Opposition to the implementation of the Vakbh Amendment-2025 Act

ವಕ್ಭ್ ತಿದ್ದುಪಡಿ-2025ರ ಕಾಯ್ದೆ ಅನುಷ್ಠಾನಕ್ಕೆ ವಿರೋಧ

ವಕ್ಭ್ ತಿದ್ದುಪಡಿ-2025ರ ಕಾಯ್ದೆ ಅನುಷ್ಠಾನಕ್ಕೆ ವಿರೋಧ

ಮುದ್ದೇಬಿಹಾಳ : ಕೇಂದ್ರ ಸರ್ಕಾರ ವಕ್ಭ್ ಕಾಯ್ದೆಗೆ ತಿದ್ದುಪಡಿ-2025ರ ಅನುಷ್ಠಾನಕ್ಕೆ ನಮ್ಮ ಬಲವಾದ ವಿರೋಧವನ್ನು ವ್ಯಕ್ತಪಡಿಸುತ್ತೇವೆ ಎಂದು ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ಪ್ರತಿನಿಧಿಗಳು ಹೇಳಿದರು.

ಪಟ್ಟಣದಲ್ಲಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಶನ್, ಜಮಾಅತೆ ಇಸ್ಲಾಮಿ ಹಿಂದ್ ಹಾಗೂ ಸ್ಥಳೀಯ ಮುಸ್ಲಿಂ ಸಮಾಜದ ಮಹಿಳೆಯರು ವಕ್ಭ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆ ಅಧ್ಯಕ್ಷೆ ಸುಮಯ್ಯ ಖಾನ್, ಇಸ್ಲಾಂ ಹೊರಗಿನ ಸದಸ್ಯರ ಸೇರ್ಪಡೆಯಿಂದ ಸಂಸ್ಥೆಗಳ ಧಾರ್ಮಿಕ ಸ್ವಾತಂತ್ರ್ಯವನ್ನು ಹಾಳು ಮಾಡುವುದು ಇದರ ಹಿಂದಿನ ಕುತಂತ್ರ ಅಡಗಿದೆ. ವಕ್ಭ್ ಬೋರ್ಡ್ನಿಂದ ಸರ್ಕಾರದ ಕೈಗೆ ವಕ್ಭ್ ಆಸ್ತಿಗಳನ್ನು ಘೋಷಿಸುವ ಅಧಿಕಾರ ವರ್ಗಾಯಿಸುತ್ತದೆ. 1995ರ ಕಾಯ್ದೆ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿದ್ದು ಹೊಸ ತಿದ್ದುಪಡಿ ಕಾಯ್ದೆಯಲ್ಲಿ ನಿಖರವಾದ ಪ್ರಾತಿನಿಧ್ಯ ನೀಡುವುದಿಲ್ಲ ಎಂದು ಹೇಳಿದರು.

ಈ ಕಾಯ್ದೆಯ ಕುರಿತು ಶಾಸಕರು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ರದ್ದುಗೊಳಿಸುವಂತೆ ಒತ್ತಾಯಿಸಬೇಕು. ಸಮುದಾಯದ ಸಮಾಲೋಚನೆಯಿಲ್ಲದೆ ಈ ಕಾಯಿದೆಯ ಸ್ಥಳೀಯ ಅನುಷ್ಠಾನ ಮಾಡಬಾರದು. ತಾಲ್ಲೂಕು ಅಧಿಕಾರಿಗಳು ಶಾಂತಿಯುತ ಜಾಗೃತಿ ಕಾರ್ಯಕ್ರಮ ಹಾಗೂ ಕಾನೂನು ಕಾರ್ಯಾಗಾರಗಳಿಗೆ ಸಹಕಾರ ನೀಡಬೇಕು. ಜಿಲ್ಲಾ ವಕ್ಫ್ ಅಧಿಕಾರಿ ನೊಂದಾಯಿಸಲ್ಪಡದೇ ಇರುವ ವಕ್ಫ್ ಆಸ್ತಿಗಳ ಪರಿಶೀಲನೆ ಹಾಗೂ ನೋಂದಣಿ ಪ್ರಕ್ರಿಯೆ ಆರಂಭಿಸಬೇಕು ಎಂದು ತಹಸೀಲ್ದಾರ್‌ಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಪ್ರಭಾರಿ ತಹಸೀಲ್ದಾರ್ ಎ. ಡಿ. ಅಮರವಾದಗಿ ಮನವಿ ಸ್ವೀಕರಿಸಿದರು. ಜಮಾಅತೆ ಇಸ್ಲಾಮಿ ಹಿಂದ ಸಂಚಾಲಕ ನೂರೇನಬಿ ನದಾಫ, ಸದ್ದಾಂಹುಸೇನ ನದಾಫ, ಪ್ರಮುಖರಾದ ಮುಸರತ್ ನದಾಫ, ರಜಿಯಾ ಅಬಾಲೆ, ನಜಮಾ ಘಾಟಿ, ಆಫ್ರಿನ ಮೋಮಿನ, ಸಾನಿಯಾ ಬಾಗಲಕೋಟೆ, ಹಲೀಮಾ ಮಕಾನದಾರ, ಶಗುಪ್ತಾ ದಫೆದಾರ, ಸಬಾ ಶಿರಗುಂಪಿ, ಕುಲ್ಸುಮ್ ಖಾನ್, ಬಿಸ್ಮಿಲ್ಲಾ ನದಾಫ್, ಯಾಸ್ಮಿನ್ ಎಲಿಗಾರ್ ಇದ್ದರು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ