Give food to starving children, don't waste it: Basavaraja Kori

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು.

ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ “ಹಾಲು ಕುಡಿಯುವ ಹಬ್ಬ”ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲ್ಲಿನ ನಾಗರಕ್ಕೆ ಹಾಲೆರೆಯುವುದನ್ನು 12 ನೇ ಶತಮಾನದಲ್ಲಿ ಬಸವಾದಿ ಶರಣರು ಖಂಡಿಸಿ ಚಳುವಳಿ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಿದರು. ಅಮೂಲ್ಯವಾದ ಹಾಲು, ಸಮತೋಲನ ಆಹಾರವಾಗಿದೆ. ಪೌಷ್ಟಿಕಾಂಶ, ಖನಿಜಗಳನ್ನು ಹೊಂದಿರುವ ಹಾಲನ್ನು ಕಲ್ಲಿಗೆ ಹಾಕದೇ ನಾವು ಕುಡಿದರೆ ದೇಹ ಶಕ್ತಿ ಪಡೆಯುತ್ತದೆ ಎಂದರು. ಹಸಿರು ತೋರಣ ಬಳಗದ ಅಧ್ಯಕ್ಷರಾದ ಬಿ.ಎಚ್.ಬಳಬಟ್ಟಿ ಮಾತನಾಡಿ, ಪೌಷ್ಟಿಕಾಂಶಗಳ ಕೊರತೆಯಿಂದ ಮಕ್ಕಳು, ಬಾಣಂತಿಯರು ಸಾವನ್ನಪ್ಪಿದ ವರದಿ ಓದುತ್ತಿದ್ದೇವೆ. ಅಮೂಲ್ಯವಾದ ಹಾಲನ್ನು ಕಲ್ಲಿಗೆ ಎರೆಯದೇ ಅದನ್ನು ಎಲ್ಲರೂ ಕುಡಿದು ಆರೋಗ್ಯವಂತರಾಗಬೇಕೆಂದರು.

ಹತೋಗೆಬ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಹಸಿರು ತೋರಣ ಗೆಳೆಯರ ಬಳಗವು ಪರಿಸರ ಸಂರಕ್ಷಣೆ ಜೊತೆ ಜೊತೆಯಲ್ಲಿಯೇ ಸಮಾಜದಲ್ಲಿ ಬೇರೂರಿರುವ ಮೌಢ್ಯಗಳನ್ನು ಕಡಿಮೆ ಮಾಡಲು ಮತ್ತು ಆಹಾರದ ಮಹತ್ವ ಸಾರುವ ಕೆಲಸ ಮಾಡುತ್ತಿದೆ ಎಂದರು. ಬಳಗದ ಮಾಜಿ ಅಧ್ಯಕ್ಷರಾದ ರವಿ ಗೂಳಿ ಮಾತನಾಡಿ, ಸಮಾಜದಲ್ಲಿ ಮನೆ ಮಾಡಿರುವ ಅನಿಷ್ಟಗಳು, ಮೂಢ ನಂಬಿಕೆಗಳು ಕ್ರಮೇಣ ಕಡಿಮೆ ಆಗುತ್ತ ನಡೆದಿವೆ ಎಂದರು.

ಡಾ.ವೀರೇಶ ಇಟಗಿ ಮಾತನಾಡಿ, ಹಾಲು ಹಲವು ಪೌಷ್ಟಿಕಾಂಶಗಳಿಂದ ಕೂಡಿದ್ದು, ಅದನ್ನು ವ್ಯರ್ಥ ಮಾಡಬಾರದು ಎಂದರು. ವೇದಿಕೆಯಲ್ಲಿ ಹತೋಗೆಬ ಕಾರ್ಯದರ್ಶಿ ಅಮರೇಶ ಗೂಳಿ, ಗಣ್ಯರಾದ ರಾಮು ಪೂಜಾರಿ, ಮಾಜಿ ಅಧ್ಯಕ್ಷರಾದ ಕೆ. ಆರ್. ಕಾಮಟೆ, ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ಗೌರವಾಧ್ಯಕ್ಷ ಜಿ.ಎಂ.ಹುಲಗಣ್ಣಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಮುಖ್ಯ ಗುರುಗಳಾದ ಚಿನ್ನಪ್ಪ ಬಿ. ಚಿತ್ತರಗಿ, ಬಿ. ಎಂ. ಪಲ್ಲೇದ, ಸುರೇಶ ಕಲಾಲ, ರವಿ ತಡಸದ, ಡಾ.ವಿಜಯಕುಮಾರ ಗೂಳಿ, ವೀರೇಶ ಹಂಪನಗೌಡ್ರ, ಡಾ. ಚಂದ್ರಶೇಖರ ಶಿವಯೋಗಿಮಠ, ವಿರುಪಾಕ್ಷಿ ಪತ್ತಾರ, ವಿಶ್ವನಾಥ ಪಾಟೀಲ, ಶಿಕ್ಷಕರಾದ ಸರೋಜಾ ಕಿತ್ತೂರು, ಶಾರದಾ ಮಹಾಂತನವರ, ರಾಜೇಶ್ವರಿ ಜಂಗೀನ, ಅಕ್ಕಮಹಾದೇವಿ ಕುರಜೋಗಿ, ಗೀತಾ ಕೋಳೂರ ಸೇರಿದಂತೆ ಹಸಿರು ತೋರಣ ಬಳಗದ ಸದಸ್ಯರಿದ್ದರು.

ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಸ್ವಾಗತಿಸಿ, ನಿರೂಪಿಸಿದರು. ಸರೋಜಾ ಕಿತ್ತೂರು ವಂದಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಲು ವಿತರಿಸಲಾಯಿತು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು