Health Checkup for Fire Station Staff

ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ

ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ

ಹೃದಯದ ಕಾಳಜಿ ವಹಿಸಿ-ಡಾ.ಕರೇಕಲ್ ಪಾಟೀಲ್

ಮುದ್ದೇಬಿಹಾಳ : ನಾವು ಸೇವಿಸುವ ಆಹಾರ, ದೈಹಿಕವಾಗಿ ಕೈಗೊಳ್ಳುವ ಚಟುವಟಿಕೆಗಳು ಹಾಗೂ ಒತ್ತಡ ಮುಕ್ತ ಬದುಕು ಸಾಗಿಸುವುದರಿಂದ ಹೃದಯಾಘಾತಗಳಂತಹ ಘಟನೆಗಳಿಂದ ದೂರವಿರಬಹುದಾಗಿದೆ ಎಂದು ಕರೇಕಲ್ ಪಾಟೀಲ್ ಮಲ್ಟಿಸ್ಪೆಶಾಲಿಟಿ ಹಾಸ್ಪಿಟಲ್ ಮುಖ್ಯಸ್ಥ ಡಾ.ಬಸನಗೌಡ ಕರೇಕಲ್‌ಪಾಟೀಲ್ ಹೇಳಿದರು.

ಪಟ್ಟಣದ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಹಾಗೂ ಫಕೀರೇಶ್ವರ‌ ಡೈಗ್ನೋಸ್ಟಿಕ್ ಸೆಂಟರ್ ಸಹಯೋಗದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಬುಧವಾರ ಅಗ್ನಿಶಾಮಕ ಠಾಣೆಯಲ್ಲಿ ಏರ್ಪಡಿಸಿದ್ದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಾಗೂ ಹೃದಯ ರೋಗದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಹೃದಯ ರೋಗ ಕಾರಣ ಪರಿಹಾರ ಕುರಿತು ಮಾತನಾಡಿದರು.

ನಾವೆಲ್ಲ ಸಂಪತ್ತಿನ ಹಿಂದೆ ಬಿದ್ದಿದ್ದೇವೆ.ಆದರೆ ಆರೋಗ್ಯವನ್ನು ಸಂಪತ್ತು ಎಂದು ಮರೆತಿದ್ದೇವೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು. ಪತ್ರಕರ್ತರು ರಾಜಕಾರಣಿಗಳ ಸಂಬಂಧ ಸೌಹಾರ್ದಯುತವಾಗಿದ್ದರೆ ಸಮಾಜದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವುದಕ್ಕೆ ಸಾಧ್ಯವಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಧಿಕಾರಿ ಶಶಿಧರ ನೀಲಗಾರ ಮಾತನಾಡಿ, ಅಗ್ನಿಶಾಮಕ ಠಾಣೆಯ ಸಿಬ್ಬಂದಿಯನ್ನು ಜನರು ಆಪತ್ತಿನ ಸಮಯದಲ್ಲಿ ನೆನಪಿಸಿಕೊಳ್ಳುವುದು ಸಹಜ. ಆದರೆ ಪತ್ರಕರ್ತರ ಧ್ವನಿ ಸಂಘಟನೆಯವರು ಸಮಾಜದ ಮುಖ್ಯವಾಹಿನಿಯಲ್ಲಿ ಅಗ್ನಿಶಾಮಕ ಠಾಣೆಯ ನೌಕರರಿಗೂ ಆದ್ಯತೆ ಕೊಟ್ಟಿರುವುದು ಖುಷಿ ತರಿಸಿದೆ ಎಂದರು.

ಐಎನ್‌ಬಿಡಬ್ಲ್ಯೂಎಫ್ ಸಂಘಟನೆ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಂಗೀತಾ ನಾಡಗೌಡ, ಫಕೀರೇಶ್ವರ ಡಯಗ್ನೋಸ್ಟಿಕ್ ಸೆಂಟರ್ ಮುಖ್ಯಸ್ಥ ಡಾ.ಸಿ.ಕೆ.ಶಿವಯೋಗಿಮಠ, ಬಿಜೆಪಿ ನಾಯಕಿ ಕಾಶೀಬಾಯಿ ರಾಂಪೂರ, ಅಧ್ಯಕ್ಷತೆ ವಹಿಸಿದ್ದ ಕಾನಿಪ ಧ್ವನಿ ಜಿಲ್ಲಾಧ್ಯಕ್ಷ ಯೂಸೂಫ ನೇವಾರ, ತಾಲ್ಲೂಕು ಅಧ್ಯಕ್ಷ ಶಂಕರ ಈ. ಹೆಬ್ಬಾಳ ಮಾತನಾಡಿದರು.

ಖಾಸ್ಗತೇಶ್ವರ ಮಠದ ಶರಣೆ ನೀಲಮ್ಮ ವಿರಕ್ತಮಠ ಸಾನಿಧ್ಯ ವಹಿಸಿದ್ದರು. ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ, ಕಾನಿಪ ಧ್ವನಿ ರಾಜ್ಯ ಕಾರ್ಯಾಧ್ಯಕ್ಷ ಇರ್ಫಾನ ಬೀಳಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ, ಸಂಘಟನೆಯ ಉಪಾಧ್ಯಕ್ಷೆ ಭಾರತಿ ನಲವಡೆ, ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ, ಬಸಲಿಂಗಪ್ಪ ಹೂಗಾರ, ಬಸವರಾಜ ಕುಂಟೋಜಿ,ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ, ಹಣಮಂತ ಚವ್ಹಾಣ ಇದ್ದರು. ಪತ್ರಕರ್ತರಾದ ಹಣಮಂತ ನಲವಡೆ, ರವಿ ತೇಲಂಗಿ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕ ಟಿ.ಡಿ.ಲಮಾಣಿ ಕಾರ್ಯಕ್ರಮ ನಿರೂಪಿಸಿದರು.

ಇಸಿಜಿ,ಆರ್.ಬಿ.ಎಸ್ ಆರೋಗ್ಯ ಉಚಿತ ತಪಾಸಣೆ: ಪತ್ರಿಕಾ ದಿನಾಚರಣೆಯ ಅಂಗವಾಗಿ ಪಟ್ಟಣದ ಫಕೀರೇಶ್ವರ ಡಯಗ್ನೋಸ್ಟಿಕ್ ಸೆಂಟರ್‌ನಲ್ಲಿ ಬುಧವಾರ ಬೆಳಗ್ಗೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗೆ ಇಸಿಜಿ, ಆರ್.ಬಿ.ಎಸ್ ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಚಾಲನೆ ನೀಡಿದರು.

ಡಾ.ಸಿ.ಕೆ.ಶಿವಯೋಗಿಮಠ, ಅಗ್ನಿಶಾಮಕ ಠಾಣೆಯ ಪ್ರಭಾರ ಅಧಿಕಾರಿ ನಾಗೇಶ ರಾಠೋಡ, ಅಯ್ಯಪ್ಪ ಸೇವಾ ಸಮಿತಿ ಸದಸ್ಯ ಟಿ.ವಿಜಯಭಾಸ್ಕರ್, ಸಂಘಟನೆಯ ಅಧ್ಯಕ್ಷ ಶಂಕರ ಹೆಬ್ಬಾಳ, ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ, ರವಿ ತೇಲಂಗಿ, ಹಣಮಂತ ನಲವಡೆ ಇದ್ದರು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.