Share in Diesel Cess to Unorganized Workers Council: Minister Santosh S Lad

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್ ಲಾಡ್ ತಿಳಿಸಿದರು.

ಇಲ್ಲಿನ ಅಜ್ಜಿ ಓಷಿಯನ್ ಹೋಟೆಲ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ʼಸ್ಮಾರ್ಟ್ ಕಾರ್ಡ್ʼ ವಿತರಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಸಂಘಟಿತ ವಲಯದ ಕಾರ್ಮಿಕರು ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲರಾಗಿದ್ದು, ಸಂಘಟಿತ ಕಾರ್ಮಿಕರಿಗೆ ದೊರೆಯುವ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇವರಿಗೆ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಈ ಮಂಡಳಿಗೆ ಹೆಚ್ಚಿನ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ರಾಜ್ಯದಲ್ಲಿನ ಡೀಸೆಲ್ ಹಾಗೂ ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ನಿರ್ದಿಷ್ಟ ಮೊತ್ತವನ್ನು ವರ್ಗಾಯಿಸುವ ಕುರಿತು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ಈ ವರ್ಗದ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗರಿಷ್ಠ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಈಗಾಗಲೇ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ದೇಶದಲ್ಲೇ ಪ್ರಥಮ ಬಾರಿಗೆ ಇ ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗಾಗಿ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಸಿನಿಮಾ ಮತ್ತು ಸಾಂಸ್ಕತಿಕ ಚವಟುವಟಿಕೆಗಳಲ್ಲಿ ತೊಡಗಿರುವ ಕಾರ್ಮಿಕರ ಸುಂಕ ಅಧಿನಿಯಮ, ಕರ್ನಾಟಕ ಪ್ಲಾಟ್ ಫಾರ್ಮ್‌ ಆಧಾರಿತ ಗಿಗ್ ಕಾರ್ಮಿಕರ ಅಧಿನಿಯಮ ಮತ್ತು ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ ರೂಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ರಾಜ್ಯದಲ್ಲಿ ಕಾರ್ಮಿಕರ ಮಕ್ಕಳಿಗಾಗಿ 6 ರಿಂದ 12 ತರಗತಿಯವರಿಗೆ ಉಚಿತ ಶಿಕ್ಷಣ ನಿಡುವ ಶಾಲೆಗಳನ್ನು ತೆರೆಯಲಾಗುತ್ತಿದ್ದು, ಪ್ರತೀ ಜಿಲ್ಲೆಗೊಂದು ಈ ಶಾಲೆಗಳನ್ನು ತೆರೆಯುವ ಬಗ್ಗೆ ಮುಖ್ಯಮಂತ್ರಿಗಳ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ ಸಚಿವರು, ಕನಿಷ್ಠ ವೇತನ ಪಾವತಿಯನ್ನು ಕಡ್ಡಾ ಯಗೊಳಿಸಿದ್ದು ಈ ಬಗ್ಗೆ ದೂರುಗಳಿದ್ದಲ್ಲಿ ಲಿಖಿತವಾಗಿ ನೇರವಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸಲ್ಲಿ ಸಬೇಕು, ರಾಜ್ಯದಲ್ಲಿನ ಸರ್ಕಾರಿ ಇಲಾಖೆಗಳಲ್ಲಿನ ಹೊರಗುತ್ತಿಗೆ ನೌಕರರ ನೇಮಕಾತಿಗಾಗಿ ಜಿಲ್ಲಾ ಮಟ್ಟದಲ್ಲಿ ಸೊಸೈಟಿಗಳನ್ನು ರಚಿಸಲಾಗುತ್ತಿದೆ, ನಿರ್ದಿಷ್ಟ ಅವಧಿಗೆ ಸೇವೆ ಸಲ್ಲಿಸಿದ ನೌಕರರರಿಗೆ ಗ್ಯಾಚ್ಯುಯಿಟಿ ಮತ್ತು ಕಡ್ಡಾಯವಾಗಿ ವಿಮೆ ಮಾಡಿಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದ್ದು, ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣಕ್ಕೆ ಪೂರಕವಾದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹಾಗೂ ಶಾಸಕ ಸತೀಶ್ ಸೈಲ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೇರಳದ ಮಂಜೇಶ್ವರ ಶಾಸಕ ಅಶ್ಪಾಕ್, ನಗರಸಭೆ ಅಧ್ಯಕ್ಷ ರವಿರಾಜ್ ಅಂಕೊಲೆಕರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ರಾಣೆ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಪ್‌ ಶಶಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದೀಪನ್, ಧಾರವಾಡ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಸಚಿನ್ ವೈ ಹಳೇಮನಿ, ಅಸಂಘಟಿತ
ಕಾರ್ಮಿಕ ಮಂಡಳಿಯ ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ್, ಬೆಳಗಾವಿ ವಿಭಾಗದ ಉಪ ಕಾರ್ಮಿಕ ಆಯುಕ್ತ ನಾಗೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ