Dharna in front of TAPAM office: TAPAM EO issued notice to municipal chief

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ತಾಪಂ ವಸತಿ ಗೃಹಗಳನ್ನು ನೆಲಸಮ ಮಾಡಿದ ಘಟನೆ ಇದೀಗ ಹೊಸ ವಿವಾದವನ್ನು ಹುಟ್ಟು ಹಾಕಿದ್ದು ದಲಿತಪರ ಸಂಘಟನೆಯವರು ಗುರುವಾರ ತಾಪಂ ಕಚೇರಿ ಎದುರಿಗೆ ಧರಣಿ ನಡೆಸಿದ್ದು ವಸತಿಗೃಹಗಳನ್ನು ನೆಲಸಮ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತಾಪಂ ಕಚೇರಿ ಆವರಣದಲ್ಲಿ ನಡೆದ ಧರಣಿ ಸ್ಥಳದಲ್ಲಿ ಹೋರಾಟಗಾರರನ್ನು ಭೇಟಿ ಮಾಡಿದ ತಾಪಂ ಇಒ ನಿಂಗಪ್ಪ ಮಸಳಿ, ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡುವಂತೆ ಪುರಸಭೆ ಮುಖ್ಯಾಧಿಕಾರಿ ಹೆಸರಿನಲ್ಲಿ ಬರೆದಿರುವ ನೋಟಿಸ್‌ನ್ನು ತಾಪಂ ಇಒ ಹೋರಾಟಗಾರರಿಗೆ ಹಸ್ತಾಂತರ ಮಾಡುವ ಮೂಲಕ ತಾತ್ಕಾಲಿಕವಾಗಿ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸುವ ಪ್ರಯತ್ನ ಮಾಡಿದ್ದಾರೆ.

ನೋಟಿಸಿನಲ್ಲೇದೆ ?: ತಾಪಂ ಇಒ ನಿಂಗಪ್ಪ ಮಸಳಿ ಜಾರಿ ಮಾಡಿರುವ ನೋಟಿಸಿನಲ್ಲಿ, ದಿನಾಂಕ 30-5-2025ರಿಂದ 30-6-2025ರವರೆಗೆ ಜರುಗಿದ ಮುದ್ದೇಬಿಹಾಳ ಪಟ್ಟಣದ ಗ್ರಾಮದೇವತೆ ಜಾತ್ರೆ ನಿಮಿತ್ಯ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ನಮ್ಮ ಕಾರ್ಯಾಲಯಕ್ಕೆ ಸಂಬಂಧಿಸಿದ ತಾಲ್ಲೂಕ ಪಂಚಾಯತ ವಸತಿ ಗೃಹ ಹಾಗೂ ಸಾಮರ್ಥ್ಯ ಸೌಧ ಕಟ್ಟಡವನ್ನು ಕೆಡವಿರುತ್ತೀರಿ. ಅಪಾರ ಪ್ರಮಾಣದ ಬೆಲೆ ಬಾಳುವ ಆಸ್ತಿಯನ್ನು ಹಾನಿ ಮಾಡಿದ್ದೀರಿ. ಸದರಿ ಸ್ಥಳವನ್ನು ಸಮುಚಿತ ಮಾರ್ಗದಲ್ಲಿ ಅನುಮತಿ ಪಡೆಯದೇ ಗ್ರಾಮದೇವತಾ ಜಾತ್ರಾ ಕಾರ್ಯಕ್ರಮಕ್ಕೆ ಅನುಕೂಲವಾಗುವಂತೆ ಬಳಸಿಕೊಂಡಿದ್ದಲ್ಲದೇ ವಸತಿ ಗೃಹ ಹಾಗೂ ಸಾಮರ್ಥ್ಯ ಸೌಧ ಕಟ್ಟಡವನ್ನು ಕೆಡವಿ ಅಪಾರ ಪ್ರಮಾಣದ ಸರಕಾರಿ ಆಸ್ತಿಯನ್ನು ಹಾನಿ ಮಾಡಿದ್ದೀರಿ.ನಮ್ಮ ಗಮನಕ್ಕೆ ತರದೇ ಮನರಂಜನಾ ಕಾರ್ಯಕ್ರಮಕ್ಕಾಗಿ ಸದರ ಸ್ಥಳವನ್ನು ವಿರೂಪಗೊಳಿಸುವ ಕೆಡವಿ ಹಾಕುವ ಪೂರ್ವದಲ್ಲಿ ಅಥವಾ ಕಾರ್ಯಕ್ರಮ ಆಯೋಜಿಸುವ ಸಂದರ್ಭದಲ್ಲಿ ನಮ್ಮ ಕಾರ್ಯಾಲಯಕ್ಕೆ ಸಂಪರ್ಕಿಸಿಲ್ಲವೇಕೆ? ನಮ್ಮ ಗಮನಕ್ಕೆ ತಂದಿಲ್ಲವೇಕೆ? ಪತ್ರವ್ಯವಹಾರ ಮಾಡಿಲ್ಲವೇಕೆ? ಎಂಬುದರ ಬಗ್ಗೆ ಏಳು ದಿನಗಳಲ್ಲಿ ಸ್ಪಷ್ಟ ಲಿಖಿತ ವಿವರಣೆ ನೀಡಲು ತಿಳಿಸಿದ್ದು ಇಲ್ಲವಾದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿಭಟನಾಕಾರರಾದ ಹರೀಶ ನಾಟೀಕಾರ, ಪ್ರಕಾಶ ಚಲವಾದಿ, ಆನಂದ ಮುದೂರ, ಬಸವರಾಜ ಚಲವಾದಿ, ಸಿದ್ದು ಚಲವಾದಿ, ರೇವಣಸಿದ್ದಪ್ಪ ನಾಯಕ ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ