I will give 10 thousand jobs before going to soil: Nadahalli

ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ

ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ

ಮುದ್ದೇಬಿಹಾಳ : ನಾನು ಮತಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರಿಂದಲೇ ಜನ ಬೆಂಬಲಿಸಲಿಲ್ಲವೋ ಏನೋ ಆದರೆ ರೈತರ ಮಕ್ಕಳು ಕಷ್ಟ ಅನುಭವಿಸಬಾರದು ಎಂಬ ಉದ್ದೇಶದಿಂದ ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಭಾವುಕರಾಗಿ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿರುವ ತಮ್ಮ ಫಾರ್ಮಹೌಸ್‌ನಲ್ಲಿ ಮಂಗಳವಾರ ಅಭಿಮಾನಿಗಳು, ಕಾರ್ಯಕರ್ತರು ಹಮ್ಮಿಕೊಂಡಿದ್ದ ತಮ್ಮ 56ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾವೆಲ್ಲ ಜಾತಿ ವಿಷಯ ಬಂದಾಗ ಒಗ್ಗಟ್ಟು ಆಗುತ್ತೇವೆ. ಆದರೆ ಜನರ ಬದುಕು ಕಟ್ಟುವ ನಾಯಕತ್ವವನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಎಡವಿದ್ದೇವೆ. ಆಧುನಿಕ ಬದುಕು ಕಟ್ಟಿಕೊಡುವ, ಸೌಲಭ್ಯಗಳನ್ನು ಜನರಿಗೆ ತಲುಪಿಸುವ ನಾಯಕತ್ವ ಬೇಕು. ತೊಗರಿ ಬೆಳೆ ನಷ್ಟವಾದರೂ ಈ ಸರ್ಕಾರದಿಂದ ಒಂದು ರುಪಾಯಿ ಪರಿಹಾರ ಬಂದಿಲ್ಲ. ಬರುವುದೂ ಇಲ್ಲ. ಈ ಸರ್ಕಾರ,ಈಗ ನೀವು ಆಯ್ಕೆಮಾಡಿಕೊಂಡ ಜನಪ್ರತಿನಿಧಿ ಹಾಗೆ ಇದ್ದಾರೆ. ರೈತರು ಬೆಳೆ ಇನ್ಸೂರೆನ್ಸ್ ಬಂದಿಲ್ಲ ಎಂದು ಕೇಳುತ್ತಿದ್ದಾರೆ. ಅವರಿಗೆಲ್ಲ ಈಗ ನೀವು ಬಾಯಿ ಬಡಿದುಕೊಳ್ಳಿ ಎಂದೇ ಹೇಳಿದ್ದೇನೆ ಎಂದು ತಿಳಿಸಿದರು.

ನೀರಾವರಿ ಯೋಜನೆಗಳು ಅಲ್ಲಿಗೆ ನಿಂತಿವೆ. ನಾಗರಬೆಟ್ಟ ಏತ ನೀರಾವರಿ ಯೋಜನೆ ಏನಾಗಿದೆ. ಬೂದಿಹಾಳ ಪೀರಾಪೂರ ಯೋಜನೆಗಾಗಿ ರೈತರು ಹೋರಾಟ ನಡೆಸುವಾಗ ನಾನು ಹೋರಾಟಕ್ಕೆ ಬೆಂಬಲಿಸುವುದಾಗಿ ಹೇಳುತ್ತಲೇ ಉಸ್ತುವಾರಿ ಸಚಿವರು ಓಡಿ ಬಂದು ಭರವಸೆ ಕೊಟ್ಟು ಹೋದರು. ನೀರಾವರಿಗಾಗಿ ಹೋರಾಟ ಅನಿವಾರ್ಯ ಎಂಬಂತಾಗಿದೆ ಎಂದರು.

ಮತಕ್ಷೇತ್ರದಲ್ಲಿ ಕುಡಿವ ನೀರಿನ ಯೋಜನೆ ಸಲುವಾಗಿ ಸಿಸಿ ರಸ್ತೆ ಹಾಳುಮಾಡುತ್ತಿದ್ದಾರೆ. ಆಯ್ಕೆಯಾದವರು ನಿಮ್ಮೂರಿಗೆ ಬಂದು ಧನ್ಯವಾದ ಕೂಡಾ ಹೇಳಲಿಲ್ಲ. ಮೊದಲು ಅವರಿಗೆ ಹಳ್ಳಿಗಳ ಜನಕ್ಕೆ ನೀರು ಕೊಡಲು ತಿಳಿಸಿ. ನನ್ನ ದುಡಿಮೆಯಲ್ಲಿ ಅರ್ಧ ರಾಜಕಾರಣಕ್ಕೆ, ದಾಸೋಹ ಕ್ಕೆ ವ್ಯಯ ಮಾಡಿದ್ದೇನೆ. ನನಗೆ ಮಂತ್ರಿಯಾಗಿ ಮೆರೆಯಬೇಕು ಎಂಬ ಭಾವನೆ ಇಲ್ಲ. ರೈತರ ಮಕ್ಕಳು ತಮ್ಮ ತಂದೆಯವರು ಅನುಭವಿಸಿದ ಕಷ್ಟ ಅನುಭವಿಸಬಾರದು ಎಂಬ ಕಾರಣದಿಂದ ರಾಜಕಾರಣಕ್ಕೆ ಬಂದಿದ್ದೇನೆ. ಇದು ಕೇವಲ ಭಾಷಣಕ್ಕಾಗಿ ಮಾತಲ್ಲ ಸಂಕಲ್ಪದಿಂದ ಮಾತನಾಡುತ್ತಿದ್ದೇನೆ ಎಂದು ಹೇಳಿದರು. ಬಿಜೆಪಿ ಮುಖಂಡರಾದ ರಮೇಶ ಬಿದನೂರ, ರವಿಕಾಂತ ಬಗಲಿ, ಪ್ರಭುಗೌಡ ಬಿರಾದಾರ, ಪ್ರಭು ಕಡಿ, ಬಿ.ಪಿ.ಕುಲಕರ್ಣಿ, ಮಲಕೇಂದ್ರಗೌಡ ಪಾಟೀಲ, ಗಂಗಾಧರ ನಾಡಗೌಡ, ರವೀಂದ್ರ ಲೋಣಿ, ಎಂ.ಬಿ.ಅಂಗಡಿ, ಎಂ.ಎಸ್.ಪಾಟೀಲ, ಸುಮಂಗಲಾ ಕೋಟಿ, ಕೆ.ವಾಯ್.ಬಿರಾದಾರ, ಮಹದೇವಯ್ಯ ಶಾಸ್ತ್ರೀಗಳು, ಪುರಸಭೆ ಸದಸ್ಯೆ ಸಹನಾ ಬಡಿಗೇರ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

ನಡಹಳ್ಳಿಯವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು, ಕಾರ್ಯಕರ್ತರು ರಕ್ತದಾನ ಶಿಬಿರ,ಆರೋಗ್ಯತಪಾಸಣಾ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿದರು.

ಸಚಿವ ಎಂ.ಬಿ.ಪಾಟೀಲ್‌ರಿಗೆ ಟಾಂಗ್: ನೀರಾವರಿ ಭಗೀರಥ ಎಂದು ಕರೆಯಿಸಿಕೊಳ್ಳುವ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರ ಮತಕ್ಷೇತ್ರದಲ್ಲಿ ರಸ್ತೆಗಳ ಸ್ಥಿತಿ ಹೇಳುವಂತಿಲ್ಲ. ಬಬಲೇಶ್ವರ, ಸಿಂದಗಿ, ನಾಗಠಾಣ ಕ್ಷೇತ್ರದ ಒಳಗಡೆ ಹೋಗಿ ಹೊರಬರಲು ಆಗುವುದಿಲ್ಲ ಎಂದು ಮಾಜಿ ಶಾಸಕ ನಡಹಳ್ಳಿ ಟೀಕಿಸಿದರು.

ಕನಸು : ಮುದ್ದೇಬಿಹಾಳ ಮತಕ್ಷೇತ್ರದಂತಹ ಸಂಪನ್ಮೂಲ ಹೊಂದಿರುವ ತಾಲ್ಲೂಕು ರಾಜ್ಯದಲ್ಲಿ ಬೇರಾವುದು ಇಲ್ಲ. ಇಲ್ಲಿ 48 ಕೆರೆ ಇರುವ ಎರಡು ಡ್ಯಾಮ್‌ಗಳನ್ನು ಹೊಂದಿಕೊಂಡಿರುವ ತಾಲ್ಲೂಕು ಮುದ್ದೇಬಿಹಾಳ ಆಗಿದೆ. ಕನಸು ಹೊತ್ತಿರುವ ನಾಯಕರನ್ನು ನೀವು ಆಯ್ಕೆ ಮಾಡಿಕೊಳ್ಳಿ. ಹತ್ತು ಕೋಟಿ ವಚ್ಚದಲ್ಲಿ ಹೈನುಗಾರಿಕೆ ತರಬೇತಿ ಕೇಂದ್ರ ಮಾಡುತ್ತೇನೆ. ನಮ್ಮ ರೈತರು ಭೂಮಿಗೆ ಏನು ಬೇಕು ಎಂಬುದನ್ನು ತಿಳಿದುಕೊಂಡು ಒಕ್ಕಲುತನ ಮಾಡಬೇಕು.ರೈತನ ಬದುಕು ಹಸನು ಮಾಡಬೇಕು ಎಂಬುದು ನನ್ನ ಕನಸು ಎಂದು ಮಾಜಿ ಶಾಸಕ ನಡಹಳ್ಳಿ ಹೇಳಿದರು.

ನಾಡಗೌಡ, ಭೈರೇಗೌಡರ ವಿರುದ್ಧವೂ ವಾಗ್ದಾಳಿ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಅಭಿವೃದ್ಧಿಪಡಿಸಲು ಆಲಮಟ್ಟಿ ಜಲಾಶಯ ಎತ್ತರಿಸಿದರೆ ರೈತರಿಗೆ ಭೂಸ್ವಾಧೀನಗೊಂಡ ಜಮೀನುಗಳಿಗೆ ಪರಿಹಾರ ಕೊಡುವುದು ಹೆಚ್ಚುವರಿ ನಷ್ಟವೆಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಎಲ್ಲೋ ಕೂತುಕೊಂಡು ಭಾಷಣ ಮಾಡುತ್ತಾನೆ. ಭೈರೇಗೌಡ ಅವನೇನು ಅವರ ಅಪ್ಪನ ಮನೆಯಿಂದ ರೈತರಿಗೆ ಪರಿಹಾರ ಕೊಡುತ್ತಾನಾ?. ನಮ್ಮ ರೈತರ ಜಮೀನುಗಳು ಕಳೆದುಕೊಂಡಿರುತ್ತಾರೆ.ಅವರಿಗೆ ಪರಿಹಾರ ಸಿಗಬೇಕು ಎಂದು ನಡಹಳ್ಳಿ ಭೈರೇಗೌಡ ವಿರುದ್ದ ವಾಗ್ದಾಳಿ ನಡೆಸಿದರು.

ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಈಗ ಆಯ್ಕೆಯಾದವರು ಒಂದೇ ಒಂದು ಪಂಚಾಯಿತಿಗೆ ಹನ್ನೆರಡು ತಾಸು ಕರೆಂಟ್ ಕೊಡಲು ಆಗುತ್ತದೆಯೇ? ಎಂಬುದನ್ನು ತೋರಿಸಿಕೊಡಲಿ ಎಂದು ಸವಾಲು ಹಾಕಿದ ಮಾಜಿ ಶಾಸಕ ನಡಹಳ್ಳಿ, ನಾನು ಇಡೀ ತಾಲ್ಲೂಕಿಗೆ 12 ತಾಸು ವಿದ್ಯುತ್ ಕೊಡುತ್ತೇನೆ.

ನನ್ನ ಅವಧಿಯಲ್ಲಿ ಹತ್ತು ವಿದ್ಯುತ್ ಸ್ಟೇಷನ್ ತಂದಿದ್ದೇವೆ. ಆಗ ಏಳು ತಾಸು ಕೊಡುತ್ತಿದ್ದರು. ಈಗಲೂ ಅಷ್ಟೇ ವಿದ್ಯುತ್ ಕೊಡುತ್ತಿದ್ದಾರೆ. ಇವರಿಂದ ಎರಡೂವರೆ ವರ್ಷದಲ್ಲಿ ಹೆಚ್ಚಿಗೆ ವಿದ್ಯುತ್ ಕೊಡುವುದಕ್ಕೆ ಆಗಿಲ್ಲ ಎಂದು ಶಾಸಕ ನಾಡಗೌಡರ ಹೆಸರು ಹೇಳದೇ ಟೀಕಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ