I will give 10 thousand jobs before going to soil: Nadahalli

ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ

ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ

ಮುದ್ದೇಬಿಹಾಳ : ನಾನು ಮತಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರಿಂದಲೇ ಜನ ಬೆಂಬಲಿಸಲಿಲ್ಲವೋ ಏನೋ ಆದರೆ ರೈತರ ಮಕ್ಕಳು ಕಷ್ಟ ಅನುಭವಿಸಬಾರದು ಎಂಬ ಉದ್ದೇಶದಿಂದ ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಭಾವುಕರಾಗಿ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿರುವ ತಮ್ಮ ಫಾರ್ಮಹೌಸ್‌ನಲ್ಲಿ ಮಂಗಳವಾರ ಅಭಿಮಾನಿಗಳು, ಕಾರ್ಯಕರ್ತರು ಹಮ್ಮಿಕೊಂಡಿದ್ದ ತಮ್ಮ 56ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾವೆಲ್ಲ ಜಾತಿ ವಿಷಯ ಬಂದಾಗ ಒಗ್ಗಟ್ಟು ಆಗುತ್ತೇವೆ. ಆದರೆ ಜನರ ಬದುಕು ಕಟ್ಟುವ ನಾಯಕತ್ವವನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಎಡವಿದ್ದೇವೆ. ಆಧುನಿಕ ಬದುಕು ಕಟ್ಟಿಕೊಡುವ, ಸೌಲಭ್ಯಗಳನ್ನು ಜನರಿಗೆ ತಲುಪಿಸುವ ನಾಯಕತ್ವ ಬೇಕು. ತೊಗರಿ ಬೆಳೆ ನಷ್ಟವಾದರೂ ಈ ಸರ್ಕಾರದಿಂದ ಒಂದು ರುಪಾಯಿ ಪರಿಹಾರ ಬಂದಿಲ್ಲ. ಬರುವುದೂ ಇಲ್ಲ. ಈ ಸರ್ಕಾರ,ಈಗ ನೀವು ಆಯ್ಕೆಮಾಡಿಕೊಂಡ ಜನಪ್ರತಿನಿಧಿ ಹಾಗೆ ಇದ್ದಾರೆ. ರೈತರು ಬೆಳೆ ಇನ್ಸೂರೆನ್ಸ್ ಬಂದಿಲ್ಲ ಎಂದು ಕೇಳುತ್ತಿದ್ದಾರೆ. ಅವರಿಗೆಲ್ಲ ಈಗ ನೀವು ಬಾಯಿ ಬಡಿದುಕೊಳ್ಳಿ ಎಂದೇ ಹೇಳಿದ್ದೇನೆ ಎಂದು ತಿಳಿಸಿದರು.

ನೀರಾವರಿ ಯೋಜನೆಗಳು ಅಲ್ಲಿಗೆ ನಿಂತಿವೆ. ನಾಗರಬೆಟ್ಟ ಏತ ನೀರಾವರಿ ಯೋಜನೆ ಏನಾಗಿದೆ. ಬೂದಿಹಾಳ ಪೀರಾಪೂರ ಯೋಜನೆಗಾಗಿ ರೈತರು ಹೋರಾಟ ನಡೆಸುವಾಗ ನಾನು ಹೋರಾಟಕ್ಕೆ ಬೆಂಬಲಿಸುವುದಾಗಿ ಹೇಳುತ್ತಲೇ ಉಸ್ತುವಾರಿ ಸಚಿವರು ಓಡಿ ಬಂದು ಭರವಸೆ ಕೊಟ್ಟು ಹೋದರು. ನೀರಾವರಿಗಾಗಿ ಹೋರಾಟ ಅನಿವಾರ್ಯ ಎಂಬಂತಾಗಿದೆ ಎಂದರು.

ಮತಕ್ಷೇತ್ರದಲ್ಲಿ ಕುಡಿವ ನೀರಿನ ಯೋಜನೆ ಸಲುವಾಗಿ ಸಿಸಿ ರಸ್ತೆ ಹಾಳುಮಾಡುತ್ತಿದ್ದಾರೆ. ಆಯ್ಕೆಯಾದವರು ನಿಮ್ಮೂರಿಗೆ ಬಂದು ಧನ್ಯವಾದ ಕೂಡಾ ಹೇಳಲಿಲ್ಲ. ಮೊದಲು ಅವರಿಗೆ ಹಳ್ಳಿಗಳ ಜನಕ್ಕೆ ನೀರು ಕೊಡಲು ತಿಳಿಸಿ. ನನ್ನ ದುಡಿಮೆಯಲ್ಲಿ ಅರ್ಧ ರಾಜಕಾರಣಕ್ಕೆ, ದಾಸೋಹ ಕ್ಕೆ ವ್ಯಯ ಮಾಡಿದ್ದೇನೆ. ನನಗೆ ಮಂತ್ರಿಯಾಗಿ ಮೆರೆಯಬೇಕು ಎಂಬ ಭಾವನೆ ಇಲ್ಲ. ರೈತರ ಮಕ್ಕಳು ತಮ್ಮ ತಂದೆಯವರು ಅನುಭವಿಸಿದ ಕಷ್ಟ ಅನುಭವಿಸಬಾರದು ಎಂಬ ಕಾರಣದಿಂದ ರಾಜಕಾರಣಕ್ಕೆ ಬಂದಿದ್ದೇನೆ. ಇದು ಕೇವಲ ಭಾಷಣಕ್ಕಾಗಿ ಮಾತಲ್ಲ ಸಂಕಲ್ಪದಿಂದ ಮಾತನಾಡುತ್ತಿದ್ದೇನೆ ಎಂದು ಹೇಳಿದರು. ಬಿಜೆಪಿ ಮುಖಂಡರಾದ ರಮೇಶ ಬಿದನೂರ, ರವಿಕಾಂತ ಬಗಲಿ, ಪ್ರಭುಗೌಡ ಬಿರಾದಾರ, ಪ್ರಭು ಕಡಿ, ಬಿ.ಪಿ.ಕುಲಕರ್ಣಿ, ಮಲಕೇಂದ್ರಗೌಡ ಪಾಟೀಲ, ಗಂಗಾಧರ ನಾಡಗೌಡ, ರವೀಂದ್ರ ಲೋಣಿ, ಎಂ.ಬಿ.ಅಂಗಡಿ, ಎಂ.ಎಸ್.ಪಾಟೀಲ, ಸುಮಂಗಲಾ ಕೋಟಿ, ಕೆ.ವಾಯ್.ಬಿರಾದಾರ, ಮಹದೇವಯ್ಯ ಶಾಸ್ತ್ರೀಗಳು, ಪುರಸಭೆ ಸದಸ್ಯೆ ಸಹನಾ ಬಡಿಗೇರ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

ನಡಹಳ್ಳಿಯವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು, ಕಾರ್ಯಕರ್ತರು ರಕ್ತದಾನ ಶಿಬಿರ,ಆರೋಗ್ಯತಪಾಸಣಾ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿದರು.

ಸಚಿವ ಎಂ.ಬಿ.ಪಾಟೀಲ್‌ರಿಗೆ ಟಾಂಗ್: ನೀರಾವರಿ ಭಗೀರಥ ಎಂದು ಕರೆಯಿಸಿಕೊಳ್ಳುವ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರ ಮತಕ್ಷೇತ್ರದಲ್ಲಿ ರಸ್ತೆಗಳ ಸ್ಥಿತಿ ಹೇಳುವಂತಿಲ್ಲ. ಬಬಲೇಶ್ವರ, ಸಿಂದಗಿ, ನಾಗಠಾಣ ಕ್ಷೇತ್ರದ ಒಳಗಡೆ ಹೋಗಿ ಹೊರಬರಲು ಆಗುವುದಿಲ್ಲ ಎಂದು ಮಾಜಿ ಶಾಸಕ ನಡಹಳ್ಳಿ ಟೀಕಿಸಿದರು.

ಕನಸು : ಮುದ್ದೇಬಿಹಾಳ ಮತಕ್ಷೇತ್ರದಂತಹ ಸಂಪನ್ಮೂಲ ಹೊಂದಿರುವ ತಾಲ್ಲೂಕು ರಾಜ್ಯದಲ್ಲಿ ಬೇರಾವುದು ಇಲ್ಲ. ಇಲ್ಲಿ 48 ಕೆರೆ ಇರುವ ಎರಡು ಡ್ಯಾಮ್‌ಗಳನ್ನು ಹೊಂದಿಕೊಂಡಿರುವ ತಾಲ್ಲೂಕು ಮುದ್ದೇಬಿಹಾಳ ಆಗಿದೆ. ಕನಸು ಹೊತ್ತಿರುವ ನಾಯಕರನ್ನು ನೀವು ಆಯ್ಕೆ ಮಾಡಿಕೊಳ್ಳಿ. ಹತ್ತು ಕೋಟಿ ವಚ್ಚದಲ್ಲಿ ಹೈನುಗಾರಿಕೆ ತರಬೇತಿ ಕೇಂದ್ರ ಮಾಡುತ್ತೇನೆ. ನಮ್ಮ ರೈತರು ಭೂಮಿಗೆ ಏನು ಬೇಕು ಎಂಬುದನ್ನು ತಿಳಿದುಕೊಂಡು ಒಕ್ಕಲುತನ ಮಾಡಬೇಕು.ರೈತನ ಬದುಕು ಹಸನು ಮಾಡಬೇಕು ಎಂಬುದು ನನ್ನ ಕನಸು ಎಂದು ಮಾಜಿ ಶಾಸಕ ನಡಹಳ್ಳಿ ಹೇಳಿದರು.

ನಾಡಗೌಡ, ಭೈರೇಗೌಡರ ವಿರುದ್ಧವೂ ವಾಗ್ದಾಳಿ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಅಭಿವೃದ್ಧಿಪಡಿಸಲು ಆಲಮಟ್ಟಿ ಜಲಾಶಯ ಎತ್ತರಿಸಿದರೆ ರೈತರಿಗೆ ಭೂಸ್ವಾಧೀನಗೊಂಡ ಜಮೀನುಗಳಿಗೆ ಪರಿಹಾರ ಕೊಡುವುದು ಹೆಚ್ಚುವರಿ ನಷ್ಟವೆಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಎಲ್ಲೋ ಕೂತುಕೊಂಡು ಭಾಷಣ ಮಾಡುತ್ತಾನೆ. ಭೈರೇಗೌಡ ಅವನೇನು ಅವರ ಅಪ್ಪನ ಮನೆಯಿಂದ ರೈತರಿಗೆ ಪರಿಹಾರ ಕೊಡುತ್ತಾನಾ?. ನಮ್ಮ ರೈತರ ಜಮೀನುಗಳು ಕಳೆದುಕೊಂಡಿರುತ್ತಾರೆ.ಅವರಿಗೆ ಪರಿಹಾರ ಸಿಗಬೇಕು ಎಂದು ನಡಹಳ್ಳಿ ಭೈರೇಗೌಡ ವಿರುದ್ದ ವಾಗ್ದಾಳಿ ನಡೆಸಿದರು.

ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಈಗ ಆಯ್ಕೆಯಾದವರು ಒಂದೇ ಒಂದು ಪಂಚಾಯಿತಿಗೆ ಹನ್ನೆರಡು ತಾಸು ಕರೆಂಟ್ ಕೊಡಲು ಆಗುತ್ತದೆಯೇ? ಎಂಬುದನ್ನು ತೋರಿಸಿಕೊಡಲಿ ಎಂದು ಸವಾಲು ಹಾಕಿದ ಮಾಜಿ ಶಾಸಕ ನಡಹಳ್ಳಿ, ನಾನು ಇಡೀ ತಾಲ್ಲೂಕಿಗೆ 12 ತಾಸು ವಿದ್ಯುತ್ ಕೊಡುತ್ತೇನೆ.

ನನ್ನ ಅವಧಿಯಲ್ಲಿ ಹತ್ತು ವಿದ್ಯುತ್ ಸ್ಟೇಷನ್ ತಂದಿದ್ದೇವೆ. ಆಗ ಏಳು ತಾಸು ಕೊಡುತ್ತಿದ್ದರು. ಈಗಲೂ ಅಷ್ಟೇ ವಿದ್ಯುತ್ ಕೊಡುತ್ತಿದ್ದಾರೆ. ಇವರಿಂದ ಎರಡೂವರೆ ವರ್ಷದಲ್ಲಿ ಹೆಚ್ಚಿಗೆ ವಿದ್ಯುತ್ ಕೊಡುವುದಕ್ಕೆ ಆಗಿಲ್ಲ ಎಂದು ಶಾಸಕ ನಾಡಗೌಡರ ಹೆಸರು ಹೇಳದೇ ಟೀಕಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ