Dharna in front of TAPAM office: TAPAM EO issued notice to municipal chief

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ತಾಪಂ ವಸತಿ ಗೃಹಗಳನ್ನು ನೆಲಸಮ ಮಾಡಿದ ಘಟನೆ ಇದೀಗ ಹೊಸ ವಿವಾದವನ್ನು ಹುಟ್ಟು ಹಾಕಿದ್ದು ದಲಿತಪರ ಸಂಘಟನೆಯವರು ಗುರುವಾರ ತಾಪಂ ಕಚೇರಿ ಎದುರಿಗೆ ಧರಣಿ ನಡೆಸಿದ್ದು ವಸತಿಗೃಹಗಳನ್ನು ನೆಲಸಮ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತಾಪಂ ಕಚೇರಿ ಆವರಣದಲ್ಲಿ ನಡೆದ ಧರಣಿ ಸ್ಥಳದಲ್ಲಿ ಹೋರಾಟಗಾರರನ್ನು ಭೇಟಿ ಮಾಡಿದ ತಾಪಂ ಇಒ ನಿಂಗಪ್ಪ ಮಸಳಿ, ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡುವಂತೆ ಪುರಸಭೆ ಮುಖ್ಯಾಧಿಕಾರಿ ಹೆಸರಿನಲ್ಲಿ ಬರೆದಿರುವ ನೋಟಿಸ್‌ನ್ನು ತಾಪಂ ಇಒ ಹೋರಾಟಗಾರರಿಗೆ ಹಸ್ತಾಂತರ ಮಾಡುವ ಮೂಲಕ ತಾತ್ಕಾಲಿಕವಾಗಿ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸುವ ಪ್ರಯತ್ನ ಮಾಡಿದ್ದಾರೆ.

ನೋಟಿಸಿನಲ್ಲೇದೆ ?: ತಾಪಂ ಇಒ ನಿಂಗಪ್ಪ ಮಸಳಿ ಜಾರಿ ಮಾಡಿರುವ ನೋಟಿಸಿನಲ್ಲಿ, ದಿನಾಂಕ 30-5-2025ರಿಂದ 30-6-2025ರವರೆಗೆ ಜರುಗಿದ ಮುದ್ದೇಬಿಹಾಳ ಪಟ್ಟಣದ ಗ್ರಾಮದೇವತೆ ಜಾತ್ರೆ ನಿಮಿತ್ಯ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ನಮ್ಮ ಕಾರ್ಯಾಲಯಕ್ಕೆ ಸಂಬಂಧಿಸಿದ ತಾಲ್ಲೂಕ ಪಂಚಾಯತ ವಸತಿ ಗೃಹ ಹಾಗೂ ಸಾಮರ್ಥ್ಯ ಸೌಧ ಕಟ್ಟಡವನ್ನು ಕೆಡವಿರುತ್ತೀರಿ. ಅಪಾರ ಪ್ರಮಾಣದ ಬೆಲೆ ಬಾಳುವ ಆಸ್ತಿಯನ್ನು ಹಾನಿ ಮಾಡಿದ್ದೀರಿ. ಸದರಿ ಸ್ಥಳವನ್ನು ಸಮುಚಿತ ಮಾರ್ಗದಲ್ಲಿ ಅನುಮತಿ ಪಡೆಯದೇ ಗ್ರಾಮದೇವತಾ ಜಾತ್ರಾ ಕಾರ್ಯಕ್ರಮಕ್ಕೆ ಅನುಕೂಲವಾಗುವಂತೆ ಬಳಸಿಕೊಂಡಿದ್ದಲ್ಲದೇ ವಸತಿ ಗೃಹ ಹಾಗೂ ಸಾಮರ್ಥ್ಯ ಸೌಧ ಕಟ್ಟಡವನ್ನು ಕೆಡವಿ ಅಪಾರ ಪ್ರಮಾಣದ ಸರಕಾರಿ ಆಸ್ತಿಯನ್ನು ಹಾನಿ ಮಾಡಿದ್ದೀರಿ.ನಮ್ಮ ಗಮನಕ್ಕೆ ತರದೇ ಮನರಂಜನಾ ಕಾರ್ಯಕ್ರಮಕ್ಕಾಗಿ ಸದರ ಸ್ಥಳವನ್ನು ವಿರೂಪಗೊಳಿಸುವ ಕೆಡವಿ ಹಾಕುವ ಪೂರ್ವದಲ್ಲಿ ಅಥವಾ ಕಾರ್ಯಕ್ರಮ ಆಯೋಜಿಸುವ ಸಂದರ್ಭದಲ್ಲಿ ನಮ್ಮ ಕಾರ್ಯಾಲಯಕ್ಕೆ ಸಂಪರ್ಕಿಸಿಲ್ಲವೇಕೆ? ನಮ್ಮ ಗಮನಕ್ಕೆ ತಂದಿಲ್ಲವೇಕೆ? ಪತ್ರವ್ಯವಹಾರ ಮಾಡಿಲ್ಲವೇಕೆ? ಎಂಬುದರ ಬಗ್ಗೆ ಏಳು ದಿನಗಳಲ್ಲಿ ಸ್ಪಷ್ಟ ಲಿಖಿತ ವಿವರಣೆ ನೀಡಲು ತಿಳಿಸಿದ್ದು ಇಲ್ಲವಾದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿಭಟನಾಕಾರರಾದ ಹರೀಶ ನಾಟೀಕಾರ, ಪ್ರಕಾಶ ಚಲವಾದಿ, ಆನಂದ ಮುದೂರ, ಬಸವರಾಜ ಚಲವಾದಿ, ಸಿದ್ದು ಚಲವಾದಿ, ರೇವಣಸಿದ್ದಪ್ಪ ನಾಯಕ ಇದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ