Press Day on June 30 Health checkup camp for firemen

ಜು.30 ರಂದು ಪತ್ರಿಕಾ ದಿನಾಚರಣೆ ಅಗ್ನಿಶಾಮಕ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಶಿಬಿರ

ಜು.30 ರಂದು ಪತ್ರಿಕಾ ದಿನಾಚರಣೆ ಅಗ್ನಿಶಾಮಕ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಶಿಬಿರ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಪತ್ರಿಕಾ ದಿನಾಚರಣೆಯ ನಿಮಿತ್ಯ ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್ ಸಹಯೋಗದಲ್ಲಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗೆ ಆರೋಗ್ಯ ತಪಾಸಣೆ, ಉಚಿತ ಇಸಿಜಿ ಹಾಗೂ ಆರ್.ಬಿ.ಎಸ್ ಪರೀಕ್ಷೆ , ಹೃದಯ ರೋಗ ಕುರಿತು ಉಪನ್ಯಾಸ ಕಾರ್ಯಕ್ರಮ ಜು.30 ರಂದು ಸಂಜೆ 4 ಗಂಟೆಗೆ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದ ಪಕ್ಕದಲ್ಲಿರುವ ಅಗ್ನಿಶಾಮಕ ಠಾಣೆಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾನಿಪ ಧ್ವನಿ ಸಂಘದ ತಾಲ್ಲೂಕು ಅಧ್ಯಕ್ಷ ಶಂಕರ ಈ.ಹೆಬ್ಬಾಳ ತಿಳಿಸಿದರು.

ಪಟ್ಟಣದ ಜನರಕೂಗು ಡಿಜಿಟಲ್ ವಾಹಿನಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಅಂದು ಬೆಳಗ್ಗೆ 9.30ಕ್ಕೆ ಫಕಿರೇಶ್ವರ ಡೈಗ್ನೂಸ್ಟಿಕ್ ಸೆಂಟರ್‌ನಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಇಸಿಜಿ, ಆರ್.ಬಿ.ಎಸ್ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಸಾಯಂಕಾಲ ನಡೆಯುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮುದ್ದೇಬಿಹಾಳ ಖಾಸ್ಗತೇಶ್ವರ ಮಠದ ಉಸ್ತುವಾರಿ ಶರಣೆ ನೀಲಮ್ಮ ವಿರಕ್ತಮಠ ವಹಿಸುವರು. ವಿಜಯಪುರ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಧಿಕಾರಿ ಶಶಿಧರ ನೀಲಗಾರ ಉದ್ಘಾಟಿಸುವರು. ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಜಿಲ್ಲಾಧ್ಯಕ್ಷ ಯೂಸೂಫ ನೇವಾರ ಅಧ್ಯಕ್ಷತೆ ವಹಿಸುವರು. ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಸಾಧಕರನ್ನು ಗೌರವಿಸುವರು ಎಂದು ತಿಳಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ ಮಾತನಾಡಿ, ಕಾರ್ಯಕ್ರಮದಲ್ಲಿ ಹೃದಯ ರೋಗದ ಕಾರಣ ಪರಿಹಾರದ ಕುರಿತು ಮುದ್ದೇಬಿಹಾಳದ ಕರೇಕಲ್ ಪಾಟೀಲ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಮುಖ್ಯಸ್ಥ ಬಸನಗೌಡ ಕರೇಕಲ್‌ಪಾಟೀಲ ಅವರು ಉಪನ್ಯಾಸ ನೀಡುವರು. ಪತ್ರಕರ್ತರಾದ ಹಣಮಂತ ನಲವಡೆ, ರವಿ ತೇಲಂಗಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಪ್ರಭಾರ ತಹಸೀಲ್ದಾರ್ ಎ.ಡಿ.ಅಮರವಾದಗಿ, ಸಿಪಿಐ ಮೊಹ್ಮದ ಫಸಿವುದ್ದೀನ, ಐಎನ್‌ಬಿಸಿಡಬ್ಲ್ಯೂ ಸಂಘಟನೆ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಂಗೀತಾ ನಾಡಗೌಡ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷೆ ಕಾಶೀಬಾಯಿ ರಾಂಪೂರ, ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಡಾ.ಸಿ.ಕೆ.ಶಿವಯೋಗಿಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಕಾನಿಪ ಧ್ವನಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಸದಸ್ಯರಾದ ಹಣಮಂತ ನಲವಡೆ, ಮಾರುತಿ ಹಿಪ್ಪರಗಿ, ರವಿ ತೇಲಂಗಿ, ಬಸವರಾಜ ಕುಂಟೋಜಿ, ಬಸವರಾಜ ಹೂಗಾರ, ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ, ಹಣಮಂತ ಚವ್ಹಾಣ ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ