Give food to starving children, don't waste it: Basavaraja Kori

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು.

ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ “ಹಾಲು ಕುಡಿಯುವ ಹಬ್ಬ”ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲ್ಲಿನ ನಾಗರಕ್ಕೆ ಹಾಲೆರೆಯುವುದನ್ನು 12 ನೇ ಶತಮಾನದಲ್ಲಿ ಬಸವಾದಿ ಶರಣರು ಖಂಡಿಸಿ ಚಳುವಳಿ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಿದರು. ಅಮೂಲ್ಯವಾದ ಹಾಲು, ಸಮತೋಲನ ಆಹಾರವಾಗಿದೆ. ಪೌಷ್ಟಿಕಾಂಶ, ಖನಿಜಗಳನ್ನು ಹೊಂದಿರುವ ಹಾಲನ್ನು ಕಲ್ಲಿಗೆ ಹಾಕದೇ ನಾವು ಕುಡಿದರೆ ದೇಹ ಶಕ್ತಿ ಪಡೆಯುತ್ತದೆ ಎಂದರು. ಹಸಿರು ತೋರಣ ಬಳಗದ ಅಧ್ಯಕ್ಷರಾದ ಬಿ.ಎಚ್.ಬಳಬಟ್ಟಿ ಮಾತನಾಡಿ, ಪೌಷ್ಟಿಕಾಂಶಗಳ ಕೊರತೆಯಿಂದ ಮಕ್ಕಳು, ಬಾಣಂತಿಯರು ಸಾವನ್ನಪ್ಪಿದ ವರದಿ ಓದುತ್ತಿದ್ದೇವೆ. ಅಮೂಲ್ಯವಾದ ಹಾಲನ್ನು ಕಲ್ಲಿಗೆ ಎರೆಯದೇ ಅದನ್ನು ಎಲ್ಲರೂ ಕುಡಿದು ಆರೋಗ್ಯವಂತರಾಗಬೇಕೆಂದರು.

ಹತೋಗೆಬ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಹಸಿರು ತೋರಣ ಗೆಳೆಯರ ಬಳಗವು ಪರಿಸರ ಸಂರಕ್ಷಣೆ ಜೊತೆ ಜೊತೆಯಲ್ಲಿಯೇ ಸಮಾಜದಲ್ಲಿ ಬೇರೂರಿರುವ ಮೌಢ್ಯಗಳನ್ನು ಕಡಿಮೆ ಮಾಡಲು ಮತ್ತು ಆಹಾರದ ಮಹತ್ವ ಸಾರುವ ಕೆಲಸ ಮಾಡುತ್ತಿದೆ ಎಂದರು. ಬಳಗದ ಮಾಜಿ ಅಧ್ಯಕ್ಷರಾದ ರವಿ ಗೂಳಿ ಮಾತನಾಡಿ, ಸಮಾಜದಲ್ಲಿ ಮನೆ ಮಾಡಿರುವ ಅನಿಷ್ಟಗಳು, ಮೂಢ ನಂಬಿಕೆಗಳು ಕ್ರಮೇಣ ಕಡಿಮೆ ಆಗುತ್ತ ನಡೆದಿವೆ ಎಂದರು.

ಡಾ.ವೀರೇಶ ಇಟಗಿ ಮಾತನಾಡಿ, ಹಾಲು ಹಲವು ಪೌಷ್ಟಿಕಾಂಶಗಳಿಂದ ಕೂಡಿದ್ದು, ಅದನ್ನು ವ್ಯರ್ಥ ಮಾಡಬಾರದು ಎಂದರು. ವೇದಿಕೆಯಲ್ಲಿ ಹತೋಗೆಬ ಕಾರ್ಯದರ್ಶಿ ಅಮರೇಶ ಗೂಳಿ, ಗಣ್ಯರಾದ ರಾಮು ಪೂಜಾರಿ, ಮಾಜಿ ಅಧ್ಯಕ್ಷರಾದ ಕೆ. ಆರ್. ಕಾಮಟೆ, ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ಗೌರವಾಧ್ಯಕ್ಷ ಜಿ.ಎಂ.ಹುಲಗಣ್ಣಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಮುಖ್ಯ ಗುರುಗಳಾದ ಚಿನ್ನಪ್ಪ ಬಿ. ಚಿತ್ತರಗಿ, ಬಿ. ಎಂ. ಪಲ್ಲೇದ, ಸುರೇಶ ಕಲಾಲ, ರವಿ ತಡಸದ, ಡಾ.ವಿಜಯಕುಮಾರ ಗೂಳಿ, ವೀರೇಶ ಹಂಪನಗೌಡ್ರ, ಡಾ. ಚಂದ್ರಶೇಖರ ಶಿವಯೋಗಿಮಠ, ವಿರುಪಾಕ್ಷಿ ಪತ್ತಾರ, ವಿಶ್ವನಾಥ ಪಾಟೀಲ, ಶಿಕ್ಷಕರಾದ ಸರೋಜಾ ಕಿತ್ತೂರು, ಶಾರದಾ ಮಹಾಂತನವರ, ರಾಜೇಶ್ವರಿ ಜಂಗೀನ, ಅಕ್ಕಮಹಾದೇವಿ ಕುರಜೋಗಿ, ಗೀತಾ ಕೋಳೂರ ಸೇರಿದಂತೆ ಹಸಿರು ತೋರಣ ಬಳಗದ ಸದಸ್ಯರಿದ್ದರು.

ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಸ್ವಾಗತಿಸಿ, ನಿರೂಪಿಸಿದರು. ಸರೋಜಾ ಕಿತ್ತೂರು ವಂದಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಲು ವಿತರಿಸಲಾಯಿತು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು