Be aware when responding to fake news: AS Patil Nadahalli

ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ ಎಸ್ ಪಾಟೀಲ್ ನಡಹಳ್ಳಿ

ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ ಎಸ್ ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ: ಸುದ್ದಿ ಮಾಧ್ಯಮ, ಸಂವಹನ ಯುಗದಲ್ಲಿ ಪ್ರತಿಯೊಬ್ಬರು ಸುದ್ದಿ ಹಂಚಿಕೊಳ್ಳುತ್ತಿದ್ದಾರೆ. ತಮ್ಮತನವನ್ನು ತೋರಲು ಬಯಸುತ್ತಾರೆ. ಕ್ಷಣಾರ್ಧದಲ್ಲಿ ಜಗತ್ತಿಗೆ ಪರಿಚಯವಾಗಿ ಹಣ, ಕೀರ್ತಿ ಹಾಗೂ ಜನಪ್ರಿಯತೆಯನ್ನು ಗಳಿಸುತ್ತಾರೆ ಇದಕ್ಕೆ ಮುಖ್ಯ ಕಾರಣ ಅಭಿವ್ಯಕ್ತಿ ಸಾಮರ್ಥ್ಯ ಎಂದು ಮಾಜಿ ಶಾಸಕ ಎ ಎಸ್ ಪಾಟೀಲ್ (ನಡಹಳ್ಳಿ) ಹೇಳಿದರು.

ಆಲಮಟ್ಟಿ ರಸ್ತೆ ಪಕ್ಕದ ಅರಿಹಂತ ಗಿರಿಯಲ್ಲಿರುವ ಅರಿಹಂತ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಅವರು, ಆಧುನಿಕ ಜಗತ್ತು ಮೊಬೈಲ್ ಬಳಕೆಯಿಂದ ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತನೆ ಆಗಿದೆ.

ವಿಜ್ಞಾನ, ತಂತ್ರಜ್ಞಾನ ಜೊತೆಗೆ ಮಾಹಿತಿ ಜ್ಞಾನ ಇಲ್ಲದಿದ್ದರೆ ಪೂರ್ಣವಾಗುವುದಿಲ್ಲ. ಹಾಗೆಯೇ ಸುಳ್ಳು ಮಾಹಿತಿ ಹಬ್ಬಿಸುವುದರಿಂದ ಒಂದು ದೇಶ, ಒಬ್ಬ ವ್ಯಕ್ತಿಯನ್ನು ಹಾಳು ಮಾಡಬಹುದು. ಹಾಗಾಗಿ ಸುಳ್ಳು ಸುದ್ದಿಗಳನ್ನು ಹರಡಬಾರದು ಮತ್ತು ನಂಬಬಾರದು ಎಂದು ಮಾತನಾಡಿದರು.

ಪತ್ರಿಕೋದ್ಯಮ ಮತ್ತು ಪತ್ರಕರ್ತರ ಕಾರ್ಯಶೈಲಿ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ. ರಾಜನಾರಾಯಣ ನಲವಡೆ ಅವರು, ಪತ್ರಿಕೋದ್ಯಮ ಸದಾ ಕಾಲ ಸಮಾಜಮುಖಿ ಕಾರ್ಯ ನಿರ್ವಹಿಸಿದೆ. ಸ್ವತಂತ್ರ ಹೋರಾಟಗಾರರು, ಸಾಹಿತಿಗಳು ಕರಪತ್ರ ರೂಪದಲ್ಲಿ ಪ್ರಕಟಣೆ ಮಾಡಿದ ಸಾಹಿತ್ಯ ಇಂದು ಸಮೂಹ ಮಾಧ್ಯಮ, ತಂತ್ರಜ್ಞಾನ ಬಳಕೆಯಿಂದ ಸಮಾಜವನ್ನು ಬದಲಿಸಿದೆ. ಪತ್ರಕರ್ತರಾದವರು ಸದಾ ಸಮಾಜದ ಓರೆಕೋರೆಗಳನ್ನು ತಿದ್ದುತ್ತಾ, ಸತ್ಯದ ಪರವಾಗಿ ಬರೆಯಬೇಕು ಎಂದು ಮಾತನಾಡಿದರು.

ಅರಿಹಂತ ಸಂಸ್ಥೆಯ ಅಧ್ಯಕ್ಷರಾದ ಮಹಾವೀರ ಸಗರಿ. ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ. ವಡವಡಗಿ. ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನರ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ವಿದ್ಯಾರ್ಥಿನಿ ಭಾಗ್ಯಶ್ರೀ ಬಸವರಾಜ್ ಕುಂಬಾರ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ. ತಾಲೂಕು ಮಟ್ಟದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಪತ್ರಕರ್ತರಾದ ರಿಯಾಜ್‌ಅಹ್ಮದ್ ಮುಲ್ಲಾ, ಹಣಮಂತ ಬೀರಗೊಂಡ, ಈಶ್ವರ ಈಳಗೇರ, ಹಣಮಂತ ಟಕ್ಕಳಕಿ(ಮುತ್ತು), ಕೃಷ್ಣಾ ಕುಂಬಾರ ಅವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಬೆಣ್ಣೂರು. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಪುಲ್ ಸಗರಿ ವೇದಿಕೆ ಮೇಲೆ ಇದ್ದರು. ಸಂಘದ ತಾಲೂಕು ಅಧ್ಯಕ್ಷ ಆರ್. ಬಿ. ವಡವಡಗಿ(ಮುತ್ತು) ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ಸಿದ್ದು ಚಲವಾದಿ, ಖಜಾಂಚಿ ಲಾಡ್ಲೇಮಶ್ಯಾಕ ನದಾಫ, ಅಮೀನ ಸಾಬ್ ಮುಲ್ಲಾ. ಪುಂಡಲಿಕ ಮುರಾಳ. ಬಸವರಾಜ ಹುಲಗಣ್ಣಿ. ಮಹಿಬೂಬ ಹಳ್ಳೂರು ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ