Develop an action plan for effective project implementation progress: Minister Lad

ಯೋಜನಾ ಅನುಷ್ಠಾನ ಪ್ರಗತಿ ಪರಿಣಾಮಕಾರಿಗೆ ಕ್ರಿಯಾಯೋಜನೆ ರೂಪಿಸಿ: ಸಚಿವ ಲಾಡ್

ಯೋಜನಾ ಅನುಷ್ಠಾನ ಪ್ರಗತಿ ಪರಿಣಾಮಕಾರಿಗೆ ಕ್ರಿಯಾಯೋಜನೆ ರೂಪಿಸಿ: ಸಚಿವ ಲಾಡ್

ಧಾರವಾಡ, ಜುಲೈ.21: ಈ ವರ್ಷದ ಮೊದಲನೇ ಕೆಡಿಪಿ ಸಭೆಯಲ್ಲಿ ಇಲಾಖೆಗಳ ಆರ್ಥಿಕ ಮತ್ತು ಭೌತಿಕ ಪ್ರಗತಿಯಲ್ಲಿ ಸಾಧನೆ ಆಗಿರುವುದು ತೃಪ್ತಿ ತಂದಿದೆ. ಇಲಾಖಾವಾರು ಅನುದಾನ ಬಿಡುಗಡೆ, ಬಳಕೆ ಮತ್ತು ಭೌತಿಕ ಗುರಿ ಸಾಧನೆಯನ್ನು ಪರಿಶೀಲಿಸಿ, ಯೋಜನಾ ಅನುಷ್ಠಾನ ಪ್ರಗತಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಕ್ರಿಯಾಯೋಜನೆಯನ್ನು ಈಗಿನಿಂದಲೇ ಸಿದ್ದಪಡಿಸಿಕೊಳ್ಳಿ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್.ಲಾಡ್ ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ 2025-26 ನೇ ಸಾಲಿನ ಜುಲೈ 2025 ರ ಅಂತ್ಯಕ್ಕೆ ಸಂಬಂಧಿಸಿದಂತೆ ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಜಿಲ್ಲಾ ಪಂಚಾಯತ ವಲಯದಲ್ಲಿ ನಿಗದಿತ ಗುರಿಗೆ ಶೇ. 77.30 ರಷ್ಟು ಭೌತಿಕ ಮತ್ತು ಶೇ. 35.47 ರಷ್ಟು ಆರ್ಥಿಕ ಪ್ರಗತಿ ಆಗಿದೆ. ರಾಜ್ಯ ವಲಯದಲ್ಲಿ ನಿಗದಿತ ಗುರಿಗೆ ಶೇ. 96.41 ರಷ್ಟು ಭೌತಿಕ ಹಾಗೂ ಶೇ. 88.09 ರಷ್ಟು ಆರ್ಥಿಕ ಪ್ರಗತಿ ಆಗಿದೆ. ಅದೇ ರೀತಿ ಕೇಂದ್ರ ಪ್ರಾಯೋಜಕತ್ವದ ಯೋಜನೆಗಳ ನಿಗದಿತ ಗುರಿಗೆ ಶೇ. 92.39 ರಷ್ಟು ಭೌತಿಕ ಹಾಗೂ ಶೇ. 94.16 ರಷ್ಟು ಆರ್ಥಿಕ ಪ್ರಗತಿ ಆಗಿದೆ. ಒಟ್ಟಾರೆ ಶೇ. 91.84 ರಷ್ಟು ಭೌತಿಕ ಹಾಗೂ ಶೇ. 86.21 ರಷ್ಟು ಆರ್ಥಿಕ ಪ್ರಗತಿಯಾಗಿದೆ ಎಂದು ವಿವರಿಸಿದರು.

ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ಮಾಡಿ, ಸರ್ಕಾರದ ಯೋಜನೆಗಳನ್ನು ರೈತರಿಗೆ ಅನುಕೂಲವಾಗುವಂತೆ ಅನುಷ್ಠಾನಗೊಳಿಸಬೇಕು. ರೈತರ ಕೃಷಿ ಸಮಸ್ಯೆಗಳನ್ನು, ಉತ್ತಮ ತಳಿಯ ಬೀಜಗಳನ್ನು ಬಳಸಿಕೊಳ್ಳಲು ಅನುವಾಗುವಂತೆ ಕೃಷಿ ವಿಶ್ವವಿದ್ಯಾಲಯದ ಸಹಕಾರದೊಂದಿಗೆ ಅಲ್ಲಿನ ಕೃಷಿ ತಜ್ಞರ, ವಿಜ್ಞಾನಿಗಳ ಅನುಭವವನ್ನು ಬಳಸಿಕೊಳ್ಳಬೇಕೆಂದು ತಿಳಿಸಿದರು.

ಕೃಷಿ ಇಲಾಖೆಯಿಂದ ರೈತರಿಗೆ ಆಧುನಿಕ ತಂತ್ರಜ್ಞಾನಗಳನ್ನು ಮತ್ತು ಕೃಷಿ ಉಪಕರಣಗಳನ್ನು ಬಳಸಲು ಪ್ರೋತ್ಸಾಹಿಸಲಾಗುತ್ತಿದೆ. ಬೂಮ್ ಸ್ಪಿಂಕ್ಲರ್‌ ಅನ್ನು ಪ್ರಾಯೋಗಿಕವಾಗಿ ಪರೀಕ್ಷೆ ಮಾಡಿದ್ದಾರೆ. ಅದು ಕಡಿಮೆ ಸಮಯದಲ್ಲಿ ಅತಿ ಬೇಗನೆ ಸ್ಪ್ಲಿಂಕಿಂಗ್ ಕೆಲಸ ಮಾಡುತ್ತದೆ. ಹಾಗೂ ಡ್ರೋನ್ ಮುಖಾಂತರ ಸ್ಪ್ರೇ ಮಾಡಬಹುದು. ಈ ಮಷಿನ್ 15 ನಿಮಿಷದಲ್ಲಿ ಒಂದು ಎಕ್ಕರೆ ಸ್ಪ್ರೇ ಮಾಡುತ್ತದೆ. ಆದ್ದರಿಂದ ಇವುಗಳನ್ನು ವಿಡಿಯೋ ಚಿತ್ರೀಕರಣ ಮಾಡಿ, ಎಲ್ಲ ಗ್ರಾಮಗಳ ಜನರಿಗೆ ತಿಳುವಳಿಕೆ ಮತ್ತು ಮಾಹಿತಿ ನೀಡಲು ಕೃಷಿ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ನರೇಗಾ ಯೋಜನೆ ಉತ್ತಮವಾಗಿ ಅನುಷ್ಠಾನಗೊಳಿಸಬೇಕು. ಕೃಷಿ, ಪಂಚಾಯತ ರಾಜ್, ತೋಟಗಾರಿಕೆ, ಅರಣ್ಯ ಮತ್ತು ರೇಷ್ಮೆ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಎಲ್ಲರೂ ಸಮನ್ವಯದಿಂದ ಕ್ರಿಯಾಯೋಜನೆ ರೂಪಿಸಿ, ಜನರಿಗೆ ಉದ್ಯೋಗವಕಾಶಗಳನ್ನು ಹೆಚ್ಚಿಸಬೇಕು. ಹಾಗೂ ನರೇಗಾದಲ್ಲಿ ನೋಂದಣಿ ಆಗಿರುವ ಜನರು ಕೆಲಸಕ್ಕೆ ಬಾರದೇ ಇದ್ದರೆ, ಅಂತಹವರು ನರೇಗಾ ಕೆಲಸದಲ್ಲಿ ಭಾಗವಹಿಸಲು ಉತ್ತೇಜನ ನೀಡಬೇಕು. ನರೇಗಾ ಯೋಜನೆಯ ಕಾಮಗಾರಿಗಳ ನಿಗದಿತ ಭೌತಿಕ ಗುರಿಯನ್ನು ನಿಯಮಾನುಸಾರ ಕಾಲಮಿತಿಯಲ್ಲಿ ಸಾಧಸಬೇಕೆಂದು ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಕಲಘಟಗಿ, ಧಾರವಾಡ, ಹುಬ್ಬಳ್ಳಿ ಭಾಗದ ರೈತರು ಪರ್ಯಾಯ ಬೆಳೆಯಾಗಿ ಅಡಿಕೆ ತೋಟ ಹಾಗೂ ರೇಷ್ಮೆ ಸಾಕಾಣಿಕೆ ಮಾಡುತ್ತಿದ್ದಾರೆ. ಪ್ರಸಕ್ತ ಸಾಲಿಗೆ ರೇಷ್ಮೆ ಬೆಳೆ ಹಾಗೂ ರೇಷ್ಮೆ ಹುಳು ಸಾಕಾಣಿಕೆ ಕೃಷಿಯನ್ನು ವಿಸ್ತರಣೆ ಮಾಡಲು ಗ್ರಾಮವಾರು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಇಲಾಖೆಯ ಅಧಿಕಾರಿಗಳಗೆ ಸಚಿವರು ನಿರ್ದೇಶಿಸಿದರು

ಅತಿಯಾದ ಮಳೆಯಿಂದಾಗಿ ಗ್ರಾಮಗಳ ಮುಖ್ಯ ರಸ್ತೆಗಳು ಹಾಗೂ ಸಂಪರ್ಕ ಸೇತುವೆ, ರಸ್ತೆಗಳು ಹಾಳಾಗಿವೆ. ಸಾರ್ವಜನಿಕರ ಅನುಕೂಲಕ್ಕಾಗಿ ತಕ್ಷಣ ಅವುಗಳನ್ನು ದುರಸ್ತಿ ಮಾಡಿ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಸಚಿವರು ಸೂಚಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಮಾಡಿ, ಶೂನ್ಯ ಫಲಿತಾಂಶ ಮತ್ತು ಶೂನ್ಯ ವಿದ್ಯಾರ್ಥಿ ದಾಖಲಾತಿ ಹೊಂದಿರುವ ಶಾಲೆಗಳಿಗೆ ನೋಟಿಸ್ ನೀಡಿ, ನಿಯಮಾನುಸಾರ ಬಂದ್ ಮಾಡಬೇಕು. ಅಲ್ಲಿನ ಸಿಬ್ಬಂದಿಗಳನ್ನು ಸಿಬ್ಬಂದಿ ಅಗತ್ಯವಿರುವ ಸರ್ಕಾರಿ ಶಾಲೆಗಳಿಗೆ ತಕ್ಷಣ ವರ್ಗಾಯಿಸಬೇಕು. ಇದರಿಂದ ಸರ್ಕಾರದ ಅನುದಾನದ ಅಪವ್ಯಯ ತಪ್ಪುತ್ತದೆ. ಕಳೆದ ಎರಡು ವರ್ಷಗಳಿಂದ ಈ ಕುರಿತು ಗಂಭೀರ ಕ್ರಮ ವಹಿಸಿದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಧೋರಣೆ ವಿರುದ್ಧ ಕೋಪಗೊಂಡ ಸಚಿವರು ತಕ್ಷಣ ಕ್ರಮವಹಿಸಿ, ವರದಿ ಸಲ್ಲಿಸುವಂತೆ ಸೂಚಿಸಿದರು.

ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಜಿಲ್ಲಾ ಕೆಡಿಪಿ ಸಭೆಯ ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು