಯಿತು. ಅನ್ವರ ಜಿಡ್ಡಿಮನಿ, ಸ್ವಾಗತಿಸಿ, ಮಹಾದೇವಿ ವಕ್ಕುಂದ ಪ್ರಶಾಂತ ಚಿಕ್ಕೇಗೌಡರ ನಿರೂಪಿಸಿ ವೀಣಾ ತಿರ್ಲಾಪುರ ವಂದಿಸಿದರು. ಎಲ್‌ಇಡಿ ಪರದೆಯ ಮೇಲೆ ಬಿತ್ತರಿಸಿದ ಇಂದಿನ ಹಾಗೂ ಹಳೆಯ ನೆನಪುಗಳು ಭಾವುಕರಾಗುವಂತೆ ಮಾಡಿದವು. ಬಸವರಾಜ ಕೌಜಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

“ನಮ್ಮ ಪ್ರೌಢ ಶಾಲಾ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿರುವುದು ನಮ್ಮ ಶಿಕ್ಷಕ ವೃತ್ತಿಗೆ ಹೆಮ್ಮೆ ತಂದಿದೆ. ಶಿಷ್ಯರು ಉನ್ನತ ಮಟ್ಟಕ್ಕೆ ಬೆಳೆದಾಗ ಗುರುವಿಗೆ ಸಂತಸ, ಸಾರ್ಥಕ ಭಾವ ಬರುತ್ತದೆ”.
ಎಸ್.ಎಸ್.ಬಳೂರಗಿ ಗಣಿತ ಶಿಕ್ಷಕರು

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ