Minister Santhosh Lad advised to take action to distribute fertilizer vouchers to farmers

ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ಬೆಂಗಳೂರು, ಜುಲೈ 30: ಪಡಿತರ ಚೀಟಿ ರೀತಿಯಲ್ಲೇ ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌. ಲಾಡ್‌ ಸಲಹೆ ನೀಡಿದ್ದಾರೆ.

ಪ್ರತಿಯೊಬ್ಬ ರೈತರಿಗೂ ಸರ್ವೆ ನಂಬರ್‌ವಾರು ಬೆಳೆಯಬೇಕಾದ ಬೆಳೆ ಮತ್ತು ಅವಶ್ಯವಿರುವ ರಸಗೊಬ್ಬರಗಳನ್ನು ಪ್ರತ್ಯೇಕವಾಗಿ ರಸಗೊಬ್ಬರ ಚೀಟಿಯಲ್ಲಿ ನಮೂದಿಸಿ ವಿತರಿಸಬಹುದಾಗಿದೆ. ಈ ಸಂಬಂಧ ಕ್ರಮ ವಹಿಸಿ ಎಂದು ಧಾರವಾಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿಗಳು ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಪತ್ರ ಮುಖೇನ ತಿಳಿಸಿದ್ದಾರೆ.

ಧಾರವಾಡದಲ್ಲಿರುವ ಕೃಷಿ ವಿಶ್ವವಿದ್ಯಾಲಯವು ವಿವಿಧ ಬೆಳೆಗಳಿಗೆ ಸಂಬಂಧಿಸಿದ ಹಲವು ಸಂಶೋಧನೆಗಳನ್ನು ನಡೆಸುತ್ತಿದೆ. ಗ್ರಾಮಗಳಲ್ಲಿರುವ ರೈತರಿಗೆ ಅನುಕೂಲವಾಗುವಂತೆ ಪ್ರತಿ ರೈತರ ಸರ್ವೆ ನಂಬರ್‌ವಾರು ಬೆಳೆಗಳನ್ನು ಬೆಳೆಯಲು ಸೂಕ್ತ ಅಧ್ಯಯನ ನಡೆಸಿ ಶಿಫಾರಸು ಮಾಡುವುದು ಅನಿವಾರ್ಯವಾಗಿದೆ. ಇದರಿಂದ ರೈತರ ಬೇಡಿಕೆಗಳಾದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಅನುಪಾತವನ್ನು ಸರಿದೂಗಿಸಲು ಸಹಾಯವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

ರಸಗೊಬ್ಬರ ಚೀಟಿಯಲ್ಲಿ ಒಳಗೊಂಡಿರಬೇಕಾದ ಅಂಶಗಳು:
ರಸಗೊಬ್ಬರ ಚೀಟಿಯಲ್ಲಿ ಹಲವು ಅಂಶಗಳು ಒಳಗೊಂಡಿರಬೇಕು. ರೈತರ ಸರ್ವೆ ನಂಬರ್‌, ಜಮೀನಿನ ಮಣ್ಣಿನ ಫಲವತ್ತತೆಯ ಪರೀಕ್ಷಾ ವರದಿ, ಪರೀಕ್ಷಾ ವರದಿಯ ಅನುಗುಣವಾಗಿ ಬೆಳೆಯ ಬೇಕಾದ ಬೆಳೆ, ಶಿಫಾರಸು ಮಾಡಿದ ಬೆಳೆಗೆ ಬೇಕಾದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರದ ವಿವರ ಹಾಗೂ ಶಿಫಾರಸಿಗೆ ಅನುಗುಣವಾಗಿ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ವಿವರಣೆ ಇರಬೇಕು ಎಂದಿದ್ದಾರೆ.

ಅನುಕೂಲಗಳು ಏನು?
ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳುವುದರಿಂದ ಬಿತ್ತನೆಗೆ ಬೇಕಾದ ಬೀಜ, ರಸಗೊಬ್ಬರದ ಕೊರತೆ ಉಂಟಾಗುವುದಿಲ್ಲ. ಈ ಸಂಬಂಧ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಧಾರವಾಡ ಜಿಲ್ಲೆಯ ಒಂದು ತಾಲೂಕಿನಲ್ಲಿ ಒಂದು ಹೋಬಳಿಯಲ್ಲಿ ಪ್ರಾಯೋಗಿಕವಾಗಿ ಈ ವಿಧಾನ ಅನುಸರಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ಕ್ರಮ ವಹಿಸಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಣ್ಣಿನ ಫಲವತ್ತತೆ ಕ್ಷೀಣ ಸಮಸ್ಯೆಗೆ ಪರಿಹಾರ:
ರೈತರು ಬೆಳೆಯುತ್ತಿರುವ ಬೆಳೆಗಳಿಗೂ ಹಾಗೂ ರಸಗೊಬ್ಬರದ ಬೇಡಿಕೆಗೂ ವ್ಯತ್ಯಾಸ ಉಂಟಾಗುತ್ತಿದೆ. ಒಂದೇ ರೀತಿಯ ಬೆಳೆ ಬೆಳೆಯುವುದು ಹೆಚ್ಚುತ್ತಿದೆ. ಹಲವು ಬಾರಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರಕುತ್ತಿಲ್ಲ. ಇದೆಲ್ಲಕ್ಕಿಂತ ಮಣ್ಣಿನ ಫಲವತ್ತತೆ ಸಹ ಕ್ಷೀಣಿಸುತ್ತಿದೆ. ಈ ಎಲ್ಲವೂಗಳಿಗೆ ಪರಿಹಾರ ಎಂಬಂತೆ ರಸಗೊಬ್ಬರ ಚೀಟಿ ಸಹಾಯವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ