Ju. On the 30th, the first chariot arrived at Kuntoji from Koppal

ಜು. 30 ರಂದು ಕೊಪ್ಪಳದಿಂದ ಕುಂಟೋಜಿಗೆ ಪ್ರಥಮ ರಥ ಆಗಮನ

ಜು. 30 ರಂದು ಕೊಪ್ಪಳದಿಂದ ಕುಂಟೋಜಿಗೆ ಪ್ರಥಮ ರಥ ಆಗಮನ

ಮುದ್ದೇಬಿಹಾಳ : ತಾಲೂಕಿನ ಕುಂಟೋಜಿ (ನಂದಿ) ಬಸವೇಶ್ವರ ಹಾಗೂ ಸಂಗಮೇಶ್ವರ ದೇವಸ್ಥಾನದ ಜಾತ್ರೆ ಶ್ರಾವಣ ಮಾಸದ ಕೊನೆಯ ಸೋಮವಾರದಿಂದ ಐದು ದಿನಗಳವರೆಗೆ ಜರುಗಲಿದ್ದು ದೇವಸ್ಥಾನದ ಪ್ರಥಮ ರಥೋತ್ಸವ ಈ ಬಾರಿ ಜಾತ್ರೆಯಲ್ಲಿ ಜರುಗಲಿದೆ ಎಂದು ಕುಂಟೋಜಿ ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹೇಳಿದರು.

ತಾಲ್ಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಥಮ ರಥವನ್ನು ಕೊಪ್ಪಳದಿಂದ ತರುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕುಂಟೋಜಿ ಗ್ರಾಮದ ಮತ್ತು ಸುತ್ತಮುತ್ತಲಿನ ಊರುಗಳು, ನಗರ ಮತ್ತು ಬೇರೆ ಬೇರೆ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಬಸವಣ್ಣನ ಭಕ್ತರು ದೇಣಿಗೆ ನೀಡಿ ಕೊಪ್ಪಳದ ಜಕಣಾಚರ‍್ಯ ಮತ್ತು ಅಮೋಘವರ್ಷ ನೃಪತುಂಗ ಪ್ರಶಸ್ತಿ ವಿಜೇತ ರಥಶಿಲ್ಪಿ ಮಲ್ಲಪ್ಪ ಬಡಿಗೇರ ಇವರು ತಮ್ಮ ಎಂ. ಜಿ. ರಥಶಿಲ್ಪಿ ಕಲಾ ಕೇಂದ್ರದಲ್ಲಿ ಸಂಪೂರ್ಣ ಉಚಿತವಾಗಿ ನಿರ್ಮಿಸಿರುವ ಸಾಗವಾನಿ ಮರದ ರಥವನ್ನು ಜು.30 ರಂದು ಮುದ್ದೇಬಿಹಾಳ ನಗರದ ಪಿಲೇಕೆಮ್ಮ ದೇವಿ ದೇವಸ್ಥಾನದಿಂದ ಕುಂಟೋಜಿ ಗ್ರಾಮದವರೆಗೆ ಭವ್ಯ ಮೆರವಣಿಗೆಯ ಮುಖಾಂತರ ಸ್ವಾಗತಿಸಲಾಗುವುದು ಎಂದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಜು.27 ರಂದು ರಥವನ್ನು ತರಲು ಕುಂಟೋಜಿಯಿಂದ ಭಕ್ತರು ಮತ್ತು ದೇವಸ್ಥಾನ ಕಮೀಟಿಯವರು ಟ್ರ್ಯಾಕ್ಟರ್ ಮುಖಾಂತರ ಕೊಪ್ಪಳಕ್ಕೆ ತೆರಳಿಲಿದ್ದಾರೆ. ಜುಲೈ 29 ರಂದು ಬೆಳಿಗ್ಗೆ ಕೊಪ್ಪಳದಿಂದ ರಥವನ್ನು ತೆಗೆದುಕೊಂಡು ಹೊರಟು ಅಂದೇ ಸಂಜೆ ಮುದ್ದೇಬಿಹಾಳ ನಗರಕ್ಕೆ ಆಗಮಿಸಿ, 30ರಂದು ಪಿಲೇಕೆಮ್ಮ ದೇವಾಸ್ಥಾನದಿಂದ ರಥವನ್ನು ಮತ್ತು ಅದರ ಜೊತೆಗೆ 21 ಕಿಲೋ ತೂಕದ ಬಸವಣ್ಣ ಮತ್ತು ಸಂಗಮೇಶ್ವರನ ಬೆಳ್ಳಿಯ ಮುಖವಾಡಗಳನ್ನು, ನಾಗರ ಹೆಡೆಯನ್ನು, ತೇರು ಎಳೆಯುವ ಹಗ್ಗ, ತೇರಿಗೆ ರುದ್ರಾಕ್ಷಿ ಮಾಲೆ, ಕಳಸ, ಇವುಗಳನ್ನು ಮೆರವಣಿಗೆ ಮೂಲಕ ಕುಂಟೋಜಿಗೆ ತರಲಾಗುವುದು ಎಂದರು.

ದೇವಸ್ಥಾನ ಕಮೀಟಿಯ ಉಪಾಧ್ಯಕ್ಷ ಆನಂದ ಗಸ್ತಿಗಾರ, ಕಾರ್ಯದರ್ಶಿ ಮಲ್ಲಿಕಾರ್ಜುನ ನಾಟೀಕಾರ, ಸೇರಿದಂತೆ ಕಮೀಟಿ ಸದಸ್ಯರು ಇದ್ದರು.

Latest News

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ಬಳಬಟ್ಟಿ ಗ್ರಾಮದೇವತೆ ಜಾತ್ರೆ :                                            ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಬಳಬಟ್ಟಿ ಗ್ರಾಮದೇವತೆ ಜಾತ್ರೆ : ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ, ಮಾರುತೇಶ್ವರ ಹಾಗೂಗ್ರಾಮ ದೇವತೆ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕುಸ್ತಿ ಪಂದ್ಯಾವಳಿಯಲ್ಲಿ (ಪುಣೆ ತಾಲೀಮು) ರಿಯಾಜ ಮುಳಕೋಟೆ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಪಂದ್ಯಾವಳಿಯಲ್ಲಿ ಒಟ್ಟು 30 ಜೋಡಿ ಕುಸ್ತಿ ಪಟುಗಳು ರಾಜ್ಯದ ವಿವಿಧ ಕಡೆಯಿಂದ ಪಾಲ್ಗೊಂಡಿದ್ದರು. ಬಳಬಟ್ಟಿ ಗ್ರಾಮದ ಮಾಜಿ ಕುಸ್ತಿಪಟು ಕರಿಯಪ್ಪ ಆಸಂಗಿ ಹಾಗೂ ಯಮನಪ್ಪ ಮಾಳಗೊಂಡ ಇವರ ನೇತೃತ್ವದಲ್ಲಿ ಭರ್ಜರಿಯಾಗಿ ಕುಸ್ತಿ ಪಂದ್ಯಗಳು ನಡೆದವು. ಒನ್ ನಂಬರ ಕುಸ್ತಿ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಇರುವ ಸಂಘದ ಕಾರ್ಯಾಲಯದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಸಂಘದ ತಾಲೂಕ ಘಟಕದ ನೂತನ ಅಧ್ಯಕ್ಷರಾಗಿ ಬಸರಕೋಡದ ಶ್ರೀ ಪವಾಡ ಬಸವೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು,ಹಿರಿಯ ಸಾಹಿತಿ ಅಶೋಕ ಪಿ.ಮಣಿ ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಬಾಪುಗೌಡ ಪಿ.ಪಾಟೀಲ್,ಉಪಾಧ್ಯಕ್ಷರಾಗಿ ಸದಾಶಿವ ಮಾಗಿ,ಪ್ರಧಾನ ಕಾರ್ಯದರ್ಶಿಗಳಾಗಿ ಎಸ.ಎ.ಬೇವಿನಗಿಡದ,ಖಜಾಂಚಿಯಾಗಿ ಬಿ.ಎಚ್.ಬಳಬಟ್ಟಿ,ಜಂಟಿ ಕಾರ್ಯದರ್ಶಿ ಡಿ.ಬಿ.ಓಲೇಕಾರ,ಯು.ಕೆ.ಬಾಗವಾನ,ಸಂಘಟನಾ ಕಾರ್ಯದರ್ಶಿಗಳಾಗಿ